AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತೀಶ್ ಜಾರಕಿಹೊಳಿ ಹಿಂದೂ ಧರ್ಮದ ಬಗ್ಗೆ ಮಾತಾಡಿಲ್ಲ, ವಿಕಿಪಿಡಿಯಾದಲ್ಲಿರುವುದನ್ನು ಹೇಳಿದ್ದಾರೆ : ರಾಮಲಿಂಗಾ ರೆಡ್ಡಿ

ಸತೀಶ್ ಜಾರಕಿಹೊಳಿ ನಿಜವಾದ ಹಿಂದೂ ಧರ್ಮ ಪಾಲಿಸುತ್ತಿದ್ದಾರೆ. ಬಿಜೆಪಿಯವರು ಚುನಾವಣೆಗೆ ಹಿಂದೂ ಧರ್ಮ ಬಳಸಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸತೀಶ್ ಜಾರಕಿಹೊಳಿ ಹಿಂದೂ ಧರ್ಮದ ಬಗ್ಗೆ ಮಾತಾಡಿಲ್ಲ, ವಿಕಿಪಿಡಿಯಾದಲ್ಲಿರುವುದನ್ನು ಹೇಳಿದ್ದಾರೆ : ರಾಮಲಿಂಗಾ ರೆಡ್ಡಿ
ಕೆಪಿಸಿಸಿ ಕಾರ್ಯಧ್ಯಕ್ಷ ರಾಮಲಿಂಗ ರೆಡ್ಡಿ
TV9 Web
| Edited By: ವಿವೇಕ ಬಿರಾದಾರ|

Updated on:Nov 09, 2022 | 4:14 PM

Share

ಬೆಂಗಳೂರು: ಸತೀಶ್ ಜಾರಕಿಹೊಳಿ (Satish jarkiholi) ನಿಜವಾದ ಹಿಂದೂ (Hindu) ಧರ್ಮ ಪಾಲಿಸುತ್ತಿದ್ದಾರೆ. ಬಿಜೆಪಿಯವರು (BJP) ಚುನಾವಣೆಗೆ ಹಿಂದೂ ಧರ್ಮ ಬಳಸಿಕೊಳ್ಳುತ್ತಿದ್ದಾರೆ. ನಮಗೆ ಹಿಂದೂ ಧರ್ಮದ ಬಗ್ಗೆ ಗೌರವವಿದೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ (Ramalinga reddy)ಹೇಳಿದ್ದಾರೆ. ಹಿಂದೂ ಪದದ ಬಗ್ಗೆ ಸತೀಶ್ ಜಾರಕಿಹೊಳಿ ವಿವಾದಾತ್ಮಕವಾಗಿ ಹೇಳಿಕೆ ನೀಡಿರುವ ಕುರಿತು ಮಾತನಾಡಿದ ಅವರು ಸತೀಶ್ ಜಾರಕಿಹೊಳಿ ಹಿಂದೂ ಧರ್ಮದ ಬಗ್ಗೆ ಏನೂ ಮಾತಾಡಿಲ್ಲ ವಿಕಿಪಿಡಿಯಾದಲ್ಲಿ ಇರುವುದನ್ನು ಹೇಳಿದ್ದಾರೆ ಎಂದು ರಾಮಲಿಂಗಾ ರೆಡ್ಡಿ ಸಮರ್ಥಿಸಿಕೊಂಡರು.

ಮುಂದವರೆದು ನಾವು ಕಟ್ಟಿದಷ್ಟು ದೇವಸ್ಥಾನಗಳನ್ನು ಬಿಜೆಪಿಯವರು ಕಟ್ಟಿಲ್ಲ. ನಾವು ಅಧಿಕಾರದಲ್ಲಿದ್ದಾಗ ದೇವಸ್ಥಾನಗಳಿಗೆ ಹೆಚ್ಚು ಅನುದಾನವನ್ನು ಕೊಟ್ಟಿದ್ದೇವೆ. ಬಿಜೆಪಿಯವರು ಏನೂ ಕೊಡದೆ ಪ್ರಚಾರ ಪಡೆಯುತ್ತಾರೆ. ಬಿಜೆಪಿಯವರು ತಮಗೆ ಬೇಕಾದಂತೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಕೆಪಿಸಿಸಿಯಿಂದ 15 ಪ್ರಶ್ನೆಗಳು

ಪ್ರಧಾನಿ ನರೇಂದ್ರ ಮೋದಿ ಅವರು ನ. 11 ರಾಜ್ಯಕ್ಕೆ ಆಗಮಿಸಲಿದ್ದು, ಈ ವೇಳೆ ಕೆಪಿಸಿಸಿ ಪ್ರಧಾನಿಯವರಿಗೆ 15 ಪ್ರಶ್ನೆಗಳನ್ನು ಕೇಳಲು ಸಿದ್ದವಾಗಿದೆ. ಅವು 4 ವರ್ಷಗಳಿಂದ ರಾಜ್ಯ ನಿರಂತರವಾಗಿ ಪ್ರವಾಹಕ್ಕೆ ಸಿಲುಕಿದೆ.ಚುನಾವಣೆ ಸಮೀಪಿಸುತ್ತಿದ್ದಂತೆ ತಕ್ಷಣ ರಾಜ್ಯ ನೆನಪಾಯಿತೆ? ಕಳೆದ 5 ವರ್ಷಗಳಲ್ಲಿ ನೆರೆಯಿಂದಾಗಿ 2.62 ಲಕ್ಷ ಮನೆಗಳು, 1.5 ಲಕ್ಷ ಕಿ.ಮೀ. ರಸ್ತೆಗಳು, 30 ಸಾವಿರ ಸೇತುವೆಗಳು ಹಾನಿಯಾಗಿವೆ, 54.32 ಲಕ್ಷ ಹೆಕ್ಟೇರ್ ಕೃಷಿ ಹಾಗೂ ತೋಟಗಾರಿಕೆ ಬೆಳೆ ನಾಶವಾಗಿದೆ.

ರಾಜ್ಯದಲ್ಲಿ 93,648 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ.ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬಂದಿರುವ ಪರಿಹಾರ ಎಷ್ಟು?ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆಗಳಾದ ಸ್ಮಾರ್ಟ್ ಸಿಟಿ, ಜಲ್ ಜೀವನ ಮಿಷನ್, 2 ಕೋಟಿ ಉದ್ಯೋಗ ಸೇರಿದಂತೆ 2022ರೊಳಗೆ ಎಲ್ಲರಿಗೂ ಸ್ವಂತ ಸೂರು ಸಂಪೂರ್ಣವಾಗಿದ್ಯಾ? ರಸ್ತೆ ಗುಂಡಿಗೆ 20ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದಯ ಕೆಪಿಸಿಸಿ ಟ್ವೀಟ್​​ ಮೂಲಕ ಪ್ರಶ್ನೆ ಕೆಳಿದೆ.ā

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಈದಲು ಇಲ್ಲಿ ಕ್ಲಿಕ್ ಮಾಡಿ 

Published On - 2:43 pm, Wed, 9 November 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ