AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತೀಶ್ ಜಾರಕಿಹೊಳಿ ಹಿಂದೂ ಧರ್ಮದ ಬಗ್ಗೆ ಮಾತಾಡಿಲ್ಲ, ವಿಕಿಪಿಡಿಯಾದಲ್ಲಿರುವುದನ್ನು ಹೇಳಿದ್ದಾರೆ : ರಾಮಲಿಂಗಾ ರೆಡ್ಡಿ

ಸತೀಶ್ ಜಾರಕಿಹೊಳಿ ನಿಜವಾದ ಹಿಂದೂ ಧರ್ಮ ಪಾಲಿಸುತ್ತಿದ್ದಾರೆ. ಬಿಜೆಪಿಯವರು ಚುನಾವಣೆಗೆ ಹಿಂದೂ ಧರ್ಮ ಬಳಸಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸತೀಶ್ ಜಾರಕಿಹೊಳಿ ಹಿಂದೂ ಧರ್ಮದ ಬಗ್ಗೆ ಮಾತಾಡಿಲ್ಲ, ವಿಕಿಪಿಡಿಯಾದಲ್ಲಿರುವುದನ್ನು ಹೇಳಿದ್ದಾರೆ : ರಾಮಲಿಂಗಾ ರೆಡ್ಡಿ
ಕೆಪಿಸಿಸಿ ಕಾರ್ಯಧ್ಯಕ್ಷ ರಾಮಲಿಂಗ ರೆಡ್ಡಿ
TV9 Web
| Updated By: ವಿವೇಕ ಬಿರಾದಾರ|

Updated on:Nov 09, 2022 | 4:14 PM

Share

ಬೆಂಗಳೂರು: ಸತೀಶ್ ಜಾರಕಿಹೊಳಿ (Satish jarkiholi) ನಿಜವಾದ ಹಿಂದೂ (Hindu) ಧರ್ಮ ಪಾಲಿಸುತ್ತಿದ್ದಾರೆ. ಬಿಜೆಪಿಯವರು (BJP) ಚುನಾವಣೆಗೆ ಹಿಂದೂ ಧರ್ಮ ಬಳಸಿಕೊಳ್ಳುತ್ತಿದ್ದಾರೆ. ನಮಗೆ ಹಿಂದೂ ಧರ್ಮದ ಬಗ್ಗೆ ಗೌರವವಿದೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ (Ramalinga reddy)ಹೇಳಿದ್ದಾರೆ. ಹಿಂದೂ ಪದದ ಬಗ್ಗೆ ಸತೀಶ್ ಜಾರಕಿಹೊಳಿ ವಿವಾದಾತ್ಮಕವಾಗಿ ಹೇಳಿಕೆ ನೀಡಿರುವ ಕುರಿತು ಮಾತನಾಡಿದ ಅವರು ಸತೀಶ್ ಜಾರಕಿಹೊಳಿ ಹಿಂದೂ ಧರ್ಮದ ಬಗ್ಗೆ ಏನೂ ಮಾತಾಡಿಲ್ಲ ವಿಕಿಪಿಡಿಯಾದಲ್ಲಿ ಇರುವುದನ್ನು ಹೇಳಿದ್ದಾರೆ ಎಂದು ರಾಮಲಿಂಗಾ ರೆಡ್ಡಿ ಸಮರ್ಥಿಸಿಕೊಂಡರು.

ಮುಂದವರೆದು ನಾವು ಕಟ್ಟಿದಷ್ಟು ದೇವಸ್ಥಾನಗಳನ್ನು ಬಿಜೆಪಿಯವರು ಕಟ್ಟಿಲ್ಲ. ನಾವು ಅಧಿಕಾರದಲ್ಲಿದ್ದಾಗ ದೇವಸ್ಥಾನಗಳಿಗೆ ಹೆಚ್ಚು ಅನುದಾನವನ್ನು ಕೊಟ್ಟಿದ್ದೇವೆ. ಬಿಜೆಪಿಯವರು ಏನೂ ಕೊಡದೆ ಪ್ರಚಾರ ಪಡೆಯುತ್ತಾರೆ. ಬಿಜೆಪಿಯವರು ತಮಗೆ ಬೇಕಾದಂತೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಕೆಪಿಸಿಸಿಯಿಂದ 15 ಪ್ರಶ್ನೆಗಳು

ಪ್ರಧಾನಿ ನರೇಂದ್ರ ಮೋದಿ ಅವರು ನ. 11 ರಾಜ್ಯಕ್ಕೆ ಆಗಮಿಸಲಿದ್ದು, ಈ ವೇಳೆ ಕೆಪಿಸಿಸಿ ಪ್ರಧಾನಿಯವರಿಗೆ 15 ಪ್ರಶ್ನೆಗಳನ್ನು ಕೇಳಲು ಸಿದ್ದವಾಗಿದೆ. ಅವು 4 ವರ್ಷಗಳಿಂದ ರಾಜ್ಯ ನಿರಂತರವಾಗಿ ಪ್ರವಾಹಕ್ಕೆ ಸಿಲುಕಿದೆ.ಚುನಾವಣೆ ಸಮೀಪಿಸುತ್ತಿದ್ದಂತೆ ತಕ್ಷಣ ರಾಜ್ಯ ನೆನಪಾಯಿತೆ? ಕಳೆದ 5 ವರ್ಷಗಳಲ್ಲಿ ನೆರೆಯಿಂದಾಗಿ 2.62 ಲಕ್ಷ ಮನೆಗಳು, 1.5 ಲಕ್ಷ ಕಿ.ಮೀ. ರಸ್ತೆಗಳು, 30 ಸಾವಿರ ಸೇತುವೆಗಳು ಹಾನಿಯಾಗಿವೆ, 54.32 ಲಕ್ಷ ಹೆಕ್ಟೇರ್ ಕೃಷಿ ಹಾಗೂ ತೋಟಗಾರಿಕೆ ಬೆಳೆ ನಾಶವಾಗಿದೆ.

ರಾಜ್ಯದಲ್ಲಿ 93,648 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ.ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬಂದಿರುವ ಪರಿಹಾರ ಎಷ್ಟು?ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆಗಳಾದ ಸ್ಮಾರ್ಟ್ ಸಿಟಿ, ಜಲ್ ಜೀವನ ಮಿಷನ್, 2 ಕೋಟಿ ಉದ್ಯೋಗ ಸೇರಿದಂತೆ 2022ರೊಳಗೆ ಎಲ್ಲರಿಗೂ ಸ್ವಂತ ಸೂರು ಸಂಪೂರ್ಣವಾಗಿದ್ಯಾ? ರಸ್ತೆ ಗುಂಡಿಗೆ 20ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದಯ ಕೆಪಿಸಿಸಿ ಟ್ವೀಟ್​​ ಮೂಲಕ ಪ್ರಶ್ನೆ ಕೆಳಿದೆ.ā

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಈದಲು ಇಲ್ಲಿ ಕ್ಲಿಕ್ ಮಾಡಿ 

Published On - 2:43 pm, Wed, 9 November 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?