AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಇಟಿ ವೇಳೆ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ: ಕೃಪಾನಿಧಿ ಕಾಲೇಜಿಗೆ ಬಿಗ್​​ ಶಾಕ್​

ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಕೃಪಾನಿಧಿ ಕಾಲೇಜಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಬಿಗ್​​ ಶಾಕ್​​ ನೀಡಿದ್ದಾರೆ. ಈ ಕಾಲೇಜಿನಲ್ಲಿ ಇನ್ನು ಮುಂದೆ ಸರ್ಕಾರಿ ಪರೀಕ್ಷೆ ನಡೆಸದಂತೆ ಸರ್ಕಾರಕ್ಕೆ ವರದಿ ನೀಡೋದಾಗಿ ತಿಳಿಸಿದ್ದಾರೆ. ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘನೆ ವಿವಾದದಿಂದ ಕಾಲೇಜಿನ ಮೂವರು ಸಿಬ್ಬಂದಿ ಈಗಾಗಲೇ ಅಮಾನತಾಗಿದ್ದರು. ಮತ್ತೊಂದೆಡೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಕಾಲೇಜಿನ ಪರವಾನಗಿ ರದ್ದುಪಡಿಸಲು ಆಗ್ರಹಿಸಿದ್ದ ಕಾರಣ ಘಟನೆ ಗಂಭೀರ ಸ್ವರೂಪ ಪಡೆದಿತ್ತು.

ಸಿಇಟಿ ವೇಳೆ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ: ಕೃಪಾನಿಧಿ ಕಾಲೇಜಿಗೆ ಬಿಗ್​​ ಶಾಕ್​
ಸಿಇಟಿ ವೇಳೆ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ್ದ ಕಾಲೇಜಿಗೆ ಬಿಗ್​​ ಶಾಕ್​
ವಿನಯ್​ ಕಾಶಪ್ಪನವರ್​
| Edited By: |

Updated on: Apr 27, 2026 | 11:58 AM

Share

ಬೆಂಗಳೂರು, ಏಪ್ರಿಲ್​​ 27: ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ ಭಾರಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಬೆಂಗಳೂರಿನ (Bengaluru) ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು ಮಾಡಲಾಗಿತ್ತು. ಈ ನಡುವೆ ಇದು ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಕಾಲೇಜು ಪರವಾನಗಿ ರದ್ದುಪಡಿಸಿ 25 ಲಕ್ಷ ರೂ.ದಂಡ ವಿಧಿಸುವಂತೆ ಮುಖ್ಯಮಂತ್ರಿಗಳಿಗೆ ದೂರು ನೀಡಿ ಆಗ್ರಹಿಸಿತ್ತು. ಆ ಬೆನ್ನಲ್ಲೇ ಕೃಪಾನಿಧಿ ಕಾಲೇಜಿಗೆ ಬಿಗ್​​ ಶಾಕ್​​ ಸಿಕ್ಕಿದೆ. ಈ ಕಾಲೇಜಿನಲ್ಲಿ ಇನ್ಮುಂದೆ ಸರ್ಕಾರಿ ಪರೀಕ್ಷೆ ನಡೆಸದಂತೆ ಸರ್ಕಾರಕ್ಕೆ ವರದಿ ಸಲ್ಲಿಸೋದಾಗಿ ಬೆಂಗಳೂರು ನಗರ ಡಿಸಿ ಜಗದೀಶ್ ತಿಳಿಸಿದ್ದಾರೆ.

ನಗರ ಡಿಸಿ ಜಗದೀಶ್​​ ಹೇಳಿದ್ದೇನು?

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿಚಾರ ಸಂಬಂಧ ಕೃತ್ಯ ಎಸಗಿರೋದು ಯಾರು ಎಂಬ ಬಗ್ಗೆ ತನಿಖೆ ಮಾಡಲಾಗಿದೆ. ವಸ್ತ್ರಸಂಹಿತೆ ಬಗ್ಗೆ ತರಬೇತಿ ನೀಡಿದ್ದರೂ ಇಷ್ಟೆಲ್ಲ ಸಮಸ್ಯೆಯಾಗಿದೆ. ಜನಿವಾರ ಘಟನೆಯಲ್ಲಿ ಕರ್ತವ್ಯ ಲೋಪವಾಗಿರುವ ಕಾರಣ ಕೃಪಾನಿಧಿ ಕಾಲೇಜಿನಲ್ಲಿ ಇನ್ಮುಮುಂದೆ ಸರ್ಕಾರಿ ಪರೀಕ್ಷೆಗಳನ್ನು ನಡೆಸದಂತೆ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡುತ್ತೇವೆ. ಪರೀಕ್ಷಾರ್ಥಿಗಳ ಜನಿವಾರvನ್ನು ಉದ್ದೇಶಪೂರ್ವಕವಾಗಿ ತೆಗಿಸಲಾಗಿರುವ ಕಾರಣ ಕೃಪಾನಿಧಿ ಕಾಲೇಜಿನಲ್ಲಿ ಇನ್ನು ಮುಂದೆ ಪರೀಕ್ಷಾ ಕೇಂದ್ರ ನೀಡದಂತೆ ವರದಿ ನೀಡುತ್ತೇವೆ ಎಂದು ಬೆಂಗಳೂರು ನಗರ ಡಿಸಿ ಜಗದೀಶ್ ತಿಳಿಸಿದ್ದಾರೆ.

ಇದನ್ನೂ ಓದಿ: ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿ ಜನಿವಾರ ತೆಗೆಸಿದ ಆರೋಪ: ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು

ತನಿಖೆಗೆ ಆಗ್ರಹಿಸಿದ್ದ KEA

2026ನೇ ಸಾಲಿನ ಸಿಇಟಿ ಪರೀಕ್ಷೆ ವೇಳೆ ಬೆಂಗಳೂರು ಕೇಂದ್ರದಲ್ಲಿ ಏಪ್ರಿಲ್​​ 23ರ ಭೌತಶಾಸ್ತ್ರ ವಿಷಯದ ಪರೀಕ್ಷೆಗೆ ಹಾಜರಾಗಲು ಬಂದಿದ್ದ ಕೆಲವು ಅಭ್ಯರ್ಥಿಗಳ ಜನಿವಾರವನ್ನು ತೆಗೆಸಲು ಅಲ್ಲಿಯ ಸಿಬ್ಬಂದಿಗಳು ಸೂಚಿಸಿರುತ್ತಾರೆಂದು, ನಂತರ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಿರುತ್ತಾರೆ ಎಂದು ಮಾಧ್ಯಮಗಳ ಮೂಲಕ ತಿಳಿದುಬಂದಿದೆ. ಇದೊಂದು ಸೂಕ್ಷ್ಮ ವಿಚಾರವಾಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಹಳ ಸ್ಪಷ್ಟವಾಗಿ ವಸ್ತ್ರ ಸಂಹಿತೆಯ ಬಗ್ಗೆ ವಿವರಿಸಿದೆ. ಕಳೆದ ವರ್ಷದಲ್ಲಿ ನಡೆದ ಇದೇ ತರಹದ ಘಟನೆ ಉಲ್ಲೇಖಿಸಿ ಜನಿವಾರ, ಲಿಂಗ ಇತ್ಯಾದಿ ಧಾರ್ಮಿಕ ದಿರಿಸುಗಳನ್ನು ತೆಗೆಯಬಾರದೆಂದು ಸ್ಪಷ್ಟವಾಗಿ ತರಬೇತಿಯಲ್ಲಿ ತಿಳಿಸಲಾಗಿದೆ. ಆದರೂ ಇಂತಹ ಘಟನೆ ನಡೆದಿದ್ದರೆ ಯಾರೋ ಉದ್ದೇಶ ಪೂರ್ವಕವಾಗಿ ಮಾಡಿದಂತೆ ಮೇಲ್ನೋಟಕ್ಕೆ ಕಂಡುಬರುತ್ತಿದೆ. ಹೀಗಾಗಿ ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ವಿಚಾರಣೆ ನಡೆಸಿ ನಿಯಮಾನುಸಾರ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಪೂರ್ಣ ವರದಿ ಸಲ್ಲಿಸುವಂತೆ ಬೆಂಗಳೂರು ನಗರ ಡಿಸಿಗೆ ಪತ್ರ ಬರೆದು KEA ಕೂಡ ಆಗ್ರಹಿಸಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ