AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

40% ಕಮಿಷನ್​ ಆರೋಪದ ತನಿಖೆಯನ್ನು ಸ್ವಾಗತಿಸ್ತೇನೆ, ನಾವು ಯಾರಿಗೂ ತಾರತಮ್ಯ ಮಾಡಿಲ್ಲ -ಶ್ರೀನಿವಾಸ್ ಪೂಜಾರಿ

ಬಿಜೆಪಿ ಅವಧಿಯಲ್ಲಿ ನಡೆದ ಹಗರಣಗಳ ಬಗ್ಗೆ ತನಿಖೆ ನಡೆಸುವುದಾಗಿ ಈ ಹಿಂದೆ ಕಾಂಗ್ರೆಸ್ ಹೇಳಿತ್ತು. ಈ ಬಗ್ಗೆ ಕೋಟ ಶ್ರೀನಿವಾಸ್ ಪೂಜಾರಿ ಕಿಡಿಕಾರಿದ್ದು 40% ಕಮಿಷನ್​ ಆರೋಪದ ತನಿಖೆಯನ್ನು ಸ್ವಾಗತ ಮಾಡ್ತೇನೆ. ಸಮಾಜ ಕಲ್ಯಾಣ ಇಲಾಖೆಯಿಂದಲೇ ತನಿಖೆಯನ್ನು ಆರಂಭಿಸಿ ಎಂದರು.

40% ಕಮಿಷನ್​ ಆರೋಪದ ತನಿಖೆಯನ್ನು ಸ್ವಾಗತಿಸ್ತೇನೆ, ನಾವು ಯಾರಿಗೂ ತಾರತಮ್ಯ ಮಾಡಿಲ್ಲ -ಶ್ರೀನಿವಾಸ್ ಪೂಜಾರಿ
ಕೋಟ ಶ್ರೀನಿವಾಸ ಪೂಜಾರಿ
ಆಯೇಷಾ ಬಾನು
|

Updated on: Jun 10, 2023 | 1:01 PM

Share

ಬೆಂಗಳೂರು: ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ನಡೆದ ಎಲ್ಲ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ ಎಂದು ನೂತನ ಸಚಿವ ಎಂಬಿ ಪಾಟೀಲ್(MB Patil) ಈ ಹಿಂದೆ ಹೇಳಿದ್ದರು. ಈಗ ಕಾಂಗ್ರೆಸ್(Congress) ಸರ್ಕಾರ ಬಂದಿದೆ. ಬಿಜೆಪಿ ಸರ್ಕಾರದ ಮೇಲಿನ ಶೇ.40ರಷ್ಟು ಕಮಿಷನ್ ಆರೋಪವನ್ನು ಕಾಂಗ್ರೆಸ್ ಸರ್ಕಾರ ದಾಖಲೆ ಸಹಿತ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌(Basavaraj Bommai) ಕಾಂಗ್ರೆಸ್‌ ನಾಯಕರಿಗೆ ಸವಾಲು ಹಾಕಿದ್ದರು. ಸದ್ಯ ಈ ಬಗ್ಗೆ ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ(Kota Srinivas Poojary) ಕೂಡ ಕಿಡಿ ಕಾರಿದ್ದಾರೆ.

40% ಕಮಿಷನ್​ ಆರೋಪದ ತನಿಖೆಯನ್ನು ಸ್ವಾಗತ ಮಾಡ್ತೇನೆ. ಸಮಾಜ ಕಲ್ಯಾಣ ಇಲಾಖೆಯಿಂದಲೇ ತನಿಖೆಯನ್ನು ಆರಂಭಿಸಿ. ಚಾಣಕ್ಯ ವಿವಿಗೆ ನೀಡಿದ್ದ ಭೂಮಿ ಯಾಕೆ ವಾಪಸ್ ಪಡೆಯಬೇಕು? ನಾವು ಯಾರಿಗೂ ತಾರತಮ್ಯ ಮಾಡಿಲ್ಲ. ಉಗ್ರರಿಗೆ ಸಪೋರ್ಟ್ ಮಾಡುವವರನ್ನು ವಿರೋಧ ಮಾಡುತ್ತೇವೆ. ಹಜ್ ಭವನ ನಿರ್ಮಾಣಕ್ಕೆ ಹಣ ಕೊಡ್ತೇವೆ ಅನ್ನೋದು ಎಷ್ಟುಸರಿ? ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ರು.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಎಲ್ಲ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ: ಎಂಬಿ ಪಾಟೀಲ್​​

ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತೇಜಸ್ವಿ ಸೂರ್ಯ ತಿರುಗೇಟು

ಇನ್ನು ಚಕ್ರವರ್ತಿ ಸೂಲಿಬೆಲೆ ಪಿಹೆಚ್​ಡಿ ಮಾಡಿದ್ದಾರಾ ಎಂಬ ಪ್ರಿಯಾಂಕ್​ ಖರ್ಗೆ ಹೇಳಿಕೆಗೆ ಸಂಸದ ತೇಜಸ್ವಿ ಸೂರ್ಯ ತಿರುಗೇಟು ಕೊಟ್ಟಿದ್ದಾರೆ. ನೀವು ಏನು ಓದಿದ್ದೀರಿ ಹೇಳಿ, ನೀವು ಪಿಹೆಚ್​​​ಡಿ ಮಾಡಿದ್ದೀರಾ? ಎಂದು ಪ್ರಶ್ನಿಸಿದ್ದಾರೆ. ಇನ್ನು ಆರ್​ಎಸ್​​ಎಸ್ ಅಂಗ ಸಂಸ್ಥೆಗಳಿಗೆ ನೀಡಿದ್ದ ಭೂಮಿ ವಾಪಸ್ ವಿಚಾರ ಸಂಬಂಧ ಆರ್​ಎಸ್​​ಎಸ್​ ಸಂಘಟನೆ ಹತ್ತಿಕ್ಕುವ ಪ್ರಯತ್ನ ನಿನ್ನೆ ಮೊನ್ನೆಯದಲ್ಲ. ಕಾಂಗ್ರೆಸ್​​ನವರು ತಮ್ಮ ಪ್ರಯತ್ನ ಮುಂದುವರಿಸಲಿ. ಆರ್​ಎಸ್​ಎಸ್​ ಸಂಘಟನೆಯನ್ನು ಕಾಂಗ್ರೆಸ್ ಏನೂ ಮಾಡಲು ಆಗಲ್ಲ ಎಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜಕೀಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​