AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಣನಕುಂಟೆ ಠಾಣೆ ಇನ್ಸ್ಪೆಕ್ಟರ್ ಹಲ್ಲೆಯಿಂದ ವ್ಯಕ್ತಿ ಸಾವು ಆರೋಪ; ತನಿಖೆಗೆ ತಂಡ ರಚನೆ

ಕೊತ್ತನೂರಿನಲ್ಲಿ ರಾಮಸ್ವಾಮಿ‌ ಮತ್ತು ನಿರ್ಮಿತ ಕೇಂದ್ರದ ನಡುವೆ ಜಮೀನು ವ್ಯಾಜ್ಯ ಇದೆ. 2 ತಿಂಗಳ ಹಿಂದೆ ಈ‌ ಜಮೀನಿನಲ್ಲಿ ನೀಲಗಿರಿ ಮರ ತೆರವು ಮಾಡಲು ನಿರ್ಮಿತಿ‌ ಕೇಂದ್ರದ ಸಿಬ್ಬಂದಿ ಪೊಲೀಸರ ಭದ್ರತೆ ಜೊತೆ ಹೋಗಿದ್ದರು. ಈ ವೇಳೆ ಗಲಾಟೆಯಾಗಿದ್ದು ಪೊಲೀಸರು ರಾಮಸ್ವಾಮಿ‌ ಹಾಗೂ ಅವರ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದರು. ಎರಡು ಬಾರಿ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆದರೂ ರಾಮಸ್ವಾಮಿ ಮೃತಪಟ್ಟಿದ್ದಾರೆ. ಈ ಸಾವಿಗೆ ಪೊಲೀಸರೆ ಕಾರಣ ಎಂದು ರಾಮಸ್ವಾಮಿ ಪತ್ನಿ ಆರೋಪ ಮಾಡಿದ್ದಾರೆ.

ಕೋಣನಕುಂಟೆ ಠಾಣೆ ಇನ್ಸ್ಪೆಕ್ಟರ್ ಹಲ್ಲೆಯಿಂದ ವ್ಯಕ್ತಿ ಸಾವು ಆರೋಪ; ತನಿಖೆಗೆ ತಂಡ ರಚನೆ
ಸಾವು
TV9 Web
| Edited By: |

Updated on: Sep 16, 2024 | 11:32 AM

Share

ಬೆಂಗಳೂರು, ಸೆ.16: ಪೊಲೀಸರ ಹಲ್ಲೆಯಿಂದಾಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿರೋ (Death) ಗಂಭೀರ ಆರೋಪ ಕೇಳಿ ಬಂದಿದೆ. ಜಮೀನು ವ್ಯಾಜ್ಯ ಸಂಬಂಧ ರಾಮಸ್ವಾಮಿ ಎಂಬ ವ್ಯಕ್ತಿಯನ್ನು ಕೋಣನಕುಂಟೆ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಪಾಪಣ್ಣ ಹಲ್ಲೆ (Assault) ನಡೆಸಿದ್ದರು. ಇದೀಗ ವ್ಯಕ್ತಿ ಮೃತಪಟ್ಟಿದ್ದು ಇನ್ಸ್ಪೆಕ್ಟರ್ ಪಾಪಣ್ಣ ಅವರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಮೃತ ರಾಮಸ್ವಾಮಿ ಪತ್ನಿ ಮುನಿಯಮ್ಮ ಅವರು ಗಂಭೀರ ಆರೋಪ ಮಾಡಿ ಕೇಸ್ ದಾಖಲಿಸಿದ್ದಾರೆ.

ಕೊತ್ತನೂರಿನಲ್ಲಿ ರಾಮಸ್ವಾಮಿ‌ ಮತ್ತು ನಿರ್ಮಿತ ಕೇಂದ್ರದ ನಡುವೆ ಜಮೀನು ವ್ಯಾಜ್ಯ ಇದೆ. 2 ತಿಂಗಳ ಹಿಂದೆ ಈ‌ ಜಮೀನಿನಲ್ಲಿ ನೀಲಗಿರಿ ಮರ ತೆರವು ಮಾಡಲು ನಿರ್ಮಿತಿ‌ ಕೇಂದ್ರದ ಸಿಬ್ಬಂದಿ ಹೋಗಿದ್ದರು. ಕೋಣನಕುಂಟೆ ಪೊಲೀಸರ ಭದ್ರತೆ ಜೊತೆಗೆ ಮರ ತೆರವು ಮಾಡಲು ಹೋಗಿದ್ದರು. ಈ ವೇಳೆ ಜಮೀನು‌ ನಮ್ಮದು ಎಂದು ರಾಮಸ್ವಾಮಿ ಕುಟುಂಬ ಅಡ್ಡಿಪಡಿಸಿತ್ತು. ಆದರೆ ಇದೇ ಜಗಳ‌ದ ಮಧ್ಯೆ ಪೊಲೀಸರು ರಾಮಸ್ವಾಮಿ‌, ಆಕೆ ಪತ್ನಿ, ಮಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇನ್ಸ್ಪೆಕ್ಟರ್ ಪಾಪಣ್ಣ ಮತ್ತು ಸಿಬ್ಬಂದಿ ಹಲ್ಲೆ ನಡೆಸಿದ್ದು ಬಳಿಕ ರಾಮಸ್ವಾಮಿ ಮತ್ತು ಮಗಳನ್ನ ಠಾಣೆಗೆ ಕರೆದೊಯ್ದು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಬಿಪಿ, ಶುಗರ್ ಇದ್ದ ರಾಮಸ್ವಾಮಿ ಹಲ್ಲೆಯಿಂದ ನಿತ್ರಾಣರಾಗಿದ್ದರು. ಪೊಲೀಸರೇ ರಾಮಸ್ವಾಮಿಯನ್ನ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ರು. ನಂತರ ರಾಮಸ್ವಾಮಿ ಅವರ ಪತ್ನಿ ಹಾಗೂ ಮಗಳ ಬಳಿ ಬಂದು ಪೊಲೀಸರು ಬೆದರಿಕೆ ಹಾಕಿದ್ದಾರೆ. ನ್ಯಾಯಾಧೀಶರ ಮುಂದೆ ಹಲ್ಲೆ ವಿಚಾರ ಹೇಳಿದರೆ ಮಗಳನ್ನ ಶಾಶ್ವತವಾಗಿ ಜೈಲಿಗೆ ಕಳಿಸೋದಾಗಿ ಬೆದರಿಕೆ ಹಾಕಿದ್ದಾರೆ.

ಇದನ್ನೂ ಓದಿ: ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ? ಅನುಮಾನ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಅಶೋಕ್

ಇಷ್ಟೆಲ್ಲದರ ನಂತರ ನ್ಯಾಯಾಧೀಶರ ಮುಂದೆ ನಿಂತಾಗ ರಾಮಸ್ವಾಮಿ ಕುಸಿದು ಬಿದ್ದಿದ್ದರು. ನಂತರ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ನಂತರ ಮನೆಗೆ ಮರಳಿದ್ದ ರಾಮಸ್ವಾಮಿ ಅವರು 3 ದಿನದ ಹಿಂದೆ ಮೃತಪಟ್ಟಿದ್ದಾರೆ. ಆದ್ರೆ ಪತಿ ಮೃತರಾಗಿದ್ದು ಪೊಲೀಸರ ಹಲ್ಲೆಯಿಂದ ಎಂದು ಪತ್ನಿ ಆರೋಪ ಮಾಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗೆ, ಪೊಲೀಸ್ ಆಯುಕ್ತರಿಗೆ ರಾಮಸ್ವಾಮಿ ಪತ್ನಿ ಮುನಿಯಮ್ಮ ದೂರು ನೀಡಿದ್ದಾರೆ. ಪತಿ ಸಾವಿಗೆ ಕೋಣನಕುಂಟೆ ಇನ್ಸ್ಪೆಕ್ಟರ್ ಪಾಪಣ್ಣನೇ ಕಾರಣ ಎಂದು ಆರೋಪ ಮಾಡಿದ್ದಾರೆ. ಸದ್ಯ ಕುಟುಂಬಸ್ಥರ ಆರೋಪ ಸಂಬಂಧ ಎಸಿಪಿ ನಾರಾಯಣಸ್ವಾಮಿ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ.

ನಿನ್ನೆಯಷ್ಟೇ ಮೃತದೇಹ ಮರಣೋತ್ತರ ಪರೀಕ್ಷೆ ತನಿಖಾಧಿಕಾರಿ ಸಮ್ಮುಖದಲ್ಲಿ ನಡೆದಿದೆ. ಮರಣೋತ್ತರ ಪರೀಕ್ಷೆ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಇನ್ನು ನಿರ್ಮಿತ ಕೇಂದ್ರದ ಸಿಬ್ಬಂದಿ‌ ನೀಡಿದ ದೂರಿನಡಿ ರಾಮಸ್ವಾಮಿ‌ ಕುಟುಂಬದ ಮೇಲೂ ಕೇಸ್ ದಾಖಲಾಗಿತ್ತು. ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಿದ್ದ ಆರೋಪದಡಿ ಕೋಣನಕುಂಟೆ ಠಾಣೆಯಲ್ಲಿ FIR ದಾಖಲಾಗಿತ್ತು.

ವರದಿ: ಪ್ರದೀಪ್, ಟಿವಿ9 ಬೆಂಗಳೂರು

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ