Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಂಪತಿ ನಡುವೆ ಮನಸ್ತಾಪ: ಪತ್ನಿ ಹುಡುಕಿಕೊಟ್ಟ ಎರಡೇ ದಿನಕ್ಕೆ ಪತಿ ಪರಾರಿ, ಪೊಲೀಸರಿಗೆ ತಲೆ ನೋವು ತಂದ ಪ್ರಕರಣ

ದಂಪತಿ ನಡುವೆ ಮನಸ್ತಾಪ ಉಂಟಾಗಿದ್ದು ಇದರಿಂದ ಪೊಲೀಸರು ಹೈರಾಣಾಗಿದ್ದಾರೆ. ಒಮ್ಮೆ ಹೆಂಡತಿ ಮನೆ ಬಿಟ್ಟು ಹೋದಳೆಂದು, ಇನ್ನೊಮ್ಮೆ ಗಂಡ ಮನೆ ಬಿಟ್ಟು ಹೋದನೆಂದು. ಇವರಿಗಾಗಿ ಹುಡುಕಾಟ ನಡೆಸುತ್ತ ಪೊಲೀಸರು ಹೈರಾಣಾಗಿದ್ದಾರೆ.

ದಂಪತಿ ನಡುವೆ ಮನಸ್ತಾಪ: ಪತ್ನಿ ಹುಡುಕಿಕೊಟ್ಟ ಎರಡೇ ದಿನಕ್ಕೆ ಪತಿ ಪರಾರಿ, ಪೊಲೀಸರಿಗೆ ತಲೆ ನೋವು ತಂದ ಪ್ರಕರಣ
ಕೋಣನಕುಂಟೆ ಪೊಲೀಸದ ಠಾಣೆ
Follow us
ಆಯೇಷಾ ಬಾನು
|

Updated on: Mar 23, 2023 | 9:11 AM

ಬೆಂಗಳೂರು: ಗಂಡ ಹೆಂಡತಿ(Husband Wife) ಜಗಳ ಉಂಡು ಮಲಗೋ ತನಕ ಎಂಬ ಗಾದೆ ಮಾತಿದೆ. ಆದ್ರೆ ಈಗೆಲ್ಲ ಇದು ಶುದ್ಧ ಸುಳ್ಳಾಗಿದೆ. ಚಿಕ್ಕ ವಿಚಾರಕ್ಕೆ ಶುರುವಾಗುವ ಮನಸ್ತಾಪಗಳು, ಜಗಳ-ಗಲಾಟೆ ತಿಂಗಳು, ವರ್ಷ ಕಳೆದರೂ ಸರಿ ಹೋಗಲ್ಲ. ದಂಪತಿ ಜಗಳದಿಂದ ಇಡೀ ಕುಟುಂಬದ ನೆಮ್ಮದಿಯೇ ಹಾಳಾಗಿಬಿಟ್ಟಿರುತ್ತೆ. ಆದ್ರೆ ಇಲ್ಲೊಂದು ದಂಪತಿ ನಡುವಿನ ಮನಸ್ತಾಪ ಪೊಲೀಸರಿಗೆ(Konanakunte Police) ದೊಡ್ಡ ತಲೆ ನೋವನ್ನೇ ತಂದಿದೆ. ದಂಪತಿ ನಡುವೆ ಮನಸ್ತಾಪ ಉಂಟಾಗಿದ್ದು ಇದರಿಂದ ಪೊಲೀಸರು ಹೈರಾಣಾಗಿದ್ದಾರೆ. ಒಮ್ಮೆ ಹೆಂಡತಿ ಮನೆ ಬಿಟ್ಟು ಹೋದಳೆಂದು, ಇನ್ನೊಮ್ಮೆ ಗಂಡ ಮನೆ ಬಿಟ್ಟು ಹೋದನೆಂದು. ಇವರಿಗಾಗಿ ಹುಡುಕಾಟ ನಡೆಸುತ್ತ ಪೊಲೀಸರು ಹೈರಾಣಾಗಿದ್ದು ಸದ್ಯ ಇಬ್ಬರಿಗೂ ಸಂಸಾರ ನಡೆಸುವಂತೆ ಬುದ್ದಿ ಹೇಳಿ ಕಳಿಸಲಾಗಿದೆ. ಪ್ರಕರಣ ಸುಖಾಂತ್ಯ ಕಂಡಿದೆ.

ಕೋಣನಕುಂಟೆಯಲ್ಲಿ ಒಂದೇ ಒಂದು ಫೋನ್ ಕಾಲ್​ನಿಂದಾಗಿ ದಂಪತಿ ನಡುವೆ ಮನಸ್ತಾಪ ಉಂಟಾಗಿದೆ. ಪತ್ನಿ ಫೋನಿನಲ್ಲಿ ಯಾರೋ ಜೊತೆ ಗಂಟಗಟ್ಟಲೆ ಮಾತನಾಡುತ್ತಾಳೆ ಎಂದು ಆರೋಪಿ ಗಂಡ ತನ್ನ ಹೆಂಡತಿ ಜೊತೆ ಜಗಳವಾಡಿದ್ದಾನೆ. ಇದರಿಂದ ಕೋಪಗೊಂಡ ಪತ್ನಿ ತನ್ನ ಪತಿಗೆ ಮೆಸೇಜ್ ಮಾಡಿ ಮನೆ ಬಿಟ್ಟು ಹೋಗಿದ್ದಾಳೆ. ನಾನು ಮನೆ ಬಿಟ್ಟು ಹೋಗುತ್ತಿದ್ದೇನೆ. ಮತ್ತೆ ಯಾವತ್ತೂ ಬರಲ್ಲ. ಮಕ್ಕಳನ್ನು ಚನ್ನಾಗಿ ನೋಡಿಕೋ. ಮನೆಯಲ್ಲಿ ಇಬ್ಬರೇ ಇರ್ತಾರೆ. ಬೇಗ ಮನೆಗೆ ಹೋಗು. ಇದೇ ಕೊನೇ ಮೆಸೇಜ್. ಜೀವನದಲ್ಲಿ ಇನ್ನು ಯಾವತ್ತು ಸಿಗಲ್ಲ ನಾನು. ತಾಳ್ಮೆ ಕಳೆದುಕೊಂಡಿದ್ದೇನೆ. ಸುಳ್ಳು ಹೇಳುತ್ತಿಲ್ಲ. ಬೇಗ ಮನೆಗೆ ಹೋಗು. ಯಾವುದೇ ಕಾರಣಕ್ಕೂ ಮಕ್ಕಳನ್ನು ಬಿಡಬೇಡ ಎಂದು ವಾಟ್ಸಾಪ್ ಮೆಸೇಜ್ ಮಾಡಿದ್ದಾಳೆ. ಹೀಗಾಗಿ ಕೋಣನಕುಂಟೆ ಪೊಲೀಸ್ ಠಾಣೆಗೆ ಬಂದ ಪತಿ ತನ್ನ ಪತ್ನಿಯನ್ನು ಹುಡುಕಿಕೊಡುವಂತೆ ಅಂಗಲಾಚಿದ್ದಾನೆ. ದೂರು ನೀಡಿದ ಹಿನ್ನೆಲೆ ಪೊಲೀಸರು ಹುಡುಕಾಟ ನಡೆಸಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಿಂದ ಮಹಿಳೆಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ. ಇಬ್ಬರಿಗೂ ಬುದ್ದಿ ಹೇಳಿ ಕಳಿಸಿದ್ದಾರೆ.

ಇದನ್ನೂ ಓದಿ: Jharkhand: ಅನುಕಂಪದ ನೌಕರಿ ಆಸೆಗೆ ಗಂಡನನ್ನೇ ಕೊಲೆ ಮಾಡಿ ಸೀಲಿಂಗ್ ಫ್ಯಾನ್​ಗೆ ನೇತು ಹಾಕಿದ್ದ ಪತ್ನಿ; ಆಮೇಲೇನಾಯ್ತು?

ಇಷ್ಟೆಲ್ಲಾ ಆದ ಮೇಲೆ ಇಬ್ಬರೂ ಸರಿ ಹೋಗಬಹುದು ಎಂದು ಕೊಂಡ ಪೊಲೀಸರಿಗೆ ಮತ್ತೊಂದು ದೂರು ಬಂದಿದೆ. ಪತ್ನಿ ಮನೆಗೆ ಬಂದ ಎರಡೇ ದಿನಕ್ಕೆ ಪತಿ ತನ್ನ ಮನಗ ಕೈಗೆ ಮೊಬೈಲ್ ನೀಡಿ ಮನೆ ಬಿಟ್ಟು ಪರಾರಿಯಾಗಿದ್ದಾನೆ. ಬಳಿಕ ಪತ್ನಿ ಪೊಲೀಸ್ ಠಾಣೆಗೆ ಬಂದು ಪತಿ ಓಡಿ ಹೋದ ಬಗ್ಗೆ ದೂರು ದಾಖಲಿಸಿದ್ದಾರೆ. ನಂತರ ಪೊಲೀಸರು ಮತ್ತೆ ಹುಡುಕಾಟ ನಡೆಸಿದ್ದಾರೆ. ಆದ್ರೆ ಪತಿ ಎರಡು ದಿನದ ಬಳಿಕ ಮನೆಗೆ ಪಾರಾಸ್ ಬಂದಿದ್ದು ದಂಪತಿ ಹುಡುಕಾಟದಿಂದ ಹೈರಾಣಾದ ಪೊಲೀಸರು ದಂಪತಿಯನ್ನು ಠಾಣೆಗೆ ಕರೆಸಿ ಬುದ್ದಿ ಹೇಳಿ ಮತ್ತೆ ಈ ರೀತಿಯ ಕೆಲಸ ಮಾಡದಂತೆ ಎಚ್ಚರಿಕೆ ನೀಡಿ ಮನೆಗೆ ಕಳಿಸಿದ್ದಾರೆ. ಸದ್ಯ ದಂಪತಿ ನಾಪತ್ತೆ ಕೇಸ್ ಸುಖಾಂತ್ಯ ಕಂಡಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್