Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಷ್ಕರದ ಎಚ್ಚರಿಕೆ ನೀಡಿದ ಕೆಎಂಎಫ್ ನೌಕರರು: ವೇತನ ಬಾಕಿ ಬಿಡುಗಡೆಗೆ ಆಗ್ರಹ

ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ನೌಕರರು ಬಾಕಿ ವೇತನ ಮತ್ತು ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸುತ್ತಿದ್ದಾರೆ. ಫೆಬ್ರವರಿಯಿಂದ ಮುಷ್ಕರದ ಎಚ್ಚರಿಕೆ ನೀಡಿದ್ದಾರೆ. 7ನೇ ವೇತನ ಆಯೋಗದ ಶಿಫಾರಸುಗಳನ್ನು ಸಂಪೂರ್ಣವಾಗಿ ಜಾರಿಗೆ ತರಲು ಒತ್ತಾಯಿಸಲಾಗಿದೆ. ಒಂದು ವೇಳೆ ಮುಷ್ಕರ ನಡೆದಲ್ಲಿ ರಾಜ್ಯದಲ್ಲಿ ನಂದಿನಿ ಹಾಲು ಪೂರೈಕೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಮುಷ್ಕರದ ಎಚ್ಚರಿಕೆ ನೀಡಿದ ಕೆಎಂಎಫ್ ನೌಕರರು: ವೇತನ ಬಾಕಿ ಬಿಡುಗಡೆಗೆ ಆಗ್ರಹ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Jan 29, 2025 | 7:54 AM

ಬೆಂಗಳೂರು, ಜನವರಿ 29: ಬಾಕಿ ವೇತನ ಬಿಡುಗಡೆಯೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ನೌಕರರು ಆಗ್ರಹಿಸಿದ್ದಾರೆ. ಬೇಡಿಕೆಗಳನ್ನು ಈಡೇರಿಸದಿದ್ದರೆ ಫೆಬ್ರವರಿಯಿಂದ ಮುಷ್ಕರ ನಡೆಸುವುದಾಗಿ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನೌಕರರ ಸಂಘವು ಈಗಾಗಲೇ ಆಡಳಿತ ಮಂಡಳಿಗೆ ಮನವಿ ಪತ್ರ ಸಲ್ಲಿಸಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸಲು ಒಂದು ವಾರ ಕಾಲಾವಕಾಶ ನೀಡಿದೆ. ಇದು ಜನವರಿ 31ಕ್ಕೆ ಕೊನೆಗೊಳ್ಳಲಿದೆ. ಅಷ್ಟರೊಳಗೆ ಬೆಡಿಕೆಗಳು ಈಡೇರದಿದ್ದರೆ ಮುಷ್ಕರ ನಡೆಸಲಾಗುವುದು ಎಂದು ನೌಕರರ ಸಂಘ ಎಚ್ಚರಿಕೆ ನೀಡಿದೆ.

7ನೇ ವೇತನ ಆಯೋಗದ ಶಿಫಾರಸಿನಂತೆ ನೀಡಬೇಕಿರುವ ಬಾಕಿ ಉಳಿದಿರುವ ವೇತನ ಶೀಘ್ರವೇ ಮಂಜೂರು ಮಾಡಬೇಕೆಂದು ಕೆಎಂಎಫ್ ನೌಕರರ ಸಂಘದ ಅಧ್ಯಕ್ಷ ಗೋವಿಂದಗೌಡ ಆಗ್ರಹಿಸಿದ್ದಾರೆ. 7ನೇ ವೇತನ ಆಯೋಗದ ಶಿಫಾರಸಿನ ಪ್ರಕಾರನ ಶೇ 25 ರ ವೇತನ ಹೆಚ್ಚಳಕ್ಕೆ ಸರ್ಕಾರ ಒಪ್ಪಿಗೆ ನೀಡಿತ್ತು. ಆದರೆ ಈ ಪೈಕಿ ಶೇ 17 ರಷ್ಟು ಮಾತ್ರ ಹೆಚ್ಚಳ ಮಾಡಿದೆ. ಶೇ 8 ರಷ್ಟು ವೇತನ ಹೆಚ್ಚಳ, ಬಿಡುಗಡೆ ಬಾಕಿ ಇದೆ. ಅವುಗಳನ್ನು ಈಡೇರಿಸಬೇಕು ಎಂದು ಗೋವಿಂದಗೌಡ ಹೇಳಿದ್ದಾರೆ. ಜತೆಹೆ, ಬೇಡಿಕೆಗಳು ಈಡೇರುವ ಭರವಸೆ ಇದೆ ಎಂದೂ ಹೇಳಿದ್ದಾರೆ.

ಸಂಘವು ರಾಜ್ಯಾದ್ಯಂತ ಸುಮಾರು 7,000 ಉದ್ಯೋಗಿಗಳನ್ನು ಒಳಗೊಂಡಿದೆ, ಅವರಲ್ಲಿ 1,400 ಉನ್ನತ ದರ್ಜೆಯ ಸಿಬ್ಬಂದಿ ಇದ್ದಾರೆ. ಇದರ ಆಧಾರದಲ್ಲಿ ಲೆಕ್ಕಹಾಕಿದರೆ, ವೇತನ ಹೆಚ್ಚಳ ಜಾರಿಗೆ ಬಂದರೆ ಅದಕ್ಕಾಗಿ ಸರ್ಕಾರ ತಿಂಗಳಿಗೆ 3 ಕೋಟಿ ರೂ. ವ್ಯಯಿಸಬೇಕಾಗುತ್ತದೆ.

ಸದ್ಯದ ಮಟ್ಟಿಗೆ, ವೇತನ ಬಾಕಿಯ ಮೊತ್ತದ ಬಿಡುಗಡೆ ಮಾಡಲು ಸರ್ಕಾರವು ಇನ್ನೂ ಅನುಮತಿ ನೀಡಿಲ್ಲ ಎಂದು ಆಡಳಿತ ಮಂಡಳಿ ಭಾವಿಸಿದೆ ಎಂದು ಕೆಎಂಎಫ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೆಎಂಎಫ್ ದಿನಕ್ಕೆ ಸುಮಾರು 1 ಲಕ್ಷ ಲೀಟರ್ ಹಾಲನ್ನು ಗ್ರಾಹಕರಿಗೆ ಪೂರೈಸುತ್ತಿದ್ದು, 15 ಒಕ್ಕೂಟಗಳ ಮೂಲಕ ಹಾಲು ಸಂಗ್ರಹಿಸುತ್ತಿದೆ.

ಇದನ್ನೂ ಓದಿ: ನಾನ್​ ವೆಜ್​ ಪ್ರಿಯರ ಗಮನಕ್ಕೆ: ಜ 30ರಂದು ಬೆಂಗಳೂರಿನಲ್ಲಿ ಮಾಂಸ ಸಿಗಲ್ಲ, ಕಾರಣವೇನು?

ಇತ್ತೀಚೆಗಷ್ಟೇ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್​ಆರ್​​ಟಿಸಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು. ಕೊನೆಗೂ ಸಭೆ ನಡೆಸಿ ಕೆಎಸ್​ಆರ್​​ಟಿಸಿ ನೌಕರರ ಮನವೊಲಿಸಿ ಮುಷ್ಕರದ ನಿರ್ಧಾರ ಹಿಂಪಡೆಯುವಂತೆ ಮಾಡುವಲ್ಲಿ ಸರ್ಕಾರ ಯಶಸ್ವಿಯಾಗಿತ್ತು. ಇದೀಗ ಕೆಎಂಎಫ್​ ನೌಕರರ ಸರದಿ. ಒಂದು ವೇಳೆ ಕೆಎಂಎಫ್​ ನೌಕರರ ಬೇಡಿಕೆ ಈಡೇರಿಸುವಲ್ಲಿ ಅಥವಾ ಅವರ ಮನವೊಲಿಸಿ ಮುಷ್ಕರ ಹಿಂಪಡೆಯುವಂತೆ ಮಾಡುವಲ್ಲಿ ಸರ್ಕಾರ ವಿಫಲವಾದಲ್ಲಿ ನಂದಿನಿ ಹಾಲು ಪೂರೈಕೆ ಮೇಲೆಯೂ ಪರಿಣಾಮ ಬೀರುವ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ