
ಬೆಂಗಳೂರು, ಸೆಪ್ಟೆಂಬರ್ 03: ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಸೆಪ್ಟೆಂಬರ್ 4ರಂದು (ಶುಕ್ರವಾರ) ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಉಪ ನಿರ್ದೇಶಕ (ಪಶುಪಾಲನೆ) ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ಹಾಗೂ ಮಾಂಸದ ಅಂಗಡಿ ಮಾಲೀಕರು ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.
🚫Meat prohibited | KRISHNA JANMASHTAMI | Sept 4th 2026
On the auspicious occasion of Sri Krishna Janmashtami, the slaughter of animals and sale of meat at slaughterhouses, as well as the sale of meat at meat shops, are completely prohibited across the Greater Bengaluru… pic.twitter.com/KO9EMYFteK
— Greater Bengaluru Authority (@GBA_office) September 3, 2026
ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪ್ರದೇಶ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಈ ಆದೇಶ ಸೆಪ್ಟೆಂಬರ್ 4ರಂದು ಒಂದು ದಿನದ ಮಟ್ಟಿಗೆ ಮಾತ್ರ ಸೀಮಿತವಾಗಿರಲಿದ್ದು, ನಿಯಮ ಉಲ್ಲಂಘಿಸುವ ಮಾಂಸ ಮಾರಾಟಗಾರರ ವಿರುದ್ಧ ಜಿಬಿಎ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ಕರ್ನಾಟಕದ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಮತ್ತು ಇತರ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮುಖ್ಯವಾದ ಧಾರ್ಮಿಕ ಹಬ್ಬಗಳು, ರಾಷ್ಟ್ರೀಯ ಹಬ್ಬಗಳು ಮತ್ತು ಅಹಿಂಸೆಯನ್ನು ಬೋಧಿಸಿದ ಮಹಾಪುರುಷರ ಜಯಂತಿಗಳ ದಿನದಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟಕ್ಕೆ ಸಂಪೂರ್ಣವಾಗಿ ನಿಷೇಧ ವಿಧಿಸುವುದು ಈ ಹಿಂದಿನಿಂದಲೂ ನಡೆದುಕೊಂಡುಬಂದಿದೆ. ಅದರಂತೆ ಈ ಬಾರಿಯೂ ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ನಗರದಲ್ಲಿ ಮಾಂಸ ಮಾರಾಟಕ್ಕೆ ಜಿಬಿಎ ಬ್ರೇಕ್ ಹಾಕಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.