AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಭೂಕಂಪದ ಯಾವುದೇ ಲಕ್ಷಣ ದಾಖಲಾಗಿಲ್ಲ; ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಸ್ಪಷ್ಟನೆ

ಬೆಂಗಳೂರು ನಗರದಲ್ಲಿ ಭೂಕಂಪದ ಯಾವುದೇ ಲಕ್ಷಣಗಳು ದಾಖಲಾಗಿಲ್ಲ ಎಂದು ಕೆಎಸ್​ಎನ್​ಡಿಎಮ್​ಸಿ ಸ್ಪಷ್ಟನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು: ಭೂಕಂಪದ ಯಾವುದೇ ಲಕ್ಷಣ ದಾಖಲಾಗಿಲ್ಲ; ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಸ್ಪಷ್ಟನೆ
ಬೆಂಗಳೂರು (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 26, 2021 | 2:29 PM

Share

ಬೆಂಗಳೂರು: ನಗರದಲ್ಲಿ ‌ಭೂಕಂಪ ಆಗಿಲ್ಲ. ಭೂಕಂಪದ ಯಾವುದೇ ಲಕ್ಷಣಗಳು ದಾಖಲಾಗಿಲ್ಲ ಎಂದು ಬೆಂಗಳೂರಿನ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಯಿಂದ ಸ್ಪಷ್ಟನೆ ನೀಡಿದೆ. ಆದರೆ ಶಬ್ದ ಹೇಗೆ ಬಂತು ಎಂಬ ಬಗ್ಗೆ ಅಧಿಕಾರಿಗಳಿಗಳು, ತಜ್ಞರಿಗೂ ಸದ್ಯಕ್ಕೆ ಮಾಹಿತಿ ಇಲ್ಲ ಎನ್ನಲಾಗಿದ್ದು, ಈ ಕುರಿತು ಇನ್ನಷ್ಟೇ ಮಾಹಿತಿ ತಿಳಿದುಬರಬೇಕಿದೆ. ಈ ಹಿಂದೆ ಬೆಂಗಳೂರಿನ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ವರದಿಯಾಗಿತ್ತು. ರಾಜರಾಜೇಶ್ವರಿ ನಗರ, ಕೆಂಗೇರಿ, ಕಗ್ಗಲೀಪುರ, ಹೆಮ್ಮಿಗೆಪುರ, ಜ್ಞಾನಭಾರತಿನಗರ, ಮೈಸೂರು ರಸ್ತೆಯ ಕೆಲ ಏರಿಯಾದಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿತ್ತು. ಎರಡು ಸಲ ಭೂಮಿ ಕಂಪಿಸಿದ ಅನುಭವವಾಗಿದ್ದು, ಮೊದಲ ಸಲ ಲಘುವಾಗಿ, ನಂತರ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿತ್ತು. ಆದರೆ ಇದೀಗ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಸ್ಪಷ್ಟನೆ ನೀಡಿದ್ದು, ಭೂಮಿ ಕಂಪಿಸಿಲ್ಲ ಎಂದು ಸ್ಪಷ್ಟನೆ ನೀಡಿದೆ.

‘‘ರಾಜರಾಜೇಶ್ವರಿ ನಗರ, ಕೆಂಗೇರಿ, ಕಗ್ಗಲೀಪುರ, ಹೆಮ್ಮಿಗೆಪುರ, ಜ್ಞಾನಭಾರತಿನಗರ ಮೊದಲಾದೆಡೆ 11.50 ರಿಂದ 12.15 ವರೆಗೆ ಭೂಮಿ ಕಂಪಿಸಿದ ವರದಿಗಳನ್ನು ಆಧರಿಸಿ, ಮಾಪಕದಲ್ಲಿ ಮಾಹಿತಿ ಇದೆಯೇ ಎಂದು ಪರಿಶೀಲಿಸಲಾಯಿತು. ಆದರೆ ಯಾವುದೇ ಕಂಪನದ ಅಲೆಗಳು ದಾಖಲಾಗಿಲ್ಲ’’ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ನೀಡಿರುವ ಮಾಹಿತಿ:

KSNDMC note on Bengaluru earthquake

ಕೆಎಸ್​​ಎನ್​ಎಮ್​ಡಿಸಿ ನೀಡಿರುವ ಸ್ಪಷ್ಟನೆ

ಭೂಕಂಪದ ಕುರಿತು ಸಚಿವ ಬಿಸಿ ಪಾಟೀಲ್ ಹೇಳಿಕೆ: ಇಲಾಖೆಯಿಂದ ಭೂಕಂಪದ ಬಗ್ಗೆ ಮಾಹಿತಿ ಇಲ್ಲ ಎಂದು ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ. ಕಳೆದ ಬಾರ ಕಲಬುರ್ಗಿ ಭಾಗದಲ್ಲಿ ಆದಾಗ ಕಂದಾಯ ಸಚಿವರು ಬಂದು ವಿಚಾರಣೆ ಮಾಡಿದ್ದಾರೆ. ಇಲಾಖೆಯಿಂದ ಅಗತ್ಯವಿದ್ದರೆ ಪರಿಶೀಲನೆ ಮಾಡಿಸುತ್ತೇವೆ. ಇವತ್ತಿನ ಸದ್ದಿನ ಬಗ್ಗೆ ಮಾಹಿತಿ ಬಂದಿಲ್ಲ. ನಮ್ಮ ಇಲಾಖೆಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದುಕೊಳ್ಳುತ್ತೇವೆ ಎಂದು ಅವರು ನುಡಿದಿದ್ದಾರೆ.

ಇದನ್ನೂ ಓದಿ:

Bengaluru Earthquake: ಬೆಂಗಳೂರಿನಲ್ಲಿ ಎರಡೆರಡು ಬಾರಿ ಭೂಕಂಪದ ಅನುಭವ; ಮಂಡ್ಯದಲ್ಲಿ ನಿಗೂಢ ಶಬ್ದಕ್ಕೆ ಬೆಚ್ಚಿಬಿದ್ದ ಜನ!

ಇದ್ದೂ ಇಲ್ಲದಂತಾದ ಸೋಲಾರ್ ಬೀದಿ ದೀಪಗಳು, ಅಳವಡಿಸುವಾಗ ಇದ್ದ ಜೋಷ್ ನಿರ್ವಹಣೆಯಲ್ಲಿ ಇಲ್ಲ

Published On - 1:45 pm, Fri, 26 November 21

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ