AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸಮಯದ ಸ್ಟೀರಾಯ್ಡ್ ಬಳಕೆಯಿಂದ ಯುವ ಜನರಲ್ಲಿ ಹೆಚ್ಚಾಯ್ತು ಹೊಸ ಸಮಸ್ಯೆ

ಇತ್ತೀಚಿಗೆ ಯುವ ಸಮೂಹ ಸೊಂಟ ನೋವು, ಮೊಣಕಾಲು ನೋವು ಅಂತ ಆಸ್ಪತ್ರೆಯತ್ತ ಮುಖ ಮಾಡುತ್ತಿರುವುದು ಹೆಚ್ಚಾಗಿದೆ. ಇದಕ್ಕೆ, ಕೋವಿಡ್ ಸಮಯದಲ್ಲಿ ತೆಗೆದುಕೊಂಡ ಅತಿಯಾದ ಸ್ಟೀರಾಯ್ಡ್ ಕಾರಣ ಎಂಬ ಆತಂಕಕಾರಿ ವಿಚಾರ ಬಹಿರಂಗವಾಗಿದೆ. ಹಾಗಾದರೆ ಸಮಸ್ಯೆಯಿಂದ ಬಳಲುತ್ತಿರುವವರು ಏನು ಮಾಡಬೇಕು? ವೈದ್ಯರು ನೀಡಿದ ಎಚ್ಚರಿಕೆ ಏನು? ಇಲ್ಲಿದೆ ಮಾಹಿತಿ.

ಕೋವಿಡ್ ಸಮಯದ ಸ್ಟೀರಾಯ್ಡ್ ಬಳಕೆಯಿಂದ ಯುವ ಜನರಲ್ಲಿ ಹೆಚ್ಚಾಯ್ತು ಹೊಸ ಸಮಸ್ಯೆ
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on: Jan 20, 2025 | 7:49 AM

Share

ಬೆಂಗಳೂರು, ಜನವರಿ 20: ಕೊರೊನಾ ವೈರಸ್ ಹೆಸರು ಕೇಳಿದರೆ ಈಗಲೂ ಜನ ಆತಂಕಕ್ಕೊಳಗಾಗುತ್ತಾರೆ. ಅಷ್ಟರ ಮಟ್ಟಿಗೆ ಜನರ ಜೀವನದ ಮೇಲೆ ಪರಿಣಾಮ ಬೀರಿದ್ದ ಕೋವಿಡ್ ಪರಿಣಾಮ ಈಗಲೂ ಯುವ ಸಮೂಹದ ಮೇಲೆ ಕಂಡುಬರುತ್ತಿದೆ. ಯುವ ಜನರಲ್ಲಿ ಮೊಣಕಾಲು ಸೆಳೆತ, ಸ್ಪೈನ್ ಸವೆಯುವುದಕ್ಕೆ ಕೋವಿಡ್ ಕೂಡ ಪರೋಕ್ಷ ಕಾರಣವಾಗಿದೆ. ಕೊರೊನಾ ಸಮಯದಲ್ಲಿ ಚಿಕಿತ್ಸೆಗಾಗಿ ತೆಗೆದುಕೊಂಡ ಅತಿಯಾದ ಸ್ಟೀರಾಯ್ಡ್​​ನಿಂದ ಯುವಕರಲ್ಲಿ ಕೂಡ ಇದೀಗ ಸೊಂಟ ನೋವು, ಮಂಡಿ ನೋವು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಬಹಿರಂಗವಾಗಿದೆ.

ಕೋವಿಡ್ ಸೋಂಕಿನ ಸಂದರ್ಭದಲ್ಲಿ ಜೀವ ಉಳಿಸಲು, ವೈರಸ್ ವಿರುದ್ಧ ಹೋರಾಡಲು ಅತಿಯಾದ ಪ್ರಮಾಣದಲ್ಲಿ ಸ್ಟೀರಾಯ್ಡ್ ಬಳಕೆ ಮಾಡಲಾಗಿತ್ತು. ಇದೇ ಅದುವೇ ಜನರ ಆರೋಗ್ಯಕ್ಕೆ ಕುತ್ತು ತರುತ್ತಿದೆ. ಕಳೆದ ಕೆಲವು ದಿನಗಳಿಂದ ಯುವಕರಲ್ಲಿ ಹಾಗೂ ವಯೋವೃದ್ಧರಲ್ಲಿ ಮೊಣಕಾಲು ನೋವು ಸೇರಿದಂತೆ ಕಾಲು ನೋವು, ಸೊಂಟ ನೋವು, ಬೆನ್ನು ನೋವು ಹೆಚ್ಚಾಗಿ ಕಂಡುಬರುತ್ತಿದೆ. ಅದರಲ್ಲೂ ಕೊವಿಡ್ ಬಳಿಕ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಯುವಕರಲ್ಲಿಯೂ ಮೊಣಕಾಲು, ಸೊಂಟ ನೋವು ಹೆಚ್ಚಾಗುತ್ತಿದೆ. ಅತಿಯಾದ ಸ್ಟೀರಾಯ್ಡ್ ಬಳಕೆಯೇ ಇದಕ್ಕೆ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ.

ಕಾಲು, ಸೊಂಟ, ಬೆನ್ನು ನೋವಿದ್ದರೆ ನಿರ್ಲಕ್ಷ್ಯ ಬೇಡ: ವೈದ್ಯರ ಎಚ್ಚರಿಕೆ

ಕೊವಿಡ್ ಸಮಯದಲ್ಲಿ ಜೀವ ಉಳಿಸಲು ಸಹಾಯ ಮಾಡಿದ್ದ ಸ್ಟೀರಾಯ್ಡ್ ಈಗ ಜನರ ಆರೋಗ್ಯದ ಮೇಲೆ ಅಡ್ಡಪರಿಣಾಮ ಬೀರುತ್ತಿದೆ. ಅತಿಯಾದ ಸ್ಟೀರಾಯ್ಡ್ ಬಳಕೆಯಿಂದಾಗಿ ಕಾಲು, ಸೊಂಟ ಹಾಗೂ ಬೆನ್ನು ನೋವು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಯುವಕರು ಕಾಲು, ಸೊಂಟ, ಬೆನ್ನು ನೋವುಗಳ ನಿರ್ಲಕ್ಷ್ಯ ಮಾಡದಂತೆ ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಅತಿಯಾದ ಸ್ಟೀರಾಯ್ಡ್ ಬಳಕೆ ಅಡ್ಡಪರಿಣಾಮಗಳೇನು?

ವಯಸ್ಸಾದವರಲ್ಲಾದರೆ ಮಂಡಿ ನೋವು, ಸೊಂಟ ನೋವು ಸಾಮಾನ್ಯ. ಆದರೆ ಈಗ 25ರ ಯುವಕ, ಯುವತಿಯರು ಕೂಡ ಸೊಂಟ ನೋವು, ಮಂಡಿ ನೋವು ಎಂದು ಆಸ್ಪತ್ರೆ ಮೆಟ್ಟಿಲೇರುತ್ತಿದ್ದಾರೆ. ವೈದ್ಯರು ಇದರ ಕಾರಣ ಹುಡುಕಿ ಹೊರಟಾಗ ಅತಿಯಾದ ಸ್ಟೀರಾಯ್ಡ್ ಕಾರಣ ಎಂಬುದು ಪತ್ತೆಯಾಗಿದೆ. ಅತಿಯಾದ ಸ್ಟೀರಾಯ್ಡ್ ಸೇವನೆ ಯುವಕರಲ್ಲಿ ಕಾರ್ಟಿಲೇಜ್ ನಷ್ಟಕ್ಕೆ ಕಾರಣವಾಗ್ತಿದೆ. ಅಲ್ಲದೇ ಸಂಧಿವಾತಕ್ಕೆ ಎಡೆ ಮಾಡಿಕೊಡ್ತಿದೆ. ದೇಹದ ಮೂಳೆ, ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಅನ್ನು ದುರ್ಬಲಗೊಳಿಸಿದೆ. ಸ್ಟೀರಾಯ್ಡ್ ಔಷಧಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ತೆಗೆದುಕೊಂಡ ಕಾರಣ ದೇಹದ ಮೂಳೆ ಬಲ ಕುಸಿದಿದೆ. ಇದರಿಂದ ಸೊಂಟ, ಮಂಡಿ ನೋವುಗಳು ಕಾಣಿಸಿಕೊಳ್ತಿದೆ. ವಿಕ್ಟೋರಿಯಾ ಆಸ್ಪತ್ರೆಯ ಆರ್ಥೋಪೆಡಿಕ್ ವಿಭಾಗಕ್ಕೆ ವೃದ್ಧರಷ್ಟೇ ಸಂಖ್ಯೆಯಲ್ಲಿ ಸದ್ಯ ಯುವ ಸಮೂಹ ಕೂಡ ಚಿಕಿತ್ಸೆಗಾಗಿ ಬರುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಈ ಬಗ್ಗೆ ಬೆಂಗಳೂರು ಮೆಡಿಕಲ್ ಕಾಲೇಜು ಡೀನ್ ಡಾ. ರಮೇಶ್ ಕೃಷ್ಣ ಕೂಡ ಮಾಹಿತಿ ನೀಡಿದ್ದಾರೆ. ಅತಿಯಾದ ಸ್ಟೀರಾಯ್ಡ್ ಬಳಕೆಯ ಅಡ್ಡಪರಿಣಾಮಗಳ ಬಗ್ಗೆ ಮಾಹಿತಿ ನೀಡಿರುವ ಅವರು, ಎಚ್ಚರ ಅಗತ್ಯ ಎಂದಿದ್ದಾರೆ.

ಇದನ್ನೂ ಓದಿ: ಚಳಿಗಾಲದಲ್ಲಿ ಯೂರಿಕ್ ಆಸಿಡ್ ಕಮ್ಮಿ ಮಾಡುವ ಪಾನೀಯಗಳು

ಕುಳಿತುಕೊಳ್ಳಲು ಕಷ್ಟ ಆಗುವುದು, ಮೆಟ್ಟಿಲು ಇಳಿಯಲು ಕಷ್ಟಪಡುವುದು, ನಡೆಯುವಾಗ ವಿಪರೀತ ನೋವು ಇತ್ಯಾದಿಗಳನ್ನು ನಿರ್ಲಕ್ಷ್ಯ ಮಾಡಬಾರದು. ಮೊದಲ ಹಂತದಲ್ಲಿ ಔಷಧಿ ಮೂಲಕ ನೋವು ಶಮನ ಮಾಡಬಹುದು. ನಿರ್ಲಕ್ಷ್ಯ ಮಾಡಿದರೆ ನಂತರ ಹಿಪ್ ರೀಪ್ಲೇಸ್ಮೆಂಟ್, ಅಥವಾ ಮಂಡಿಚಿಪ್ಪು ರಿಪ್ಲೇಸ್​​ಮೆಂಟ್ ಸರ್ಜರಿಗೆ ಒಳಪಡಬೇಕಾಗಬಹುದು ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ