AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್​​ಗೆ ಮತ್ತೊಂದು ಹೆಸರು ಸಪ್ರೈಸ್​ ಎಂಟ್ರಿ: ಸತೀಶ್​​ಗೆ ಮುಳುವಾಗುತ್ತಾ 2 ಸ್ಥಾನಗಳ ಬೇಡಿಕೆ?

ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಅಧಿಕಾರ ಸ್ವೀಕರಿಸುವುದು ಬಹುತೇಕ ನಿಶ್ಚಿತ ಎನ್ನುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಆಕಾಂಕ್ಷಿಗಳ ರೇಸ್​​ ಜೋರಾಗಿದೆ. ಆರಂಭದಿಂದಲೂ ಸತೀಶ್​​ ಜಾರಕಿಹೊಳಿ ಹೆಸರು ಮುಂಚೂಣಿಯಲ್ಲಿತ್ತಾದರೂ ಈ ನಡುವೆ ಮತ್ತೊಂದು ಹೆಸರಿನ ಸರ್ಪ್ರೈಸ್​​ ಎಂಟ್ರಿಯಾಗಿದೆ. ಪಕ್ಷದ ಅಧ್ಯಕ್ಷ ಸ್ಥಾನದ ಜೊತೆ ಮಂತ್ರಿಗಿರಿಗೂ ಸತೀಶ್​​ ಬೇಡಿಕೆ ಇಟ್ಟಿರೋದೇ ಅವರಿಗೆ ಮುಳುವಾಗುತ್ತಾ ಎಂಬ ಲೆಕ್ಕಾಚಾರ ಶುರುವಾಗಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್​​ಗೆ ಮತ್ತೊಂದು ಹೆಸರು ಸಪ್ರೈಸ್​ ಎಂಟ್ರಿ: ಸತೀಶ್​​ಗೆ ಮುಳುವಾಗುತ್ತಾ 2 ಸ್ಥಾನಗಳ ಬೇಡಿಕೆ?
ಸತೀಶ್​​ಗೆ ಮುಳುವಾಗುತ್ತಾ 2 ಸ್ಥಾನಗಳ ಬೇಡಿಕೆ?Image Credit source: PTI
Pramod Shastri G
| Edited By: |

Updated on:May 30, 2026 | 11:53 AM

Share

ಬೆಂಗಳೂರು, ಮೇ 30: ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ನೂತನ ಸಿಎಂ ಆಯ್ಕೆ ಸಂಬಂಧ ಇಂದು (ಮೇ 30) ಸಿಎಲ್​​ಪಿ ಸಭೆ ಕರೆಯಲಾಗಿದೆ. ಡಿ.ಕೆ. ಶಿವಕುಮಾರ್ ​​ ಅವರೇ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗುವುದು ಬಹುತೇಕ ಕನ್ಫರ್ಮ್​​ ಆಗಿರುವ ಹಿನ್ನೆಲೆ ಅವರು ಹಾಲಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆಯೂ ಹಲವರು ಕಣ್ಣಿಟ್ಟಿದ್ದಾರೆ. ಹೀಗಿದ್ದರೂ ಈ ಸ್ಥಾನಕ್ಕೆ ಸತೀಶ್​​ ಜಾರಕಿಹೊಳಿ ಹೆಸರು ಈವರೆಗೂ ಮುಂಚೂಣಿಯಲ್ಲಿತ್ತು. ಆದರೆ ರಾಜ್ಯ ಕಾಂಗ್ರೆಸ್​​ನ ಅಧ್ಯಕ್ಷ ಗಾದಿಗೆ ಈಗ ಮತ್ತೋರ್ವರ ಹೆಸರು ಸಪ್ರೈಸ್​ ಎಂಟ್ರಿ ಆಗಿರೋದು ಭಾರಿ ಕುತೂಹಲ ಮೂಡಿಸಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್​​ಗೆ ಹರಿಪ್ರಸಾದ್​​ ಎಂಟ್ರಿ!

ಕೆಪಿಸಿಸಿ ಅಧ್ಯಕ್ಷರ ರೇಸ್​​ನಲ್ಲಿ ಬಿ.ಕೆ.ಹರಿಪ್ರಸಾದ್ ಹೆಸರು ದಿಢೀರ್​​ ಮುನ್ನೆಲೆಗೆ ಬಂದಿದ್ದು, ಒಬಿಸಿ ಕೋಟಾದಡಿ ಪಕ್ಷದ ಅಧ್ಯಕ್ಷ ಗಾದಿಯನ್ನು ಅವರಿಗೆ ನೀಡುವ ಸಂಬಂಧ ಚರ್ಚೆ ನಡೆದಿದೆ. ಮಂತ್ರಿಸ್ಥಾನಕ್ಕೆ ಸತೀಶ್ ಪಟ್ಟು ಹಿಡಿದರೆ ಕಾಂಗ್ರೆಸ್‌ ಹೈಕಮಾಂಡ್ ಎದುರು ಹರಿಪ್ರಸಾದ್ ಹೆಸರು ಪ್ರಸ್ತಾಪ ಸಾಧ್ಯತೆ ಇದ್ದು, ಹರಿಪ್ರಸಾದ್​ಗೆ ಕೆ.ಸಿ.ವೇಣುಗೋಪಾಲ್ ಬೆಂಬಲ ಕೂಡ ಇದೆ ಎನ್ನಲಾಗಿದೆ. ಇಂದು ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿಯೇ ಹಿರಿಯ ಶಾಸಕರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಪ್ರಸ್ತಾಪವನ್ನೂ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: 4 ಡಿಸಿಎಂ ಹುದ್ದೆಗಳ ಸೃಷ್ಟಿ ಹೊರಟ ಕಾಂಗ್ರೆಸ್ ಹೈಕಮಾಂಡ್​ಗೆ ಈಗ ಭಾರಿ ಇಕ್ಕಟ್ಟು!

ಹೈಕಮಾಂಡ್​​ಗೆ ತಲೆನೋವಾಗಿದ್ದೇನು?

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಗಳಲ್ಲಿ ಸತೀಶ್ ಜಾರಕಿಹೊಳಿ ಹೆಸರು ಮೊದಲಿನಿಂದಲೂ ಮುಂಚೂಣಿಯಲ್ಲಿತ್ತು. ಮಂತ್ರಿ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ಎರಡನ್ನೂ ಸತೀಶ್​​ ಬೇಡಿಕೆ ಇಟ್ಟಿದ್ದರು. ಆದರೆ ಅವರ ಈ ಬೇಡಿಕೆಯೇ ಹೈಕಮಾಂಡ್​​ಗೆ ತಲೆನೋವಾಗಿದೆ ಎನ್ನಲಾಗ್ತಿದೆ. ಒಂದು ವ್ಯಕ್ತಿ, ಒಂದು ಸ್ಥಾನ ಎಂಬ ನೀತಿಯನ್ನು ಕಾಂಗ್ರೆಸ್ ಹೈಕಮಾಂಡ್ ಅನುಸರಿಸುತ್ತಿದೆ. ಈ ನೀತಿಯು ಈಗಾಗಲೇ ಅನೇಕ ರಾಜ್ಯಗಳಲ್ಲಿ ಜಾರಿಯಲ್ಲಿದೆ. ಹಾಗಾಗಿ, ಜಾರಕಿಹೊಳಿ ಅವರ ಈ ಬೇಡಿಕೆ ಹೈಕಮಾಂಡ್‌ಗೆ ಸವಾಲಾಗಿದೆ.

ಸತೀಶ್​​ ಲೆಕ್ಕಾಚಾರವೇನು?

ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಮಾತ್ರ ಸ್ವೀಕರಿಸಿದರೆ, ಬೆಳಗಾವಿ ಜಿಲ್ಲೆಯಲ್ಲಿ ಅವರ ರಾಜಕೀಯ ಹಿಡಿತ ದುರ್ಬಲಗೊಳ್ಳಬಹುದು ಎಂಬ ಆತಂಕದಲ್ಲಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಅಥವಾ ಲಕ್ಷ್ಮಣ ಸವದಿ ಅವರಂತಹವರು ಜಿಲ್ಲಾ ಉಸ್ತುವಾರಿ ಸಚಿವರಾದರೆ, ಜಾರಕಿಹೊಳಿಯವರ ರಾಜಕೀಯ ಪ್ರಭಾವ ಕುಸಿಯುವ ಸಾಧ್ಯತೆಯಿದೆ. ಅವರ ಅಹಿಂದಾ ರಾಜಕಾರಣದ ಮೇಲೂ ಇದರ ಪರಿಣಾಮ ಉಂಟಾಗಬಹುದು ಎಂಬುದು ಅವರ ಲೆಕ್ಕಾಚಾರವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:50 am, Sat, 30 May 26

Follow Us
ಮೆಜೆಸ್ಟಿಕ್​​ನಲ್ಲಿ ಆದ ಕೆಟ್ಟ ಅನುಭವ ಬಿಚ್ಚಿಟ್ಟ ನಟಿ ಮೋನಿಷಾ ವಿಜಯ್
ಮೆಜೆಸ್ಟಿಕ್​​ನಲ್ಲಿ ಆದ ಕೆಟ್ಟ ಅನುಭವ ಬಿಚ್ಚಿಟ್ಟ ನಟಿ ಮೋನಿಷಾ ವಿಜಯ್
ಆಷಾಢದ ಕೊನೆಯ ಶುಕ್ರವಾರ; ಮಹಾಲಕ್ಷ್ಮೀ ಅಲಂಕಾರದಲ್ಲಿ ಚಾಮುಂಡೇಶ್ವರಿ
ಆಷಾಢದ ಕೊನೆಯ ಶುಕ್ರವಾರ; ಮಹಾಲಕ್ಷ್ಮೀ ಅಲಂಕಾರದಲ್ಲಿ ಚಾಮುಂಡೇಶ್ವರಿ
ತೆಂಗಿನ ಮರವನ್ನೇ ಹೊತ್ತೊಯ್ದ ಪುಂಡಾನೆಗಳು!
ತೆಂಗಿನ ಮರವನ್ನೇ ಹೊತ್ತೊಯ್ದ ಪುಂಡಾನೆಗಳು!
ಹುಲಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ
ಹುಲಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?