AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ಚಿತ್ರಕ್ಕೆ ಡಿಕೆ ಶಿವಕುಮಾರ್ ಫೋಟೋ ಮಾರ್ಫಿಂಗ್, ಮೂವರ ವಿರುದ್ಧ ಎಫ್​​ಐಆರ್

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಕೆಲ ಅಶ್ಲೀಲ ವಿಡಿಯೋಗಳು ವೈರಲ್ ಬೆನ್ನಲೇ ಡಿಕೆ ಶಿವಕುಮಾರ್ ಫೋಟೋವೊಂದು ಹರಿಬಿಡಲಾಗಿದೆ. ಈ ಸಂಬಂಧ ಕೆಪಿಸಿಸಿ ಕಾನೂನು ಘಟಕ ದೂರು ನೀಡಿದ್ದು. ಇದರ ಮೇರೆಗೆ ಮೂವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಅಶ್ಲೀಲ ಚಿತ್ರಕ್ಕೆ ಡಿಕೆ ಶಿವಕುಮಾರ್ ಫೋಟೋ ಮಾರ್ಫಿಂಗ್, ಮೂವರ ವಿರುದ್ಧ ಎಫ್​​ಐಆರ್
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Apr 30, 2024 | 8:13 PM

Share

ಬೆಂಗಳೂರು, (ಏಪ್ರಿಲ್ 30): ಪ್ರಜ್ವಲ್ ರೇವಣ್ಣ (Prajwal revanna) ಅವರದ್ದು ಎನ್ನಲಾದ ಕೆಲ ಅಶ್ಲೀಲ ವಿಡಿಯೋಗಳು ವೈರಲ್ ಆಗಿವೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಎಸ್​ಐಟಿ ತನಿಖೆ ನಡೆಸಿದೆ. ಇದರ ಮಧ್ಯೆ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರ ಫೋಟೋಗೆ ಬೇರೊಂದು ಅಶ್ಲೀಲ ಚಿತ್ರ ವೈರಲ್ ಆಗಿದ್ದು, ಈ ಸಂಬಂಧ ಕೆಪಿಸಿಸಿ ಕಾನೂನು ಘಟಕ ದೂರು ನೀಡಿದೆ. ಅಶ್ಲೀಲ ಚಿತ್ರಕ್ಕೆ ಡಿ.ಕೆ.ಶಿವಕುಮಾರ್ ಫೋಟೋ ಮಾರ್ಫಿಂಗ್ ಮಾಡಲಾಗಿದೆ ಎಂದು ಆರೋಪಿಸಿ ಸಂತೋಷ್, ರಾಜೇಶ್, ಕೇಸರಿ ಸಾಮ್ರಾಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ದೂರು ದಾಖಲಿಸಿದೆ.

ಬಿಜೆಪಿ ಮುಖಂಡರ ಅಶ್ಲೀಲ ಭಾವಚಿತ್ರಕ್ಕೆ ಡಿಕೆ ಶಿವಕುಮಾರ್ ಮುಖ ಜೋಡಣೆ ಮಾಡಲಾಗಿದ್ದು, ಇದೀಗ ಆ ಎಡಿಟ್ ಫೋಟೋವನ್ನು ವೈರಲ್ ಮಾಡಲಾಗಿದೆ. ಫೇಸ್​ಬುಕ್, ಯೂಟ್ಯೂಬ್, ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಹೀಗಾಗಿ ಕಾನೂಕ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾನೂನು ಘಟಕ ದೂರು ನೀಡಿದೆ. ಈ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಸಂತೋಷ್, ರಾಜೇಶ್, ಕೇಸರಿ ಸಾಮ್ರಾಟ್ ವಿರುದ್ಧ FIR ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: 3 ತಿಂಗಳ ಹಿಂದೆಯೇ ಪ್ರಜ್ವಲ್ ರೇವಣ್ಣ ವಿಡಿಯೋ ಗುಟ್ಟು ರಟ್ಟು ಮಾಡಿದ್ದ ಬಿಜೆಪಿ ನಾಯಕ

ಈ ಹಿಂದೆಯೇ ಡಿಕೆ ಶಿವಕುಮಾರ್ ಅವರ ಫೋಟೋ ಜೊತೆ ಅಶ್ಲೀಲ ಚಿತ್ರ  ಜೋಡಿಸಿ ವೈರಲ್ ಮಾಡಲಾಗಿತ್ತು. ಇದೀಗ ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳು ವೈರಲ್ ಆಗುತ್ತಿದ್ದಂತೆಯೇ ಇದೀಗ ಡಿಕೆ ಶಿವಕುಮಾರ್ ಅವರ ಎಡಿಟೆಡ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಸಂಬಂಧ ಜೆಡಿಎಸ್​, ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ-ಪ್ರತ್ಯಾರೋಪಗಳು ನಡೆದಿವೆ. ಇದರ ಬೆನ್ನಲ್ಲೇ ಇದೀಗ ಅಂತಿಮವಾಗಿ ಕೆಪಿಸಿಸಿ ಕಾನೂನು ಘಟಕ ಫೋಟೋ ಶೇರ್ ಮಾಡಿದ್ದವರ ವಿರುದ್ಧ ದೂರು ದಾಖಲಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?