AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSAT: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ಕೋರ್ಟ್ ಕೇಸ್ ಮಾನಿಟರಿಂಗ್ ಸಿಸ್ಟಮ್ ಜಾರಿ!

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ಮಹತ್ವದ ಮತ್ತು ದೂರಗಾಮಿ ಪರಿಣಾಮ ಬೀರಬಹುದಾದ ಕೋರ್ಟ್ ಕೇಸ್ ಮಾನಿಟರಿಂಗ್ ಸಿಸ್ಟಮ್ (CCMS) ಜಾರಿಗೆ ಬಂದಿದೆ.

KSAT: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ಕೋರ್ಟ್ ಕೇಸ್ ಮಾನಿಟರಿಂಗ್ ಸಿಸ್ಟಮ್ ಜಾರಿ!
ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್
TV9 Web
| Edited By: |

Updated on: Nov 12, 2022 | 6:33 PM

Share

ಬೆಂಗಳೂರು: ಸರ್ಕಾರಿ ಇಲಾಖೆಗಳು ಮತ್ತು ನ್ಯಾಯಾಲಯದ ನಡವೆ ಸಂಪರ್ಕ ಸಾಧಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ಮಹತ್ವದ ಮತ್ತು ದೂರಗಾಮಿ ಪರಿಣಾಮ ಬೀರಬಹುದಾದ ಕೋರ್ಟ್ ಕೇಸ್ ಮಾನಿಟರಿಂಗ್ ಸಿಸ್ಟಮ್ (CCMS) ಜಾರಿಗೆ ಬಂದಿದೆ. ಈ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (KSAT) ಅಧ್ಯಕ್ಷರು ಇತರೆ ನ್ಯಾಯಾಧೀಶರ ಸಮ್ಮುಖದಲ್ಲಿ ಬುಧವಾರ (ನ. 09) ಉದ್ಘಾಟಿಸಲಾಯಿತು. CCMS ವ್ಯವಸ್ಥೆಯನ್ನು IAS ಅಧಿಕಾರಿ ಮನಿಶ್ ಮೌದ್ಗಿಲ್ (Munish Moudgil IAS) ಮತ್ತು NIC ಅಧಿಕಾರಿಗಳ ತಂಡವು ಹಿರಿಯ ತಂತ್ರಜ್ಞಾನ ನಿರ್ದೇಶಕ ಶ್ರೀ ವಿಶ್ವನಾಥ್ ಅವರ ಮಾರ್ಗದರ್ಶನದಲ್ಲಿ ಅಭಿವೃದ್ಧಿಪಡಿಸಿದೆ.

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಬಗ್ಗೆ

ಕೇಂದ್ರ ಮತ್ತು ರಾಜ್ಯ ಸೇವೆಗಳು ಹಾಗೂ ಇನ್ನಿತರ ಸಂಬಂಧಿತ ಪ್ರಾಧಿಕಾರಗಳಡಿಯ ಹುದ್ದೆಗಳ ನೇಮಕಾತಿ ಮತ್ತು ಸೇವಾ ಷರತ್ತುಗಳಿಗೆ ಸಂಬಂಧಿಸಿದ ಪ್ರಕರಣಗಳ ದೂರು ಮತ್ತು ವಿವಾದಗಳಿಗೆ ಸಂಬಂಧಿಸಿದ ವಿಚಾರಣೆ ಅಥವಾ ನ್ಯಾಯ ನಿರ್ಣಯಗಳನ್ನು ನೀಡುವ ಸಲುವಾಗಿ ಆಡಳಿತ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಈ ಮುಂಚೆ ಯಾವುದೇ ಅಧಿಕಾರಿ ಬೇರೆ ಇನ್ನೊಬ್ಬ ಅಧಿಕಾರಿಯ ವಿರುದ್ಧ ಕೇಸ್​ ಹಾಕಿದರೆ, ಭರ್ತಿ ತಡೆಹಿಡಿದಿದ್ದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಯುತ್ತಿರಲಿಲ್ಲ. ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಮೂಲಕ ನ್ಯಾಯ ಕೇಳಬೇಕಾಗಿತ್ತು. KSAT ಸೇವಾ ನಿಯಮದಂತೆ ಕೆಲಸ ಮಾಡುತ್ತದೆ.

ಕೋರ್ಟ್ ಕೇಸ್ ಮಾನಿಟರಿಂಗ್ ಸಿಸ್ಟಮ್ ಹೇಗೆ ಕಾರ್ಯನಿರ್ವಹಿಸುತ್ತದೆ:

(1) ಕೋರ್ಟ್ ಕೇಸ್ ಮಾನಿಟರಿಂಗ್ ವ್ಯವಸ್ಥೆಯು KSAT ಅನ್ನು ಸರ್ಕಾರದ ಎಲ್ಲಾ ಇಲಾಖೆಗಳೊಂದಿಗೆ ವಿದ್ಯುನ್ಮಾನವಾಗಿ ಸಂಪರ್ಕಿಸುತ್ತದೆ. ಎಲ್ಲಾ ಡೆಪ್ಯುಟಿ ಕಮಿಷನರ್‌ಗಳು, ಸಿಇಒಗಳು ಮತ್ತು ಇತರ ಇಲಾಖೆಗಳ ಮುಖ್ಯಸ್ಥರು ಇದರಲ್ಲಿ ಭಾಗಿಯಾಗುತ್ತಾರೆ.

(2) KSAT ನಲ್ಲಿ ದಾಖಲಿಸಲಾದ ಯಾವುದೇ ಪ್ರಕರಣವು ವಿದ್ಯುನ್ಮಾನವಾಗಿ ಸಂಬಂಧಪಟ್ಟ ಇಲಾಖೆ/DC/CEO/HOD ಅವರ ಗಮನಕ್ಕೆ ಹರಿದುಬರುತ್ತದೆ. ಅರ್ಜಿ ಸಹ ಪೂರ್ಣ ಸ್ಕ್ಯಾನ್ ಆಗಿ ಅವರ ಕೈಸೇರುತ್ತದೆ. KSATನ ಎಲ್ಲಾ ಆದೇಶಗಳು ಸಹ ಸರ್ಕ್ಯುಲೇಟ್ ಆಗುತ್ತದೆ.

(3) ಸರ್ಕಾರಿ ಇಲಾಖೆ/ಡಿಸಿ/ಸಿಇಒ/ಎಚ್‌ಒಡಿ ತೆಗೆದುಕೊಂಡ ಕ್ರಮಗಳು ಪ್ಯಾರಾಗೆ ಅನುಗುಣವಾದ ಟೀಕೆಗಳು, ಆಕ್ಷೇಪಣಾ ಹೇಳಿಕೆಗಳು ಮತ್ತು ಕೆ.ಎಸ್.ಎ.ಟಿ ಆದೇಶಗಳ ಅನುಸರಣೆ ಅಫಿಡವಿಟ್‌ಗಳು ಕೆ.ಎಸ್.ಎ.ಟಿ AG ಅವರ ಕಚೇರಿಗೆ ಮತ್ತು ಸರ್ಕಾರಿ ವಕೀಲರಿಗೆ ವಿದ್ಯುನ್ಮಾನವಾಗಿ ಕೈಸೇರುತ್ತದೆ.

(4) ದೈನಂದಿನ ಆದೇಶಗಳು, ಸೂಚಿತ ಪಟ್ಟಿ, ಎಲ್ಲಾ ಹಂತದ ಮಾಹಿತಿಯೂ ಸಹ ಲಭಿಸುತ್ತದೆ. ಇದು ಇಡೀ ವ್ಯವಸ್ಥೆಯನ್ನು ಪಾರದರ್ಶಕ ಮತ್ತು ಪ್ರತಿ ಸ್ಪಂದನೆಯಾಗಿಸುತ್ತದೆ ಎಂದು ಮನೀಶ್ ಮೌದ್ಗಿಲ್, ಐಎಎಸ್, ನೋಡಲ್ ಸಿಸಿಎಂಎಸ್ ಅವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ