AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Science Gallery: ಬೆಂಗಳೂರಿನ ಸೈನ್ಸ್​ ಗ್ಯಾಲರಿಗೆ ಕಿರಣ್ ಮಜುಂದಾರ್, ರೋಹಿಣಿ ನಿಲೇಕಣಿ, ಕ್ರಿಸ್ ಗೋಪಾಲಕೃಷ್ಣನ್ ಜಂಟಿಯಾಗಿ ರೂ. 51 ಕೋಟಿ ಧನಸಹಾಯ

Bengaluru News: ಸೈನ್ಸ್​ ಗ್ಯಾಲರಿಯ ಕಟ್ಟಡ ನಿರ್ಮಾಣಕ್ಕೆ ಖ್ಯಾತ ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, ರೋಹಿಣಿ ನಿಲೇಕಣಿ ಮತ್ತು ಕ್ರಿಸ್ ಗೋಪಾಲಕೃಷ್ಣನ್ ಅವರು ಜಂಟಿಯಾಗಿ 51 ಕೋಟಿ ರೂ. ಧನಸಹಾಯ ನೀಡಿದ್ದಾರೆ.

Science Gallery: ಬೆಂಗಳೂರಿನ ಸೈನ್ಸ್​ ಗ್ಯಾಲರಿಗೆ ಕಿರಣ್ ಮಜುಂದಾರ್, ರೋಹಿಣಿ ನಿಲೇಕಣಿ, ಕ್ರಿಸ್ ಗೋಪಾಲಕೃಷ್ಣನ್ ಜಂಟಿಯಾಗಿ ರೂ. 51 ಕೋಟಿ ಧನಸಹಾಯ
ಕಿರಣ್ ಮಜುಂದಾರ್ ಶಾ, ರೋಹಿಣಿ ನಿಲೇಕಣಿ ಮತ್ತು ಕ್ರಿಸ್ ಗೋಪಾಲಕೃಷ್ಣನ್ Image Credit source: Hindustan Times
TV9 Web
| Edited By: |

Updated on:Nov 15, 2022 | 2:59 PM

Share

ಬೆಂಗಳೂರು: ಬೆಂಗಳೂರಿನ ಸೈನ್ಸ್​ ಗ್ಯಾಲರಿಯ (Science Gallery) ಕಟ್ಟಡ ನಿರ್ಮಾಣಕ್ಕೆ ಖ್ಯಾತ ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ (Kiran Mazumdar Shaw), ರೋಹಿಣಿ ನಿಲೇಕಣಿ (Rohini Nilekani) ಮತ್ತು ಕ್ರಿಸ್ ಗೋಪಾಲಕೃಷ್ಣನ್ (Kris Gopalakrishnan) ಅವರು ಜಂಟಿಯಾಗಿ 51 ಕೋಟಿ ರೂ. ಧನಸಹಾಯ ನೀಡಿದ್ದಾರೆ. ಈ ಸೈನ್ಸ್​ ಗ್ಯಾಲರಿಯಲ್ಲಿ ಸಂಶೋಧನೆ ಆಧಾರಿತ ಕಾರ್ಯಗಳು ನಡೆಯಲಿವೆ. ಇದು ಮುಂದಿನ ವರ್ಷದಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಎಂದು ಸೈನ್ಸ್​ ಗ್ಯಾಲರಿಯ ಸಂಸ್ಥಾಪಕ ನಿರ್ದೇಶಕಿ ಡಾ. ಜಾಹ್ನವಿ ಫಾಲ್ಕೆ ಹೇಳಿದ್ದಾರೆ.

ಲಾಭರಹಿತ ಸಾರ್ವಜನಿಕ ಸಂಸ್ಥೆಯಾದ ಸೈನ್ಸ್ ಗ್ಯಾಲರಿ ಬೆಂಗಳೂರು (SGB)ಗೆ ಜಂಟಿಯಾಗಿ ಈ ಮೂವರು 51 ಕೋಟಿ ರೂ. ಕೊಡುಗೆ ನೀಡಿದ್ದಾರೆ. ಈ ನಿಧಿಯು ಕರ್ನಾಟಕ ಸರ್ಕಾರವು ಮಾಡಿದ ಬಂಡವಾಳ ಹೂಡಿಕೆಗೆ ಸೇರಿಕೊಳ್ಳುತ್ತದೆ. ಈ ಕಟ್ಟಡದಲ್ಲಿ ನೈಸರ್ಗಿಕ ವಿಜ್ಞಾನ ಪ್ರಯೋಗಾಲಯ, ಆಹಾರ ಪ್ರಯೋಗಾಲಯ, ವಸ್ತು ಪ್ರಯೋಗಾಲಯ, ನ್ಯೂ ಮೀಡಿಯಾ ಪ್ರಯೋಗಾಲಯ ಮುಂತಾದ ವ್ಯವಸ್ಥೆಗಳು ಇರುತ್ತವೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪ್ರಿಯಕರನ ಜೊತೆ ಸೇರಿ ಕಟ್ಟಿಕೊಂಡ ಗಂಡನನ್ನೇ ಕೊಂದಿದ್ದ ಪತ್ನಿ ಪೊಲೀಸ್ ಬಲೆಗೆ

ಬಯೋಕಾನ್ ಆ್ಯಂಡ್ ಬಯೋಕಾನ್ ಬಯಾಲಜೀಸ್​ ಮುಖ್ಯಸ್ಥರಾದ ಕಿರಣ್ ಮಜುಂದಾರ್ ಶಾ, ಎಕ್‌ಸ್ಟೆಪ್ ಫೌಂಡೇಶನ್‌ನ ಸಹ-ಸ್ಥಾಪಕರು ಮತ್ತು ನಿರ್ದೇಶಕರಾದ ರೋಹಿಣಿ ನಿಲೇಕಣಿ, ಆಕ್ಸಿಲರ್ ವೆಂಚರ್ಸ್‌ನ ಅಧ್ಯಕ್ಷರು ಮತ್ತು ಇನ್ಫೋಸಿಸ್‌ನ ಸಹ-ಸಂಸ್ಥಾಪಕರಾದ ಕ್ರಿಸ್ ಗೋಪಾಲಕೃಷ್ಣನ್ ಎಲ್ಲರೂ ಸೈನ್ಸ್​ ಗ್ಯಾಲರಿಯ ನಿರ್ದೇಶಕರ ಮಂಡಳಿಯ ಸದಸ್ಯರಾಗಿದ್ದಾರೆ.

ಇದು ಅಂತಾರಾಷ್ಟ್ರೀಯ ನೆಟ್‌ವರ್ಕ್‌ನಲ್ಲಿ ಯಾವುದೇ ಸೈನ್ಸ್ ಗ್ಯಾಲರಿಗೆ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯು ಇದುವರೆಗೂ ನೀಡಿರುವ ಅತ್ಯಧಿಕ ಕೊಡುಗೆಯಾಗಿದೆ ಎನ್ನಲಾಗಿದೆ. ಕರ್ನಾಟಕ ಸರ್ಕಾರವು ಈ ಸೈನ್ಸ್​ ಗ್ಯಾಲರಿಯ ನಿರ್ಮಾಣಕ್ಕಾಗಿ ಭೂಮಿ ಮತ್ತು ಆರಂಭಿಕ ಬಂಡವಾಳವನ್ನು ಒದಗಿಸಿದೆ. ಪ್ರತಿ ವರ್ಷ ಅದರ ಕಾರ್ಯಾಚರಣೆಯ ವೆಚ್ಚದ ಮೂರನೇ 1 ಭಾಗವನ್ನು ಭರಿಸುವ ಮೂಲಕ ಸಂಸ್ಥೆಯನ್ನು ಬೆಂಬಲಿಸಲು ಬದ್ಧವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Tue, 15 November 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು