AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro:ಕೆಆರ್​ಪುರಂ-ವೈಟ್​ಫೀಲ್ಡ್ ಮೆಟ್ರೋ ಮಾರ್ಗಕ್ಕೆ CMRSನಿಂದ ಗ್ರೀನ್​ ಸಿಗ್ನಲ್​​: ಟ್ರಾಫಿಕ್​ ದಟ್ಟಣೆಗೆ ಸಿಗುತ್ತಾ ಮುಕ್ತಿ?

ಬಹು ನಿರೀಕ್ಷಿತ ನಗರದ, ಕೆಆರ್​ಪುರಂನಿಂದ ವೈಟ್​ಫೀಲ್ಡ್​​ ಮಧ್ಯೆ ಸಂಚರಿಸಲಿರುವ ಮೆಟ್ರೋ ಸುರಕ್ಷಿತವಾಗಿ ಸಂಚರಿಸಲು ಯೋಗ್ಯವಾಗಿದೆ ಎಂದು ಸಿಎಂಆರ್​ಎಸ್​ ಧೃಡಪಡಿಸಿದೆ ಎಂದು ಬಿಎಂಆರ್​​ಸಿಎಲ್​ ಹೇಳಿದೆ.

Namma Metro:ಕೆಆರ್​ಪುರಂ-ವೈಟ್​ಫೀಲ್ಡ್ ಮೆಟ್ರೋ ಮಾರ್ಗಕ್ಕೆ CMRSನಿಂದ ಗ್ರೀನ್​ ಸಿಗ್ನಲ್​​: ಟ್ರಾಫಿಕ್​ ದಟ್ಟಣೆಗೆ ಸಿಗುತ್ತಾ ಮುಕ್ತಿ?
ನಮ್ಮ ಮೆಟ್ರೋ
ವಿವೇಕ ಬಿರಾದಾರ
|

Updated on:Mar 03, 2023 | 3:45 PM

Share

ಬೆಂಗಳೂರು: ಕೆಆರ್​ಪುರಂ ಮತ್ತು ವೈಟ್​ಫೀಲ್ಡ್ ಸದಾ ಟ್ರಾಫಿಕ್​ ದಟ್ಟಣೆಯಿಂದ ಕೂಡಿರುತ್ತದೆ. ಇದನ್ನು ನಿವಾರಿಸಲು ಕೆಆರ್​ಪುರಂ-ವೈಟ್​ಫೀಲ್ಡ್ ಮಧ್ಯೆ ಮೆಟ್ರೋ ಸಂಚಾರ ಪ್ರಾರಂಭಿಸಲಾಗುತ್ತಿದೆ. ಈ ಮೆಟ್ರೋ ಲೈನ್​  ಸುರಕ್ಷಿತವಾಗಿ ಸಂಚರಿಸಲು ಯೋಗ್ಯವಾಗಿದೆ ಎಂದು ಮೆಟ್ರೋ ರೈಲ್​ ಸೇಫ್ಟಿ ಸಂಸ್ಥೆ (CMRS​) ಧೃಡಪಡಿಸಿದೆ ಎಂದು ಬೆಂಗಳೂರು ಮೆಟ್ರೋ ರೇಲ್​ ಕಾರ್ಪೋರೇಶನ್ (BMRCL)​ ಹೇಳಿದೆ. ರೈಲು ಸಂಚಾರಕ್ಕೆ ಚಾಲನೆ ನೀಡಲು ಶೀಘ್ರದಲ್ಲೇ ದಿನಾಂಕ ನಿಗದಿ ಮಾಡಲಾಗುವುದು ಎಂದು ಬಿಎಂಆರ್​​ಸಿಎಲ್ ತಿಳಿಸಿದೆ.

ಈ ಬಗ್ಗೆ ಇಂದು (ಮಾ.3) ಸಿಎಂಆರ್​ಎಸ್​ ಅಭಯ ಕುಮಾರ್​ ರೈ ಅವರು ಮಾತನಾಡಿ ಕೆಆರ್​ ಪುರಂ-ವೈಟ್​ಫೀಲ್ಡ್ ಮೆಟ್ರೋ ಲೈನ್​​ ಮತ್ತು ಈ ಲೈನ್​ ಎಲ್ಲ ರೈಲು ನಿಲ್ದಾಣಗಳ ಮೂಲಸೌಕರ್ಯಗಳನ್ನು ಪರಿಶೀಲಿಸಲಾಯಿತು. ವಿಶೇಷವಾಗಿ ಅಗ್ನಿ ಸುರಕ್ಷತೆ, ಪ್ರಯಾಣಿಕ ಸೂಚನಾ ಫಲಕಗಳನ್ನು ಪರಿಶೀಲಿಸಲಾಯಿತು ಎಂದು ಹೇಳಿದ್ದಾರೆ.

ಇನ್ನು ಬಿಎಂಆರ್​ಸಿಎಲ್​​ ಮತ್ತು ಸಿಎಂಆರ್​ಎಸ್​​ ಅಧಿಕಾರಿಗಳು ಜಂಟಿಯಾಗಿ ಕೆಆರ್​ ಪುರಂ-ವೈಟ್​ಫೀಲ್ಡ್​​​ವರೆಗಿನ 12 ಮೆಟ್ರೋ ನಿಲ್ದಾಣಗಳನ್ನು ಪರಿಶೀಲಿಸಿದ್ದಾರೆ. ಕೆಆರ್ ಪುರಂ ನಿಲ್ದಾಣದಿಂದ 1.5 ಕಿಮೀ ದೂರದಲ್ಲಿರುವ ಬೈಯಪ್ಪನಹಳ್ಳಿ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಕಾಮಗಾರಿ ನಡೆಯುತ್ತಿದೆ ಎಂದರು.

ಈ 13 ಕಿಲೋಮೀಟರ್ ಮೆಟ್ರೋ ಮಾರ್ಗದ 12 ನಿಲ್ದಾಣಗಳು ವೈಟ್‌ಫೀಲ್ಡ್, ಚನ್ನಸಂದ್ರ, ಕಾಡುಗೋಡಿ, ಪಟ್ಟಂದೂರು ಅಗ್ರಹಾರ, ಶ್ರೀ ಸತ್ಯ ಸಾಯಿ ಆಸ್ಪತ್ರೆ, ನಲ್ಲೂರು ಹಳ್ಳಿ, ಕುಂದನಹಳ್ಳಿ, ಸೀತಾರಾಮ ಪಾಳ್ಯ, ಹೂಡಿ ಜಂಕ್ಷನ್, ಗರುಡಾಚಾರ್ಪಾಳ್ಯ, ಮಹದೇವಪುರ ಮತ್ತು ಕೆಆರ್ ಪುರಂ. ವೈಟ್‌ಫೀಲ್ಡ್ ಬಳಿ ಇರುವ ಟೆಕ್ ಪಾರ್ಕ್‌ನಿಂದ ಮೆಟ್ರೋ ಮಾರ್ಗಕ್ಕೆ ನೇರ ಪ್ರವೇಶಕ್ಕಾಗಿ ಬಿಎಂಆರ್‌ಸಿಎಲ್ ಮತ್ತು ಇನ್‌ಫರ್ಮೇಷನ್ ಟೆಕ್ನಾಲಜಿ ಪಾರ್ಕ್ ಲಿಮಿಟೆಡ್ (ITPL) ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಹೊಸ ಮಾರ್ಗದಲ್ಲಿ ಮೆಟ್ರೋ ಕಾರ್ಯಾಚರಣೆ ಪ್ರಾರಂಭವಾದಾಗ ಪಟ್ಟಂದೂರು ಅಗ್ರಹಾರ ಮೆಟ್ರೋ ನಿಲ್ದಾಣ ಮತ್ತು ಟೆಕ್ ಪಾರ್ಕ್ ಎರಡನ್ನೂ ಸಂಪರ್ಕಿಸುವ ವಾಕ್‌ವೇ ಅನ್ನು ನಿರ್ಮಿಸಲಾಗುವುದು ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:28 pm, Fri, 3 March 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ