AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸೈಟ್‌ ವಿಚಾರಕ್ಕೆ ಗಲಾಟೆ ಮಾಡಿ ಮನೆಗೆ ಹೋಗಿದ್ದ ವ್ಯಕ್ತಿ ಸಾವು; ಮೃತನ ಕುಟುಂಬದಿಂದ ಕೊಲೆ ಆರೋಪ

ಕೊಡಿಗೆಹಳ್ಳಿ(Kodigehalli) ಬಳಿಯ ಎನ್.ಟಿ‌.ಐ ಲೇಔಟ್​ನಲ್ಲಿ ಸೈಟ್‌ ವಿಚಾರಕ್ಕೆ ಗಲಾಟೆ ಮಾಡಿ ನಂತರ ಮನೆಗೆ ಹೋಗಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಸೈಟ್​ ವಿಚಾರವಾಗಿ ಸಾಕಷ್ಟು ದಿನಗಳಿಂದ ನಾಗರಾಜ್ ಮತ್ತು ಪ್ರಕಾಶ್​ರವರ ಮಧ್ಯೆ ಈ ವಿಚಾರವಾಗಿ ಗಲಾಟೆಯಾಗುತ್ತಿತ್ತು. ಇಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಕೂಡ ಪ್ರಕಾಶ್ , ನಾಗರಾಜ್​ ಎಂಬಾತನ ನಡುವೆ ಜಮೀನು ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದ.

ಬೆಂಗಳೂರು: ಸೈಟ್‌ ವಿಚಾರಕ್ಕೆ ಗಲಾಟೆ ಮಾಡಿ ಮನೆಗೆ ಹೋಗಿದ್ದ ವ್ಯಕ್ತಿ ಸಾವು; ಮೃತನ ಕುಟುಂಬದಿಂದ ಕೊಲೆ ಆರೋಪ
ಪ್ರಾತಿನಿಧಿಕ ಚಿತ್ರ
Follow us
Prajwal Kumar NY
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 29, 2024 | 5:04 PM

ಬೆಂಗಳೂರು, ಜ.29: ಸೈಟ್‌ ವಿಚಾರಕ್ಕೆ ಗಲಾಟೆ ಮಾಡಿ ನಂತರ ಮನೆಗೆ ಹೋಗಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿ(Kodigehalli) ಬಳಿಯ ಎನ್.ಟಿ‌.ಐ ಲೇಔಟ್​ನಲ್ಲಿ ನಡೆದಿದೆ. ಪ್ರಕಾಶ್ ಮೃತ ರ್ದುದೈವಿ. ಪ್ರಕಾಶ್ ಎಂಬುವವರಿಗೆ ಸೇರಿದ ಸೈಟ್ ಎನ್.ಟಿ.ಐ ಕಾಲೋನಿಯಲ್ಲಿದೆ.ಈ ಸೈಟ್​ ವಿಚಾರವಾಗಿ ಸಾಕಷ್ಟು ದಿನಗಳಿಂದ ನಾಗರಾಜ್ ಮತ್ತು ಪ್ರಕಾಶ್​ರವರ ಮಧ್ಯೆ ಈ ವಿಚಾರವಾಗಿ ಗಲಾಟೆಯಾಗುತ್ತಿತ್ತು. ಇಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಕೂಡ ಪ್ರಕಾಶ್ , ನಾಗರಾಜ್​ ಎಂಬಾತನ ನಡುವೆ ಜಮೀನು ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದ. ಬಳಿಕ ಪೊಲೀಸರು ಸ್ಥಳಕ್ಕೆ ಬಂದು ಗಲಾಟೆ ಮಾಡಿಕೊಳ್ಳಬೇಡಿ. ಕೋರ್ಟ್ ವಿಚಾರ ಕೋರ್ಟ್​ನಲ್ಲಿ ಬಗೆಹರಿಸಿ ಎಂದು ಸೂಚಿಸಿ ವಾಪಸ್ಸು ಕಳಿಸಿದ್ದಾರೆ.

ಆಸ್ಪತ್ರೆ ಬರುವ ಮುಂಚೆಯೇ ಸಾವು ಎಂದ ವೈದ್ಯರು

ಇನ್ನು ಪೊಲೀಸರು ಜಗಳವನ್ನು ಶಾಂತ ಮಾಡಿ ಮನೆಗೆ ಕಳುಹಿಸಿದ್ದಾರೆ. ನಂತರ ಮನೆಗೆ ಹೋದಾಗ ಪ್ರಕಾಶ್​ ಅವರು ಎದೆ ನೋವು ಎಂದು ಹೇಳಿಕೊಂಡಿದ್ದಾರೆ. ಕೂಡಲೇ ಹತ್ತಿರದ ಉಮಾಶಂಕರ್ ಎಂಬ ಕ್ಲಿನಿಕ್​ಗೆ ಕರೆದುಕೊಂಡು ಹೋಗಲಾಗಿದೆ. ಆದರೆ, ಇಲ್ಲ ಆಗಲ್ಲ ಎಂದು ಬೇರೊಂದು ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ್ದಾರೆ. ಅದರಂತೆ ಬೇರೆ ಆಸ್ಪತ್ರೆಗೆ ಹೋಗಿದ್ದು, ಇವರು ಇಲ್ಲಿಗೆ ಬರುವ ಮೊದಲೇ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗ: ಮೂತ್ರವಿಸರ್ಜನೆಗೆ ಹೋದ ವ್ಯಕ್ತಿಯ ಮೇಲೆ ಬಿದ್ದ ಸಿಮೆಂಟ್​ ಸ್ಲ್ಯಾಬ್;​ ಸ್ಥಳದಲ್ಲೇ ಸಾವು

ಪ್ರಕಾಶ್​ ಅವರದು ಕೊಲೆ ಎಂದು ಅರೋಪಿಸಿ ದೂರು ನೀಡಿದ ಕುಟುಂಬ

ಇನ್ನು ಯಾವಾಗ ಪ್ರಕಾಶ್​ ಸಾವನ್ನಪ್ಪಿರುವ ವಿಷಯ ಕುಟುಂಬಸ್ಥರಿಗೆ ತಿಳಿಯಿತೋ, ಪ್ರಕಾಶ್​ನದು ಸಹಜ ಸಾವಲ್ಲ, ಇದು ಕೊಲೆ ಎಂದು ಅರೋಪಿಸಿದ್ದಾರೆ. ಈ ಹಿನ್ನಲೆ ಲಿಖಿತ ದೂರು ನೀಡುವಂತೆ ಪೊಲೀಸರು ಸಂಬಂಧಿಕರಿಗೆ ಸೂಚನೆ ನೀಡಿದ್ದು, ದೂರಿನ ಆಧಾರದ ಮೇಲೆ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಇನ್ನು ಈ ಘಟನೆ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತನಿಖೆಯ ಬಳಿಕ ಕೊಲೆಗೆ ನಿಖರ ಕಾರಣ ತಿಳಿಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್