AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಜಮೀರ್ ಅಹ್ಮದ್​ಗೆ ಮಾರ್ಗದರ್ಶನ ನೀಡಿದ್ದೇನೆ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಈಶ್ವರಪ್ಪ ಅವರು ತಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಬಿಚ್ಚಿಬಿಚ್ಚಿ ಹೇಳ್ತಿದಾರೆ. ನಿನ್ನೆ ಒಂದಿಷ್ಟು, ಇವತ್ತು ಒಂದಿಷ್ಟು ಮಾತಾಡಿದ್ದಾರೆ. ಅವರ ಪಾಂಡಿತ್ಯ ಜನಕ್ಕೆ ಅರ್ಥ ಆಗುತ್ತಿದೆ ಎಂದು ಡಿ ಕೆ ಶಿವಕುಮಾರ್ ವ್ಯಂಗ್ಯವಾಡಿದರು.

ಶಾಸಕ ಜಮೀರ್ ಅಹ್ಮದ್​ಗೆ ಮಾರ್ಗದರ್ಶನ ನೀಡಿದ್ದೇನೆ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್ ಮತ್ತು ಜಮೀರ್ ಅಹ್ಮದ್
TV9 Web
| Edited By: |

Updated on: Aug 10, 2021 | 11:06 PM

Share

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಇಡಿ ದಾಳಿ ನಡೆಸಿದ ನಂತರ ಅವರನ್ನು ಭೇಟಿಯಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕ ಜಮೀರ್ ಅಹ್ಮದ್ ಆಸ್ತಿ ಮೇಲೆ ಇಡಿ ದಾಳಿ ಯಾಕೆ ನಡೆದಿದೆ ಎಂದು ಚರ್ಚೆ ಮಾಡಿದ್ದೇನೆ. ಅವರಿಗೆ ಕೆಲವೊಂದು ಮಾರ್ಗದರ್ಶನ ನೀಡಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.  

ಈಶ್ವರಪ್ಪ ಸಂಸ್ಕೃತದಲ್ಲಿ ಪಂಡಿತರು. ಅವರು ಚಂದವಾಗಿ ವೇದಗಳನ್ನು ಅಭ್ಯಾಸ ಮಾಡಿದ್ದಾರೆ. ಈಶ್ವರಪ್ಪ ಅವರು ತಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಬಿಚ್ಚಿಬಿಚ್ಚಿ ಹೇಳ್ತಿದಾರೆ. ನಿನ್ನೆ ಒಂದಿಷ್ಟು, ಇವತ್ತು ಒಂದಿಷ್ಟು ಮಾತಾಡಿದ್ದಾರೆ. ಅವರ ಪಾಂಡಿತ್ಯ ಜನಕ್ಕೆ ಅರ್ಥ ಆಗುತ್ತಿದೆ ಎಂದು ಡಿ ಕೆ ಶಿವಕುಮಾರ್ ವ್ಯಂಗ್ಯವಾಡಿದರು.

ಇಡಿ ಅಧಿಕಾರಿಗಳ ದಾಳಿಯ ಬಗ್ಗೆ ನನಗೂ ಅನುಭವ ಇದೆ. ಜಮೀರ್ ಬಂದರೆ ಅದನ್ನೆಲ್ಲಾ ಅವರ ಜೊತೆ ಹಂಚಿಕೊಳ್ಳುವೆ. ಈ ಬಗ್ಗೆ ನಾನು ಸಾರ್ವಜನಿಕವಾಗಿ ಮಾತನಾಡುವುದಿಲ್ಲ. ಇಡಿ ದೂರು ನೀಡಿರುವ ಬಗ್ಗೆ ಯಾರು ಹೇಳಿಕೆ ಕೊಟ್ಟಿದ್ದಾರೆ. ಹೇಳಿಕೆ ಕೊಟ್ಟವರ ಬಳಿಯೇ ದೂರಿನ ಬಗ್ಗೆ ಕೇಳಬೇಕು. ನನಗೂ ಅದಕ್ಕೆ ಯಾವುದೇ ರೀತಿಯ ಸಂಬಂಧವಿಲ್ಲ. ಶಾಸಕ ಜಮೀರ್ ಅಹ್ಮದ್ ಖಾನ್ ನಮ್ಮ ಪಕ್ಷದ ನಾಯಕ. ಅವರಿಗೆ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ಕಾನೂನು ವಿಚಾರದ ಬಗ್ಗೆ ಜಮೀರ್ ಅಹ್ಮದ್‌ಗೆ ಹೇಳಿದ್ದೇನೆ ಎಂದು ಹೇಳಿದರು.

ನಿನ್ನೆ ಮಾತನಾಡಿದ ಜಮೀರ್, ಮನೆ ವಿಚಾರವಾಗಿ ದಾಳಿ ಆಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶೀವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನೆ ಮೇಲೂ ED ದಾಳಿ ಆಗಿತ್ತು. ಹಾಗಾದರೆ ಡಿಕೆಶಿಗೂ ಐಎಂಎಗೂ ಸಂಬಂಧ ಇತ್ತಾ? ಎಂದು ಡಿ.ಕೆ.ಶಿವಕುಮಾರ್‌ಗೆ ಜಮೀರ್ ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ: 

ಇ.ಡಿ. ಅಧಿಕಾರಿಗಳು ಸಮಾಧಾನಗೊಂಡಿದ್ದಾರೆ; ಯಾವುದೇ ನೋಟಿಸ್ ಕೊಟ್ಟಿಲ್ಲ: ಶಾಸಕ ಜಮೀರ್

ಆಸ್ತಿ ಗಳಿಕೆ ವಿಚಾರವಾಗಿ ಐಟಿ ಬದಲು ಇಡಿ ತನಿಖೆ ಆಶ್ಚರ್ಯ ಮೂಡಿಸಿದೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

(KPCC President DK Shivakumar says I have given guidance to MLA Zameer Ahmed in the ED Raid case)

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ