AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ; ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಕಾರ್ಯಕ್ರಮಕ್ಕೆ ಗೈರು

ಹಾನಗಲ್ ಉಪಚುನಾವಣಾ ಪ್ರಚಾರದಲ್ಲಿರುವ ಕಾರಣ ಜಯಂತ್ಯೋತ್ಸವ ಉದ್ಘಾಟಿಸಬೇಕಿದ್ದ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಕಾರ್ಯ‌ಕ್ರಮಕ್ಕೆ ಆಗಮಿಸಲು ಸಾಧ್ಯವಾಗಿಲ್ಲ. ಕಾರ್ಯಕ್ರಮದಲ್ಲಿ ಕೂಡಲ ಸಂಗಮ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ ಮಾತ್ರ ಹಾಜರಾಗಿದ್ದರು.

ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ; ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಕಾರ್ಯಕ್ರಮಕ್ಕೆ ಗೈರು
ಸುನಿಲ್ ಕುಮಾರ್
TV9 Web
| Edited By: |

Updated on:Oct 23, 2021 | 3:04 PM

Share

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಇಂದು (ಅಕ್ಟೋಬರ್ 23) ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯೋತ್ಸವ ಆಚರಣೆ ಮಾಡಲಾಗಿದೆ. ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜನೆ ಮಾಡಲಾದ ಈ ಕಾರ್ಯಕ್ರಮಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನಿಲ್ ಕುಮಾರ್ ಮತ್ತು ಅಧ್ಯಕ್ಷತೆ ವಹಿಸಬೇಕಿದ್ದ ಶಾಸಕ ಉದಯ ಗರುಡಾಚಾರ್ ಗೈರಾಗಿದ್ದಾರೆ.

ಹಾನಗಲ್ ಉಪಚುನಾವಣಾ ಪ್ರಚಾರದಲ್ಲಿರುವ ಕಾರಣ ಜಯಂತ್ಯೋತ್ಸವ ಉದ್ಘಾಟಿಸಬೇಕಿದ್ದ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಕಾರ್ಯ‌ಕ್ರಮಕ್ಕೆ ಆಗಮಿಸಲು ಸಾಧ್ಯವಾಗಿಲ್ಲ. ಕಾರ್ಯಕ್ರಮದಲ್ಲಿ ಕೂಡಲ ಸಂಗಮ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ ಮಾತ್ರ ಹಾಜರಾಗಿದ್ದರು. ಮೃತ್ಯುಂಜಯ ಸ್ವಾಮೀಜಿ ಚನ್ನಮ್ಮ ಜಯಂತಿ ಉದ್ಘಾಟಿಸಿದರು ಈ ವೇಳೆ ವೇಳೆ ಲಿಂಗಾಯತ ಪಂಚಮಸಾಲಿ ವೇದಿಕೆಯ ಪದಾಧಿಕಾರಿಗಳನ್ನು ವೇದಿಕೆಗೆ ಆಹ್ವಾನಿಸಿದ್ದಾರೆ.

ಚೆನ್ನಮ್ಮ ಪ್ರತಿಮೆಗೆ ಪ್ರಧಾನಿ ಮಾಲಾರ್ಪಣೆ ಮಾಡಬೇಕು: ಜಯಮೃತ್ಯುಂಜಯ ಸ್ವಾಮಿಜಿ ಮುಂದಿನ ವರ್ಷ ದೆಹಲಿಯಲ್ಲಿರುವ ಚೆನ್ನಮ್ಮ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಮಾಲಾರ್ಪಣೆ ಮಾಡಲಿ. ಆಗ ಅಲ್ಲಿನ ಜನರಿಗೆ ರಾಣಿ ಚೆನ್ನಮ್ಮ ಬಗ್ಗೆ ತಿಳಿಯುತ್ತದೆ. ಮಹಿಳಾ ಸೌಧ ಕಟ್ಟಿ ರಾಣಿ ಚೆನ್ನಮ್ಮ ಹೆಸರು ಇಡಬೇಕು ಎಂದು ಬೆಂಗಳೂರಿನಲ್ಲಿ ಜಯಮೃತ್ಯುಂಜಯ ಸ್ವಾಮಿಜಿ ಆಗ್ರಹಿಸಿದ್ದಾರೆ.

ಚೆನ್ನಮ್ಮನ ಹೋರಾಟದಿಂದ ಇಂದು ಸ್ವಾತಂತ್ರ್ಯ ಸಿಕ್ಕಿದೆ. ಹೀಗಾಗಿಯೇ ಇಂದು ಸಂಸದರು, ಶಾಸಕರು ಇದ್ದಾರೆ. ಆದರೆ ಇಂದು ಬೆಂಗಳೂರಿನ ಸಂಸದರು, ಶಾಸಕರು ಯಾರೂ ಕಾರ್ಯಕ್ರಮಕ್ಕೆ ಬಂದಿಲ್ಲ. ಆರೋಗ್ಯ ಸರಿಯಿಲ್ಲದವರು ಮನೆಯಲ್ಲಿ ಮಲಗಲಿ. ಆರೋಗ್ಯ ಸರಿ ಇದ್ದವರಾದರೂ ಬರಬೇಕಿತ್ತು. ಚೆನ್ನಮ್ಮ ಕೇವಲ ಉತ್ತರ ಕರ್ನಾಟಕಕ್ಕೆ ಸೀಮಿತವಲ್ಲ ಎಂದು ಜನಪ್ರತಿನಿಧಿಗಳ ವಿರುದ್ಧ ಜಯಮೃತ್ಯುಂಜಯಶ್ರೀ ಸ್ವಾಮೀಜಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬಾಬಾಬುಡನ್​ಗಿರಿ ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕ: ಹೈಕೋರ್ಟ್ ನಿರ್ದೇಶನ ಸ್ವಾಗತಿಸಿದ ಸುನಿಲ್​ಕುಮಾರ್

ಉಡುಪಿಯಲ್ಲಿ ಕೊರೊನಾ ಇಳಿಕೆ ಆಗಿಲ್ಲ; ಸೋಮವಾರದಿಂದ ಶಾಲೆ ತೆರೆಯುವುದಿಲ್ಲ: ಸಚಿವ ಸುನಿಲ್ ಕುಮಾರ್

Published On - 2:37 pm, Sat, 23 October 21

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್