AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಭೂಕಂಪದ ಯಾವುದೇ ಲಕ್ಷಣ ದಾಖಲಾಗಿಲ್ಲ; ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಸ್ಪಷ್ಟನೆ

ಬೆಂಗಳೂರು ನಗರದಲ್ಲಿ ಭೂಕಂಪದ ಯಾವುದೇ ಲಕ್ಷಣಗಳು ದಾಖಲಾಗಿಲ್ಲ ಎಂದು ಕೆಎಸ್​ಎನ್​ಡಿಎಮ್​ಸಿ ಸ್ಪಷ್ಟನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು: ಭೂಕಂಪದ ಯಾವುದೇ ಲಕ್ಷಣ ದಾಖಲಾಗಿಲ್ಲ; ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಸ್ಪಷ್ಟನೆ
ಬೆಂಗಳೂರು (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 26, 2021 | 2:29 PM

Share

ಬೆಂಗಳೂರು: ನಗರದಲ್ಲಿ ‌ಭೂಕಂಪ ಆಗಿಲ್ಲ. ಭೂಕಂಪದ ಯಾವುದೇ ಲಕ್ಷಣಗಳು ದಾಖಲಾಗಿಲ್ಲ ಎಂದು ಬೆಂಗಳೂರಿನ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಯಿಂದ ಸ್ಪಷ್ಟನೆ ನೀಡಿದೆ. ಆದರೆ ಶಬ್ದ ಹೇಗೆ ಬಂತು ಎಂಬ ಬಗ್ಗೆ ಅಧಿಕಾರಿಗಳಿಗಳು, ತಜ್ಞರಿಗೂ ಸದ್ಯಕ್ಕೆ ಮಾಹಿತಿ ಇಲ್ಲ ಎನ್ನಲಾಗಿದ್ದು, ಈ ಕುರಿತು ಇನ್ನಷ್ಟೇ ಮಾಹಿತಿ ತಿಳಿದುಬರಬೇಕಿದೆ. ಈ ಹಿಂದೆ ಬೆಂಗಳೂರಿನ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ವರದಿಯಾಗಿತ್ತು. ರಾಜರಾಜೇಶ್ವರಿ ನಗರ, ಕೆಂಗೇರಿ, ಕಗ್ಗಲೀಪುರ, ಹೆಮ್ಮಿಗೆಪುರ, ಜ್ಞಾನಭಾರತಿನಗರ, ಮೈಸೂರು ರಸ್ತೆಯ ಕೆಲ ಏರಿಯಾದಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿತ್ತು. ಎರಡು ಸಲ ಭೂಮಿ ಕಂಪಿಸಿದ ಅನುಭವವಾಗಿದ್ದು, ಮೊದಲ ಸಲ ಲಘುವಾಗಿ, ನಂತರ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿತ್ತು. ಆದರೆ ಇದೀಗ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಸ್ಪಷ್ಟನೆ ನೀಡಿದ್ದು, ಭೂಮಿ ಕಂಪಿಸಿಲ್ಲ ಎಂದು ಸ್ಪಷ್ಟನೆ ನೀಡಿದೆ.

‘‘ರಾಜರಾಜೇಶ್ವರಿ ನಗರ, ಕೆಂಗೇರಿ, ಕಗ್ಗಲೀಪುರ, ಹೆಮ್ಮಿಗೆಪುರ, ಜ್ಞಾನಭಾರತಿನಗರ ಮೊದಲಾದೆಡೆ 11.50 ರಿಂದ 12.15 ವರೆಗೆ ಭೂಮಿ ಕಂಪಿಸಿದ ವರದಿಗಳನ್ನು ಆಧರಿಸಿ, ಮಾಪಕದಲ್ಲಿ ಮಾಹಿತಿ ಇದೆಯೇ ಎಂದು ಪರಿಶೀಲಿಸಲಾಯಿತು. ಆದರೆ ಯಾವುದೇ ಕಂಪನದ ಅಲೆಗಳು ದಾಖಲಾಗಿಲ್ಲ’’ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ನೀಡಿರುವ ಮಾಹಿತಿ:

KSNDMC note on Bengaluru earthquake

ಕೆಎಸ್​​ಎನ್​ಎಮ್​ಡಿಸಿ ನೀಡಿರುವ ಸ್ಪಷ್ಟನೆ

ಭೂಕಂಪದ ಕುರಿತು ಸಚಿವ ಬಿಸಿ ಪಾಟೀಲ್ ಹೇಳಿಕೆ: ಇಲಾಖೆಯಿಂದ ಭೂಕಂಪದ ಬಗ್ಗೆ ಮಾಹಿತಿ ಇಲ್ಲ ಎಂದು ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ. ಕಳೆದ ಬಾರ ಕಲಬುರ್ಗಿ ಭಾಗದಲ್ಲಿ ಆದಾಗ ಕಂದಾಯ ಸಚಿವರು ಬಂದು ವಿಚಾರಣೆ ಮಾಡಿದ್ದಾರೆ. ಇಲಾಖೆಯಿಂದ ಅಗತ್ಯವಿದ್ದರೆ ಪರಿಶೀಲನೆ ಮಾಡಿಸುತ್ತೇವೆ. ಇವತ್ತಿನ ಸದ್ದಿನ ಬಗ್ಗೆ ಮಾಹಿತಿ ಬಂದಿಲ್ಲ. ನಮ್ಮ ಇಲಾಖೆಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದುಕೊಳ್ಳುತ್ತೇವೆ ಎಂದು ಅವರು ನುಡಿದಿದ್ದಾರೆ.

ಇದನ್ನೂ ಓದಿ:

Bengaluru Earthquake: ಬೆಂಗಳೂರಿನಲ್ಲಿ ಎರಡೆರಡು ಬಾರಿ ಭೂಕಂಪದ ಅನುಭವ; ಮಂಡ್ಯದಲ್ಲಿ ನಿಗೂಢ ಶಬ್ದಕ್ಕೆ ಬೆಚ್ಚಿಬಿದ್ದ ಜನ!

ಇದ್ದೂ ಇಲ್ಲದಂತಾದ ಸೋಲಾರ್ ಬೀದಿ ದೀಪಗಳು, ಅಳವಡಿಸುವಾಗ ಇದ್ದ ಜೋಷ್ ನಿರ್ವಹಣೆಯಲ್ಲಿ ಇಲ್ಲ

Published On - 1:45 pm, Fri, 26 November 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ