AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Science Gallery: ಬೆಂಗಳೂರಿನ ಸೈನ್ಸ್​ ಗ್ಯಾಲರಿಗೆ ಕಿರಣ್ ಮಜುಂದಾರ್, ರೋಹಿಣಿ ನಿಲೇಕಣಿ, ಕ್ರಿಸ್ ಗೋಪಾಲಕೃಷ್ಣನ್ ಜಂಟಿಯಾಗಿ ರೂ. 51 ಕೋಟಿ ಧನಸಹಾಯ

Bengaluru News: ಸೈನ್ಸ್​ ಗ್ಯಾಲರಿಯ ಕಟ್ಟಡ ನಿರ್ಮಾಣಕ್ಕೆ ಖ್ಯಾತ ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, ರೋಹಿಣಿ ನಿಲೇಕಣಿ ಮತ್ತು ಕ್ರಿಸ್ ಗೋಪಾಲಕೃಷ್ಣನ್ ಅವರು ಜಂಟಿಯಾಗಿ 51 ಕೋಟಿ ರೂ. ಧನಸಹಾಯ ನೀಡಿದ್ದಾರೆ.

Science Gallery: ಬೆಂಗಳೂರಿನ ಸೈನ್ಸ್​ ಗ್ಯಾಲರಿಗೆ ಕಿರಣ್ ಮಜುಂದಾರ್, ರೋಹಿಣಿ ನಿಲೇಕಣಿ, ಕ್ರಿಸ್ ಗೋಪಾಲಕೃಷ್ಣನ್ ಜಂಟಿಯಾಗಿ ರೂ. 51 ಕೋಟಿ ಧನಸಹಾಯ
ಕಿರಣ್ ಮಜುಂದಾರ್ ಶಾ, ರೋಹಿಣಿ ನಿಲೇಕಣಿ ಮತ್ತು ಕ್ರಿಸ್ ಗೋಪಾಲಕೃಷ್ಣನ್ Image Credit source: Hindustan Times
TV9 Web
| Edited By: |

Updated on:Nov 15, 2022 | 2:59 PM

Share

ಬೆಂಗಳೂರು: ಬೆಂಗಳೂರಿನ ಸೈನ್ಸ್​ ಗ್ಯಾಲರಿಯ (Science Gallery) ಕಟ್ಟಡ ನಿರ್ಮಾಣಕ್ಕೆ ಖ್ಯಾತ ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ (Kiran Mazumdar Shaw), ರೋಹಿಣಿ ನಿಲೇಕಣಿ (Rohini Nilekani) ಮತ್ತು ಕ್ರಿಸ್ ಗೋಪಾಲಕೃಷ್ಣನ್ (Kris Gopalakrishnan) ಅವರು ಜಂಟಿಯಾಗಿ 51 ಕೋಟಿ ರೂ. ಧನಸಹಾಯ ನೀಡಿದ್ದಾರೆ. ಈ ಸೈನ್ಸ್​ ಗ್ಯಾಲರಿಯಲ್ಲಿ ಸಂಶೋಧನೆ ಆಧಾರಿತ ಕಾರ್ಯಗಳು ನಡೆಯಲಿವೆ. ಇದು ಮುಂದಿನ ವರ್ಷದಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಎಂದು ಸೈನ್ಸ್​ ಗ್ಯಾಲರಿಯ ಸಂಸ್ಥಾಪಕ ನಿರ್ದೇಶಕಿ ಡಾ. ಜಾಹ್ನವಿ ಫಾಲ್ಕೆ ಹೇಳಿದ್ದಾರೆ.

ಲಾಭರಹಿತ ಸಾರ್ವಜನಿಕ ಸಂಸ್ಥೆಯಾದ ಸೈನ್ಸ್ ಗ್ಯಾಲರಿ ಬೆಂಗಳೂರು (SGB)ಗೆ ಜಂಟಿಯಾಗಿ ಈ ಮೂವರು 51 ಕೋಟಿ ರೂ. ಕೊಡುಗೆ ನೀಡಿದ್ದಾರೆ. ಈ ನಿಧಿಯು ಕರ್ನಾಟಕ ಸರ್ಕಾರವು ಮಾಡಿದ ಬಂಡವಾಳ ಹೂಡಿಕೆಗೆ ಸೇರಿಕೊಳ್ಳುತ್ತದೆ. ಈ ಕಟ್ಟಡದಲ್ಲಿ ನೈಸರ್ಗಿಕ ವಿಜ್ಞಾನ ಪ್ರಯೋಗಾಲಯ, ಆಹಾರ ಪ್ರಯೋಗಾಲಯ, ವಸ್ತು ಪ್ರಯೋಗಾಲಯ, ನ್ಯೂ ಮೀಡಿಯಾ ಪ್ರಯೋಗಾಲಯ ಮುಂತಾದ ವ್ಯವಸ್ಥೆಗಳು ಇರುತ್ತವೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪ್ರಿಯಕರನ ಜೊತೆ ಸೇರಿ ಕಟ್ಟಿಕೊಂಡ ಗಂಡನನ್ನೇ ಕೊಂದಿದ್ದ ಪತ್ನಿ ಪೊಲೀಸ್ ಬಲೆಗೆ

ಬಯೋಕಾನ್ ಆ್ಯಂಡ್ ಬಯೋಕಾನ್ ಬಯಾಲಜೀಸ್​ ಮುಖ್ಯಸ್ಥರಾದ ಕಿರಣ್ ಮಜುಂದಾರ್ ಶಾ, ಎಕ್‌ಸ್ಟೆಪ್ ಫೌಂಡೇಶನ್‌ನ ಸಹ-ಸ್ಥಾಪಕರು ಮತ್ತು ನಿರ್ದೇಶಕರಾದ ರೋಹಿಣಿ ನಿಲೇಕಣಿ, ಆಕ್ಸಿಲರ್ ವೆಂಚರ್ಸ್‌ನ ಅಧ್ಯಕ್ಷರು ಮತ್ತು ಇನ್ಫೋಸಿಸ್‌ನ ಸಹ-ಸಂಸ್ಥಾಪಕರಾದ ಕ್ರಿಸ್ ಗೋಪಾಲಕೃಷ್ಣನ್ ಎಲ್ಲರೂ ಸೈನ್ಸ್​ ಗ್ಯಾಲರಿಯ ನಿರ್ದೇಶಕರ ಮಂಡಳಿಯ ಸದಸ್ಯರಾಗಿದ್ದಾರೆ.

ಇದು ಅಂತಾರಾಷ್ಟ್ರೀಯ ನೆಟ್‌ವರ್ಕ್‌ನಲ್ಲಿ ಯಾವುದೇ ಸೈನ್ಸ್ ಗ್ಯಾಲರಿಗೆ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯು ಇದುವರೆಗೂ ನೀಡಿರುವ ಅತ್ಯಧಿಕ ಕೊಡುಗೆಯಾಗಿದೆ ಎನ್ನಲಾಗಿದೆ. ಕರ್ನಾಟಕ ಸರ್ಕಾರವು ಈ ಸೈನ್ಸ್​ ಗ್ಯಾಲರಿಯ ನಿರ್ಮಾಣಕ್ಕಾಗಿ ಭೂಮಿ ಮತ್ತು ಆರಂಭಿಕ ಬಂಡವಾಳವನ್ನು ಒದಗಿಸಿದೆ. ಪ್ರತಿ ವರ್ಷ ಅದರ ಕಾರ್ಯಾಚರಣೆಯ ವೆಚ್ಚದ ಮೂರನೇ 1 ಭಾಗವನ್ನು ಭರಿಸುವ ಮೂಲಕ ಸಂಸ್ಥೆಯನ್ನು ಬೆಂಬಲಿಸಲು ಬದ್ಧವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Tue, 15 November 22

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ