AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಸಿಸಿ ಕಚೇರಿಯಲ್ಲೇ ಯೂತ್​​ ಕಾಂಗ್ರೆಸ್​​ ಕಾರ್ಯಕರ್ತರ ಮಾರಾಮಾರಿ: ದೀಪಿಕಾ ರೆಡ್ಡಿ ಸೇರಿ ಹಲವರಿಗೆ ಶೋಕಾಸ್​​ ನೋಟಿಸ್​​

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ಮಾರಾಮಾರಿ ನಿನ್ನೆ ನಡೆದಿತ್ತು. ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ವಜಾ ಪ್ರಸಂಗದಿಂದ ಕೆರಳಿದ ಬೆಂಬಲಿಗರು ಹಾಗೂ ಅಧ್ಯಕ್ಷ ಮಂಜುನಾಥ್ ಗೌಡರ ಬಣದ ಮಧ್ಯೆ ಘರ್ಷಣೆ ಉಂಟಾಗಿತ್ತು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಭಾರತೀಯ ಯುವ ಕಾಂಗ್ರೆಸ್, ಹಲವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ಈ ಬಗ್ಗೆ ಸತ್ಯಾಸತ್ಯತೆ ಪರಿಶೀಲನೆಗೆ ಸೂಚಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲೇ ಯೂತ್​​ ಕಾಂಗ್ರೆಸ್​​ ಕಾರ್ಯಕರ್ತರ ಮಾರಾಮಾರಿ: ದೀಪಿಕಾ ರೆಡ್ಡಿ ಸೇರಿ ಹಲವರಿಗೆ ಶೋಕಾಸ್​​ ನೋಟಿಸ್​​
ದೀಪಿಕಾ ರೆಡ್ಡಿ ಬಣದ ಪದಾಧಿಕಾರಿಗಳಿಗೆ ಶೋಕಾಸ್ ನೋಟಿಸ್Image Credit source: Tv9 Kannada
ಪ್ರಸನ್ನ ಗಾಂವ್ಕರ್​
| Edited By: |

Updated on: May 19, 2026 | 12:05 PM

Share

ಬೆಂಗಳೂರು, ಮೇ 19: ಯೂತ್ ಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿದಂತೆ 15 ಪದಾಧಿಕಾರಿಗಳನ್ನ ವಜಾ ಮಾಡಿರುವ ವಿಚಾರ ಸಂಬಂಧ ಯೂತ್​ ಕಾಂಗ್ರೆಸ್​​ ಕಾರ್ಯಕರ್ತರ ನಡುವೆ ನಿನ್ನೆ (ಮೇ 18) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಯೇ ಮಾರಾಮಾರಿ ನಡೆದಿತ್ತು. ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಹಾಗೂ ಅಮಾನತುಗೊಂಡಿರುವ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಬೆಂಬಲಿಗರು ಕೈ ಕೈ ಮಿಲಾಯಿಸಿದ್ದರು. ಈ ಬೆನ್ನಲ್ಲೇ ಭಾರತೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ   ನಿಗಮ್, ದೀಪಿಕಾ ರೆಡ್ಡಿ ಬಣದ ಪದಾಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಒಂದು ವಾರದೊಳಗೆ ಉತ್ತರ ನೀಡುವಂತೆ ದೀಪಿಕಾ ರೆಡ್ಡಿ, ಸಂದೀಪ್, ಮಂಜುನಾಥ್ ಶೆಟ್ಟಿ, ನಿಖಿಲ್ ಕೊಂಡಜ್ಜಿ ಸೇರಿ ಹಲವರಿಗೆ ನೋಟಿಸ್ ನೀಡಲಾಗಿದೆ.

ಮುಖ್ಯಾಂಶಗಳು

  • ಕೆಪಿಸಿಸಿ ಕಚೇರಿಯಲ್ಲೇ ಯೂತ್​​ ಕಾಂಗ್ರೆಸ್​​ ಕಾರ್ಯಕರ್ತರ ಜಗಳ
  • ಮಂಜುನಾಥ್​​ ಗೌಡ, ದೀಪಿಕಾ ರೆಡ್ಢಿ ಬೆಂಬಲಿಗರ ನಡುವೆ ವಾರ್​
  • ಕ್ರಮಕ್ಕೆ ಮುಂದಾದ AICC ಯೂತ್ ಕಾಂಗ್ರೆಸ್​​ನಿಂದ ಶೋಕಾಸ್​​ ನೋಟಿಸ್​​

ಇನ್ನು ಯೂತ್ ಕಾಂಗ್ರೆಸ್ ಪದಾಧಿಕಾರಿಗಳ ಗಲಾಟೆ ವಿಚಾರವನ್ನು ಕೆಪಿಸಿಸಿ ಅಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​​ ಗಂಭೀರವಾಗಿ ಪರಿಗಣಿಸಿದ್ದಾರೆ. ಘಟನೆ ಸಂಬಂಧ ಸತ್ಯಾಸತ್ಯತೆ ಪರಾಮರ್ಶೆ ನಡೆಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್​ಗೆ ಅವರು ಸೂಚನೆ ನೀಡಿದ್ದಾರೆ. ಅಧ್ಯಕ್ಷರ ಸೂಚನೆ ಹಿನ್ನೆಲೆ ಪದಾಧಿಕಾರಿಗಳಿಗೆ ಚಂದ್ರಶೇಖರ್ ಬುಲಾವ್ ನೀಡಿದ್ದು, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮೀಟಿಂಗ್ ನಡೆಯಲಿದೆ. ಘಟನೆ ಬಗ್ಗೆ ಜಿ.ಸಿ.ಚಂದ್ರಶೇಖರ್ ಈ ವೇಳೆ ಸಂಪೂರ್ಣ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ತೀವ್ರ ಸ್ವರೂಪ ಪಡೆದ ಕರ್ನಾಟಕ ಯೂತ್ ಕಾಂಗ್ರೆಸ್​ ಗಲಾಟೆ; ಅಧ್ಯಕ್ಷ ವಿರುದ್ಧ ಗಂಭೀರ ಆರೋಪ

ಕರ್ನಾಟಕ ಯೂತ್ ಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿದಂತೆ 15 ಪದಾಧಿಕಾರಿಗಳನ್ನ ವಜಾ ಮಾಡಿರುವುದು ಕಾರ್ಯಕರ್ತರ ನಡುವೆಯೇ ಆಕ್ರೋಶಕ್ಕೆ ಕಾರಣವಾಗಿತ್ತು. ಈ ನಡುವೆ ನೀಟ್​​​ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಪ್ರತಿಭಟನೆ ನಡೆಸಲು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಹಾಗೂ ಅಮಾನತುಗೊಂಡಿರುವ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಬೆಂಬಲಿಗರು ಪರಸ್ಪರ ಬಡಿದಾಡಿಕೊಂಡಿದ್ದರು. ಆ ಬಳಿಕ ಪ್ರತಿಕ್ರಿಯಿಸಿದ್ದ ದೀಪಿಕಾ ರೆಡ್ಡಿ ಇದು ಶಿಸ್ತಿನ ಕ್ರಮವಲ್ಲ, ವೈಯಕ್ತಿಕ ಸೇಡು ಎಂದು ಅಧ್ಯಕ್ಷ ಮಂಜುನಾಥ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಯುವ ಕಾಂಗ್ರೆಸ್ ಚುನಾವಣೆಯಲ್ಲಿ 2.95 ಲಕ್ಷ ಮತಗಳ ಪಡೆದಿದ್ದೇನೆ. ದೇಶದಲ್ಲೇ ಅತಿ ಹೆಚ್ಚು ಮತ ಪಡೆದ ಮಹಿಳಾ ಅಭ್ಯರ್ಥಿಗಳಲ್ಲಿ ನಾನೂ ಒಬ್ಬಳು. ಪುರುಷ ಪ್ರಾಬಲ್ಯದ ರಾಜಕೀಯದಲ್ಲಿ ಅವರ ವಿರುದ್ಧ ಹೋರಾಟ ನಡೆಸಿದ್ದೇನೆ. ಚುನಾವಣೆಯ ಬಳಿಕವೂ ಪಕ್ಷ ಸಂಘಟನೆಗಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದೇನೆ. ಮಂಜುನಾಥ್ ಅಭದ್ರತೆ ಮತ್ತು ಅಸೂಯೆಯಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ದೂರಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!