Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಣನಕುಂಟೆ ಠಾಣೆ ಇನ್ಸ್ಪೆಕ್ಟರ್ ಹಲ್ಲೆಯಿಂದ ವ್ಯಕ್ತಿ ಸಾವು ಆರೋಪ; ತನಿಖೆಗೆ ತಂಡ ರಚನೆ

ಕೊತ್ತನೂರಿನಲ್ಲಿ ರಾಮಸ್ವಾಮಿ‌ ಮತ್ತು ನಿರ್ಮಿತ ಕೇಂದ್ರದ ನಡುವೆ ಜಮೀನು ವ್ಯಾಜ್ಯ ಇದೆ. 2 ತಿಂಗಳ ಹಿಂದೆ ಈ‌ ಜಮೀನಿನಲ್ಲಿ ನೀಲಗಿರಿ ಮರ ತೆರವು ಮಾಡಲು ನಿರ್ಮಿತಿ‌ ಕೇಂದ್ರದ ಸಿಬ್ಬಂದಿ ಪೊಲೀಸರ ಭದ್ರತೆ ಜೊತೆ ಹೋಗಿದ್ದರು. ಈ ವೇಳೆ ಗಲಾಟೆಯಾಗಿದ್ದು ಪೊಲೀಸರು ರಾಮಸ್ವಾಮಿ‌ ಹಾಗೂ ಅವರ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದರು. ಎರಡು ಬಾರಿ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆದರೂ ರಾಮಸ್ವಾಮಿ ಮೃತಪಟ್ಟಿದ್ದಾರೆ. ಈ ಸಾವಿಗೆ ಪೊಲೀಸರೆ ಕಾರಣ ಎಂದು ರಾಮಸ್ವಾಮಿ ಪತ್ನಿ ಆರೋಪ ಮಾಡಿದ್ದಾರೆ.

ಕೋಣನಕುಂಟೆ ಠಾಣೆ ಇನ್ಸ್ಪೆಕ್ಟರ್ ಹಲ್ಲೆಯಿಂದ ವ್ಯಕ್ತಿ ಸಾವು ಆರೋಪ; ತನಿಖೆಗೆ ತಂಡ ರಚನೆ
ಸಾವು
Follow us
TV9 Web
| Updated By: ಆಯೇಷಾ ಬಾನು

Updated on: Sep 16, 2024 | 11:32 AM

ಬೆಂಗಳೂರು, ಸೆ.16: ಪೊಲೀಸರ ಹಲ್ಲೆಯಿಂದಾಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿರೋ (Death) ಗಂಭೀರ ಆರೋಪ ಕೇಳಿ ಬಂದಿದೆ. ಜಮೀನು ವ್ಯಾಜ್ಯ ಸಂಬಂಧ ರಾಮಸ್ವಾಮಿ ಎಂಬ ವ್ಯಕ್ತಿಯನ್ನು ಕೋಣನಕುಂಟೆ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಪಾಪಣ್ಣ ಹಲ್ಲೆ (Assault) ನಡೆಸಿದ್ದರು. ಇದೀಗ ವ್ಯಕ್ತಿ ಮೃತಪಟ್ಟಿದ್ದು ಇನ್ಸ್ಪೆಕ್ಟರ್ ಪಾಪಣ್ಣ ಅವರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಮೃತ ರಾಮಸ್ವಾಮಿ ಪತ್ನಿ ಮುನಿಯಮ್ಮ ಅವರು ಗಂಭೀರ ಆರೋಪ ಮಾಡಿ ಕೇಸ್ ದಾಖಲಿಸಿದ್ದಾರೆ.

ಕೊತ್ತನೂರಿನಲ್ಲಿ ರಾಮಸ್ವಾಮಿ‌ ಮತ್ತು ನಿರ್ಮಿತ ಕೇಂದ್ರದ ನಡುವೆ ಜಮೀನು ವ್ಯಾಜ್ಯ ಇದೆ. 2 ತಿಂಗಳ ಹಿಂದೆ ಈ‌ ಜಮೀನಿನಲ್ಲಿ ನೀಲಗಿರಿ ಮರ ತೆರವು ಮಾಡಲು ನಿರ್ಮಿತಿ‌ ಕೇಂದ್ರದ ಸಿಬ್ಬಂದಿ ಹೋಗಿದ್ದರು. ಕೋಣನಕುಂಟೆ ಪೊಲೀಸರ ಭದ್ರತೆ ಜೊತೆಗೆ ಮರ ತೆರವು ಮಾಡಲು ಹೋಗಿದ್ದರು. ಈ ವೇಳೆ ಜಮೀನು‌ ನಮ್ಮದು ಎಂದು ರಾಮಸ್ವಾಮಿ ಕುಟುಂಬ ಅಡ್ಡಿಪಡಿಸಿತ್ತು. ಆದರೆ ಇದೇ ಜಗಳ‌ದ ಮಧ್ಯೆ ಪೊಲೀಸರು ರಾಮಸ್ವಾಮಿ‌, ಆಕೆ ಪತ್ನಿ, ಮಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇನ್ಸ್ಪೆಕ್ಟರ್ ಪಾಪಣ್ಣ ಮತ್ತು ಸಿಬ್ಬಂದಿ ಹಲ್ಲೆ ನಡೆಸಿದ್ದು ಬಳಿಕ ರಾಮಸ್ವಾಮಿ ಮತ್ತು ಮಗಳನ್ನ ಠಾಣೆಗೆ ಕರೆದೊಯ್ದು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಬಿಪಿ, ಶುಗರ್ ಇದ್ದ ರಾಮಸ್ವಾಮಿ ಹಲ್ಲೆಯಿಂದ ನಿತ್ರಾಣರಾಗಿದ್ದರು. ಪೊಲೀಸರೇ ರಾಮಸ್ವಾಮಿಯನ್ನ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ರು. ನಂತರ ರಾಮಸ್ವಾಮಿ ಅವರ ಪತ್ನಿ ಹಾಗೂ ಮಗಳ ಬಳಿ ಬಂದು ಪೊಲೀಸರು ಬೆದರಿಕೆ ಹಾಕಿದ್ದಾರೆ. ನ್ಯಾಯಾಧೀಶರ ಮುಂದೆ ಹಲ್ಲೆ ವಿಚಾರ ಹೇಳಿದರೆ ಮಗಳನ್ನ ಶಾಶ್ವತವಾಗಿ ಜೈಲಿಗೆ ಕಳಿಸೋದಾಗಿ ಬೆದರಿಕೆ ಹಾಕಿದ್ದಾರೆ.

ಇದನ್ನೂ ಓದಿ: ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ? ಅನುಮಾನ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಅಶೋಕ್

ಇಷ್ಟೆಲ್ಲದರ ನಂತರ ನ್ಯಾಯಾಧೀಶರ ಮುಂದೆ ನಿಂತಾಗ ರಾಮಸ್ವಾಮಿ ಕುಸಿದು ಬಿದ್ದಿದ್ದರು. ನಂತರ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ನಂತರ ಮನೆಗೆ ಮರಳಿದ್ದ ರಾಮಸ್ವಾಮಿ ಅವರು 3 ದಿನದ ಹಿಂದೆ ಮೃತಪಟ್ಟಿದ್ದಾರೆ. ಆದ್ರೆ ಪತಿ ಮೃತರಾಗಿದ್ದು ಪೊಲೀಸರ ಹಲ್ಲೆಯಿಂದ ಎಂದು ಪತ್ನಿ ಆರೋಪ ಮಾಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗೆ, ಪೊಲೀಸ್ ಆಯುಕ್ತರಿಗೆ ರಾಮಸ್ವಾಮಿ ಪತ್ನಿ ಮುನಿಯಮ್ಮ ದೂರು ನೀಡಿದ್ದಾರೆ. ಪತಿ ಸಾವಿಗೆ ಕೋಣನಕುಂಟೆ ಇನ್ಸ್ಪೆಕ್ಟರ್ ಪಾಪಣ್ಣನೇ ಕಾರಣ ಎಂದು ಆರೋಪ ಮಾಡಿದ್ದಾರೆ. ಸದ್ಯ ಕುಟುಂಬಸ್ಥರ ಆರೋಪ ಸಂಬಂಧ ಎಸಿಪಿ ನಾರಾಯಣಸ್ವಾಮಿ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ.

ನಿನ್ನೆಯಷ್ಟೇ ಮೃತದೇಹ ಮರಣೋತ್ತರ ಪರೀಕ್ಷೆ ತನಿಖಾಧಿಕಾರಿ ಸಮ್ಮುಖದಲ್ಲಿ ನಡೆದಿದೆ. ಮರಣೋತ್ತರ ಪರೀಕ್ಷೆ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಇನ್ನು ನಿರ್ಮಿತ ಕೇಂದ್ರದ ಸಿಬ್ಬಂದಿ‌ ನೀಡಿದ ದೂರಿನಡಿ ರಾಮಸ್ವಾಮಿ‌ ಕುಟುಂಬದ ಮೇಲೂ ಕೇಸ್ ದಾಖಲಾಗಿತ್ತು. ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಿದ್ದ ಆರೋಪದಡಿ ಕೋಣನಕುಂಟೆ ಠಾಣೆಯಲ್ಲಿ FIR ದಾಖಲಾಗಿತ್ತು.

ವರದಿ: ಪ್ರದೀಪ್, ಟಿವಿ9 ಬೆಂಗಳೂರು

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು