AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ, ಜೆಡಿಎಸ್​ನ ಹಲವು ನಾಯಕರು ಸಂಪರ್ಕದಲ್ಲಿದ್ದಾರೆ: ಡಿಕೆ ಶಿವಕುಮಾರ್

ಬಿಜೆಪಿ, ಜೆಡಿಎಸ್‌ನ ಹಲವು ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ. ಅವರನ್ನು ಚನ್ನಪಟ್ಟಣದಲ್ಲೇ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಬಿಜೆಪಿ, ಜೆಡಿಎಸ್​ನ ಹಲವು ನಾಯಕರು ಸಂಪರ್ಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
TV9 Web
| Edited By: |

Updated on:May 12, 2022 | 3:27 PM

Share

ಬೆಂಗಳೂರು: ಬಿಜೆಪಿ, ಜೆಡಿಎಸ್‌ನ ಹಲವು ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ. ಅವರನ್ನು ಚನ್ನಪಟ್ಟಣದಲ್ಲೇ ಕಾಂಗ್ರೆಸ್‌ಗೆ ಸೇರಿಸಿಕೊಳ್ಳುತ್ತೇವೆ. ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷವೇ​ ಮತ್ತೆ ಅಧಿಕಾರಕ್ಕೆ ಬರುತ್ತದೆ. ಇಡೀ ರಾಜ್ಯದಲ್ಲಿ ನಾವು ಸರ್ವೆ ಮಾಡಿದ್ದೇವೆ. ನಮ್ಮ ಪಕ್ಷದ ಪರವಾಗಿ ಜನಾಭಿಪ್ರಾಯ ವ್ಯಕ್ತವಾಗಿದೆ. ಚನ್ನಪಟ್ಟಣದಲ್ಲಿ ಸಾಕಷ್ಟು ಜನರು ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ್ದಾರೆ. ಚನ್ನಪಟ್ಟಣದಲ್ಲಿ ನಾವು ಗೆಲ್ಲಲು ಸಾಧ್ಯವಿಲ್ಲ ಅಂದುಕೊಳ್ಳಬೇಡಿ. ಕ್ಷೇತ್ರದ ಜನರು ಎಲ್ಲರಿಗೂ ಅವಕಾಶ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.

ನಗರದ ಕೆಪಿಸಿಸಿ ಕಚೇರಿಯಲ್ಲಿ ಚನ್ನಪಟ್ಟಣ ಕ್ಷೇತ್ರದ ಬಿಜೆಪಿ, ಜೆಡಿಎಸ್ ನಾಯಕರು-ಕಾರ್ಯಕರ್ತರ ಕಾಂಗ್ರೆಸ್​ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗುತ್ತಿಗೆಗೆ ತೆಗೆದುಕೊಂಡವರು ಏನು ಮಾಡುತ್ತಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ಈ ವೇದಿಕೆಯಲ್ಲಿ ನಾನು ಹೇಳುವುದಿಲ್ಲ. ಕರ್ನಾಟಕ ರಾಜ್ಯದ ಜನರು ಈಗ ಬದಲಾವಣೆ ಬಯಸುತ್ತಿದ್ದಾರೆ ಎಂದು ನುಡಿದರು.

ಕರ್ನಾಟಕದ 545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಪಿಎಸ್​ಐ ನೇಮಕಾತಿಯಲ್ಲಿ ಯಾಱರ ಪಾಲು ಎಷ್ಟಿದೆ ಎನ್ನುವುದು ಗೊತ್ತಿದೆ. ಪಾಪ, ಈಗ ಎಲ್ಲವನ್ನೂ ಹುಡುಗರ ಮೇಲೆ ಹಾಕುವುದಕ್ಕೆ ಹೊರಟಿದ್ದಾರೆ. ನೇಮಕಾತಿ ಹಗರಣ ಮುಚ್ಚಿಹಾಕಲು ಇದನ್ನು ತರುತ್ತಿದ್ದಾರೆ. ಇವರು ಅಂಗಡಿ ತೆಗೆದಿದ್ದಕ್ಕೆ ತಾನೇ ಅಭ್ಯರ್ಥಿಗಳು ಬಂದಿದ್ದು. ಇವರು ಭರ್ಜರಿ ವ್ಯಾಪಾರವನ್ನೇ ಮಾಡಿದರು ಎಂದು ವ್ಯಂಗ್ಯವಾಡಿದರು.

ರಾಜ್ಯದ ಜನರು ಬದಲಾವಣೆ ಬಯಸಿದ್ದಾರೆ. ಸರ್ಕಾರ ಮತಾಂತರ ನಿಷೇಧ ಕಾನೂನು ಜಾರಿಗೆ ಮುಂದಾಗಿದೆ. ಈ ಕಾಯ್ದೆಗೂ ಬಸವಣ್ಣನ ತತ್ವಗಳಿಗೂ ಸಾಕಷ್ಟು ವ್ಯತ್ಯಾಸವಿದೆ. ಆ ಕಾನೂನಿನ ವಿರುದ್ಧ ನಾವು ಹೋರಾಟ ಮುಂದುವರಿಸುತ್ತೇವೆ. ವಿಧಾನಸಭೆಯಲ್ಲಿ ಮಸೂದೆ ಕುರಿತು ಚರ್ಚಿಸಿ ಕಾನೂನು ಜಾರಿ ಮಾಡಬೇಕಿತ್ತು. ಬಿಲ್​ ಬಗ್ಗೆ ಚರ್ಚಿಸದೆ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಗೊಂದಲ ಸರಿಪಡಿಸುತ್ತೇವೆ

ಟ್ವೀಟ್​ ಮೂಲಕ ಎಂ.ಬಿ.ಪಾಟೀಲ ಪರ ರಮ್ಯಾ ಮಾತನಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ರಮ್ಯಾ ಟ್ವೀಟ್​ ಮಾಡಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಎಂ.ಬಿ.ಪಾಟೀಲ್ ಮತ್ತು ರಮ್ಯಾ ಇಬ್ಬರೂ ನಮ್ಮ ಪಕ್ಷದವರೇ. ರಮ್ಯಾ ಟ್ವೀಟ್ ವಿಚಾರದಲ್ಲಿ ಎಲ್ಲೋ ಗೊಂದಲವಾಗಿರಬೇಕು. ಈ ಗೊಂದಲವನ್ನು ನಾವು ಸರಿಪಡಿಸಿಕೊಳ್ಳುತ್ತೇವೆ ಎಂದರು.

Published On - 3:26 pm, Thu, 12 May 22

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ