AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾರ್ಥನಾ ಮಂದಿರಗಳ ಶಬ್ಧ ಮಾಲಿನ್ಯಕ್ಕೆ ಫುಲ್ ಸ್ಟಾಪ್ ಹಾಕಲು ಹೊಸ ಪ್ಲ್ಯಾನ್; ಕಮಿಟಿ ರಚನೆಗೆ ಮುಂದಾದ KSPCB

ಶೀಘ್ರವೇ ಮಾರ್ಗಸೂಚಿ ಹೊರಡಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ಧರಿಸಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಸೆಕ್ರೆಟರಿ ಶ್ರೀನಿವಾಸಲು ನೇತೃತ್ವದಲ್ಲಿ ಕಮಿಟಿ ರಚನೆ ಮಾಡಲಾಗಿದೆ.

ಪ್ರಾರ್ಥನಾ ಮಂದಿರಗಳ ಶಬ್ಧ ಮಾಲಿನ್ಯಕ್ಕೆ ಫುಲ್ ಸ್ಟಾಪ್ ಹಾಕಲು ಹೊಸ ಪ್ಲ್ಯಾನ್; ಕಮಿಟಿ ರಚನೆಗೆ ಮುಂದಾದ KSPCB
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Apr 24, 2022 | 9:26 AM

Share

ಬೆಂಗಳೂರು: ಪ್ರಾರ್ಥನಾ ಮಂದಿರಗಳ ಶಬ್ಧ ಮಾಲಿನ್ಯಕ್ಕೆ ಶೀಘ್ರವೇ ಫುಲ್ ಸ್ಟಾಪ್ ಹಾಕಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ(KSPCB) ಮುಂದಾಗಿದೆ. ಕೋರ್ಟ್ ಆದೇಶದಂತೆ ಮಾರ್ಗಸೂಚಿ ಹೊರಡಿಸಲು KSPCB ನಿರ್ಧರಿಸಿದೆ. ಮಾರ್ಗಸೂಚಿ ಹೊರಡಿಸುವ ಸಂಬಂಧ ಕಮಿಟಿ ರಚನೆಗೆ ಪ್ಲ್ಯಾನ್ ಮಾಡಿಕೊಂಡಿದೆ. ಕೋರ್ಟ್ ಆದೇಶದ ಬಳಿಕ ಎಚ್ಚೆತ್ತ ಮಾಲಿನ್ಯ ನಿಯಂತ್ರಣ ಮಂಡಳಿ, ನಿಯಮ ಮೀರಿ ಡಿಸೆಬಲ್ ಮೀರಿದ್ರೆ ಏನು ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಚರ್ಚೆ ನಡೆಸುತ್ತಿದೆ. ಶೀಘ್ರವೇ ಮಾರ್ಗಸೂಚಿ ಹೊರಡಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ಧರಿಸಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಸೆಕ್ರೆಟರಿ ಶ್ರೀನಿವಾಸಲು ನೇತೃತ್ವದಲ್ಲಿ ಕಮಿಟಿ ರಚನೆ ಮಾಡಲಾಗಿದೆ. ಈಗಾಗಲೇ ಬೆಂಗಳೂರಿನ ಹಲವು ಪ್ರಾರ್ಥನಾ ಮಂದಿರ (ದೇಗುಲ, ಮಸೀದಿ, ಚರ್ಚ್)ಗಳಿಗೆ ಪೊಲೀಸ್ ಇಲಾಖೆ ನೋಟಿಸ್ ನೀಡಿದೆ.

ಮಾಲಿನ್ಯ ನಿಯಂತ್ರಣ ಮಂಡಳಿ ಜೊತೆ ಜಂಟಿಯಾಗಿ ನೋಟಿಸ್ ನೀಡಲಿದ್ದಾರೆ. ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡುವರಿಗೆ ಮೊದಲು ಎಚ್ಚರಿಕೆ ನೀಡಲಾಗುತ್ತೆ. ಬಳಿಕವೂ ನಿಯಮ ಪಾಲಿಸದವರಿಗೆ ನೋಟಿಸ್ ಅಸ್ತ್ರ ಪ್ರಯೋಗಿಸಲಾಗುತ್ತೆ. ಬೆಳಗ್ಗೆ 6ರಿಂದ ರಾತ್ರಿ 10 ಗಂಟೆಯವರೆಗೆ 55 ಡಿಸೆಬಲ್. ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ 45 ಡಿಸೆಬಲ್ ಗೆ ಕೋರ್ಟ್ ಆದೇಶಿಸಿದೆ. ನಿಯಮವನ್ನ ಜಾರಿಗೆ ತರಲು ಸುಧಾರಿತ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.

ಪ್ರಾರ್ಥನಾ ಮಂದಿರಗಳ ಹಂತದಲ್ಲಿ ಸ್ಥಳೀಯ ಕಮಿಟಿ ರಚನೆಗೆ ಸೂಚನೆ ಕಮಿಟಿಯಲ್ಲಿ‌ ದೇವಸ್ಥಾನದ ಆಡಳಿತ ಮಂಡಳಿ, ಸಾರ್ವಜನಿಕರು ಇರುವ ರೀತಿ ರಚಿಸಲು ಪ್ಲ್ಯಾನ್ ನಡೆದಿದೆ. ಚರ್ಚ್, ಮಸೀದಿ, ಮಂದಿರಗಳಿಗೂ ಇದು ಅನ್ವಯವಾಗಲಿದೆ. ನೆರೆ ಮನೆಯರಿಗೆ ಶಬ್ದ ಮಾಲಿನ್ಯವಾಗದಂತೆ ಮೈಕ್ ಬಳಕೆಗೆ ಕ್ರಮ ಕೈಗೊಳ್ಳಲಾಗುತ್ತೆ. ಇನ್ಮುಂದೆ ಪ್ರಾರ್ಥನಾ ಮಂದಿರದವರೇ ಶಬ್ಧ ಮಾಲಿನ್ಯದ ವರದಿ ನೀಡಬೇಕಾಗುವ ಸಾಧ್ಯತೆ ಇದೆ. ಪ್ರಾಥನಾ ಮಂದಿರಗಳಿಗೆ ವಾರಕ್ಕೊಮ್ಮೆ ಮೈಕ್ ಬಳಕೆಯ ಡಿಸೆಬಲ್ ಮಾಪನ ವರದಿ ನೀಡುವಂತೆ ಕೇಳುವ ಸಾಧ್ಯತೆ ಇದೆ. ಕೇವಲ ಪ್ರಾರ್ಥನಾ ಮಂದಿರಗಳು ಮಾತ್ರವಲ್ಲ, ಧಾರ್ಮಿಕ ಕಾರ್ಯಕ್ರಮಗಳ ಮೇಲೂ ಮಾಲಿನ್ಯ ನಿಯಂತ್ರಣ ಮಂಡಳಿ ನಿಗಾ ಇಡಲಿದೆ. ಹೋಟೆಲ್, ಬಾರ್ & ರೆಸ್ಟೊರೆಂಟ್ ನಿಂದ ಶಬ್ಧ ಮಾಲಿನ್ಯ ವಿರುದ್ಧ ಸಾರ್ವಜನಿಕರಿಂದ ಮೌಖಿಕ ದೂರು ಹಿನ್ನೆಲೆ ಮತ್ತಷ್ಟು ಸುಧಾರಿತ ಮಾರ್ಗಸೂಚಿ ಹೊರಡಿಸಲು KPCB ತಯಾರಿ ನಡೆಸಿದೆ.

ಇದನ್ನೂ ಓದಿ: 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ; ಅಕ್ರಮದಲ್ಲಿ ಕಾಂಗ್ರೆಸ್ ಬಿಜೆಪಿ ಭಾಯಿಭಾಯಿ, ರುದ್ರಗೌಡ ಇಂದು ಕೋರ್ಟ್ಗೆ ಹಾಜರು

ಹರಿಹರಕ್ಕೆ ಸಿದ್ದರಾಮಯ್ಯ ಬಂದಾಗ ಕಾರ್ಯಕರ್ತರಿಂದ ಭಾವಿ ಮುಖ್ಯಮಂತ್ರಿಗೆ ಜಯವಾಗಲಿ ಘೋಷಣೆ!

Published On - 8:05 am, Sun, 24 April 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?