AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ರಸ್ತೆ ಗುಂಡಿ: ಸಿಎಂ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಪ್ಲಾನ್​

ಬೆಂಗಳೂರಿನಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್​ ನಾಯಕರು ಅ. 21ರಂದು ಸಿಎಂ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.

ಬೆಂಗಳೂರು ರಸ್ತೆ ಗುಂಡಿ: ಸಿಎಂ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕಲು  ಕಾಂಗ್ರೆಸ್ ಪ್ಲಾನ್​
ಕಾಂಗ್ರೆಸ್ ಪಕ್ಷ
TV9 Web
| Updated By: ವಿವೇಕ ಬಿರಾದಾರ|

Updated on:Oct 19, 2022 | 3:46 PM

Share

ಬೆಂಗಳೂರು: ನಗರದಲ್ಲಿನ ರಸ್ತೆ ಗುಂಡಿಗಳನ್ನು (Pothole) ಮುಚ್ಚುವಂತೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ (Congress)​ ನಾಯಕರು ಅ. 21ರಂದು ಧರಣಿ ಮಾಡಲು ಮುಂದಾಗಿದ್ದಾರೆ. ಅಲ್ಲದೇ ರೇಸ್​​ ಕೋರ್ಸ್​ ರಸ್ತೆಯಲ್ಲಿರುವ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.

ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವಲ್ಲಿ ಸರ್ಕಾರ ವಿಫಲ: ರಾಮಲಿಂಗಾರೆಡ್ಡಿ

ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವಲ್ಲಿ ಸರ್ಕಾರ ವಿಫಲವಾಗಿದೆ. ಬೆಂಗಳೂರಿಗೆ ಸಿಎಂ ಬೊಮ್ಮಾಯಿ ಮತ್ತು ಸಚಿವರು ಅಷ್ಟ ದಿಕ್ಪಾಲಕರ ತರಹ ಇದ್ದಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಗರದ ಬಹುತೇಕ ರಸ್ತೆಗಳಲ್ಲಿ ಗುಂಡಿಗಳು ಇವೆ. ಎಲ್ಲಿಯೂ ರಸ್ತೆಗಳಲ್ಲಿ ಓಡಾಡಲು ಆಗುತ್ತಿಲ್ಲ. ಮೂರು ವರ್ಷದಿಂದ ರಸ್ತೆ ಗುಂಡಿ ಮುಚ್ಚುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ವಾಗ್ದಾಳಿ ಮಾಡಿದರು.

ರಸ್ತೆ ಗುಂಡಿಗಳ ಬಗ್ಗೆ ಹೈಕೋರ್ಟ್ ಸರ್ಕಾರದ ಮುಖ್ಯ ಆಯುಕ್ತರನ್ನು ಕರೆಸಿ ವಾರ್ನಿಂಗ್ ಮಾಡಿತ್ತು. ಆದರು ಕೂಡ ರಸ್ತೆ ಗುಂಡಿಗಳು ಕಡಿಮೆಯಾಗಿಲ್ಲ. 2008 ರಿಂದ 2013 ವರೆಗೂ ಬಿಜೆಪಿ ಅಧಿಕಾರದಲ್ಲಿದ್ದಾಗ ಎಲ್ಲ ಪ್ರಮುಖ ರಸ್ತೆಗಳು ಹಾಳಾಗಿದ್ದವು. ಬಿಜೆಪಿ ಸರಕಾರ ಬಂದಾಗ ರಸ್ತೆಗಳಿಗೆ ಆದ್ಯತೆ ನೀಡುವುದಿಲ್ಲ. ಕೇವಲ ಅವರ ಶಾಸಕರಿಗೆ ಅನುದಾನ ಕೊಟ್ಟು ಸುಮ್ಮನಾಗುತ್ತಾರೆ ಎಂದು ಆರೋಪ ಮಾಡಿದರು .

2020-21 ರಲ್ಲಿ 198 ವಾರ್ಡ್​​​ಗಳಿಗೆ ಒಂದು ಪೈಸೆ ಅನುದಾನ ಬಿಡುಗಡೆ ಮಾಡಲಿಲ್ಲ. 2021-22 ರಲ್ಲೂ ಬಿಡಿಗಾಸು ಬಿಡುಗಡೆ ಆಗಲಿಲ್ಲ. 202-23 ರ ಬಜೆಟ್​ನಲ್ಲಿ ಹೊಸ ವಾರ್ಡ್​ಗೆ 6 ಕೋಟಿ, ಹಳೆ ವಾರ್ಡ್​ಗೆ 4 ಕೋಟಿ ಕೊಟ್ಟಿದ್ದಾರೆ. ಟೆಂಡರ್ ಕರೆಯೋದಕ್ಕೆ ಇನ್ನೂ ಅನುಮತಿ ಕೊಟ್ಟಿಲ್ಲ. ಮೂರು ವರ್ಷದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಒಂದು ರೂಪಾಯಿ ಅನುದಾನ ಕೂಡ ಬಿಡುಗಡೆ ಆಗಿಲ್ಲ. ಕೊಟ್ಟಿರುವ ಬಜೆಟ್ ಕನ್ನಡಿಯೊಳಗಿನ ಗಂಟಿನ ತರಹ ಆಗಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:44 pm, Wed, 19 October 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ