AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಕ್ರಮ ಆರೋಪ; ಚುನಾವಣಾ ಆಯೋಗಕ್ಕೆ ಕೆಎಸ್​​ ಈಶ್ವರಪ್ಪ ದೂರು

ಪುತ್ರನಿಗೆ ಲೋಕಸಭಾ ಟಿಕೆಟ್ ಕೈತಪ್ಪಿದ್ದಕ್ಕೆ ತಾವೇ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ನಿಂತಿದ್ದ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರು, ಇಂದು(ಮೇ,14) ಬೆಂಗಳೂರಿನ ಅರಮನೆ ರಸ್ತೆಯಲ್ಲಿನ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಭೇಟಿ ನೀಡಿ, ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಕ್ರಮವಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಕ್ರಮ ಆರೋಪ; ಚುನಾವಣಾ ಆಯೋಗಕ್ಕೆ ಕೆಎಸ್​​ ಈಶ್ವರಪ್ಪ ದೂರು
KS Eshwarappa complaint to Election Commission
ಕಿರಣ್​ ಹನಿಯಡ್ಕ
| Edited By: |

Updated on: May 14, 2024 | 3:45 PM

Share

ಬೆಂಗಳೂರು, ಮೇ.14: ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್​ಗೆ ಕಣ್ಣೀಟ್ಟಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ(K. S. Eshwarappa) ಅವರು, ಹೇಗಾದರೂ ಮಾಡಿ ಅದನ್ನು ಪುತ್ರನಿಗೆ ಕೊಡಿಸುವ ಧಾವಂತದಲ್ಲಿದ್ದರು. ಆದರೆ, ಕೊನೆ ಕ್ಷಣದಲ್ಲಿ ಟಿಕೆಟ್​ ಕೈ ತಪ್ಪಿತ್ತು. ಈ ಹಿನ್ನಲೆ ಶಿವಮೊಗ್ಗ ಲೋಕಸಭಾ ಕ್ಷೇತ್ರ(Shimoga Lok Sabha Constituency)ದಿಂದ ಪಕ್ಷೇತರವಾಗಿ ತಾವೇ ಸ್ಪರ್ಧಿಸಿದ್ದಾರೆ. ಅದರಂತೆ ‘ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಕ್ರಮವಾಗಿದೆ ಎಂದು ಆರೋಪಿಸಿ, ಜೊತೆಗೆ ಪೆನ್​ಡ್ರೈವ್ ಸಮೇತ ಅಕ್ರಮದ ಕುರಿತು ಇಂದು(ಮೇ.14) ಬೆಂಗಳೂರಿನ ಅರಮನೆ ರಸ್ತೆಯಲ್ಲಿನ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಭೇಟಿ ನೀಡಿ​ ದೂರು ನೀಡಿದರು.

ಇದೇ ವೇಳೆ ‘ನನ್ನನ್ನು ಬಿಜೆಪಿಯಿಂದ ತಾತ್ಕಾಲಿಕವಾಗಿ ಹೊರ ಹಾಕಿದ್ದಾರೆ. ಈ ಹಿಂದೆ ಜಗದೀಶ್ ಶೆಟ್ಟರ್​​ ಅವರನ್ನು ಆರು ವರ್ಷ ಹೊರ ಹಾಕಿದ್ದರು. ಯಡಿಯೂರಪ್ಪ ಹೋಗಿ ಕಾಲು ಹಿಡಿದು ಮತ್ತೆ ಕರೆತಂದರು. ನಾನು ಈ ಅಮಾನತನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ನಾನು ಚುನಾವಣೆ ಗೆಲ್ಲುತ್ತೇನೆ, ಮೋದಿ ಪರ ಕೈ ಎತ್ತುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ:ಹಿಂದೂ ಸಮಾಜವನ್ನು ಜಾತಿಗಳ ಹೆಸರಲ್ಲಿ ಒಡೆಯುವ ಕೆಲಸ ರಾಜಕೀಯ ಪಕ್ಷಗಳು ಮಾಡಿವೆ: ಕೆಎಸ್ ಈಶ್ವರಪ್ಪ

ಬಳಿಕ ಮಾತನಾಡಿ, ‘ಪ್ರಜ್ವಲ್ ಪ್ರಕರಣದ ಬಗ್ಗೆ ಮಾತಾಡಲು ಅಸಹ್ಯ ಆಗುತ್ತದೆ. ಇವರ ರಾಜಕೀಯ ಕುತಂತ್ರಕ್ಕೆ ಜನ‌ ತಲೆ ತಗ್ಗಿಸುವಂತಾಗಿದೆ. ಹೆಣ್ಣು ಮುಂದಿಟ್ಟುಕೊಂಡು ರಾಜಕೀಯ ಮಾಡುವರು ದ್ರೋಹಿಗಳು, ರಾಜ್ಯದಲ್ಲಿ ಹೆಣ್ಣಿನ ಅಪಮಾನದ ಬಗ್ಗೆ ಇಷ್ಟು ಚರ್ಚೆ ಆಗುತ್ತಿದೆ. ಇದು ನಾಚಿಕೆಗೇಡು. ಕೂಡಲೇ ಈ ಪ್ರಜ್ವಲ್​​ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಸಿಬಿಐಗೆ ಕೊಡಲು ಯಾಕೆ ಸಿಎಂ, ಡಿಸಿಎಂ ಹಿಂಜರೀತಿದ್ದಾರೆ?, ನಿಷ್ಪಕ್ಷಪಾತವಾಗಿ ತನಿಖೆ ನಡೆಯಲು ಸಿಬಿಐಗೆ ವಹಿಸಲಿ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು
ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಮಕರ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಮಕರ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ಬೃಹತ್ ಪ್ರತಿಭಟನೆ
ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ಬೃಹತ್ ಪ್ರತಿಭಟನೆ
ಅಕ್ರಮ ರೆಸಾರ್ಟ್​​ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ
ಅಕ್ರಮ ರೆಸಾರ್ಟ್​​ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ
ಚಂದ್ರ ಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ
ಚಂದ್ರ ಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ