AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಭೂಕಂಪದ ಯಾವುದೇ ಲಕ್ಷಣ ದಾಖಲಾಗಿಲ್ಲ; ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಸ್ಪಷ್ಟನೆ

ಬೆಂಗಳೂರು ನಗರದಲ್ಲಿ ಭೂಕಂಪದ ಯಾವುದೇ ಲಕ್ಷಣಗಳು ದಾಖಲಾಗಿಲ್ಲ ಎಂದು ಕೆಎಸ್​ಎನ್​ಡಿಎಮ್​ಸಿ ಸ್ಪಷ್ಟನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು: ಭೂಕಂಪದ ಯಾವುದೇ ಲಕ್ಷಣ ದಾಖಲಾಗಿಲ್ಲ; ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಸ್ಪಷ್ಟನೆ
ಬೆಂಗಳೂರು (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 26, 2021 | 2:29 PM

Share

ಬೆಂಗಳೂರು: ನಗರದಲ್ಲಿ ‌ಭೂಕಂಪ ಆಗಿಲ್ಲ. ಭೂಕಂಪದ ಯಾವುದೇ ಲಕ್ಷಣಗಳು ದಾಖಲಾಗಿಲ್ಲ ಎಂದು ಬೆಂಗಳೂರಿನ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಯಿಂದ ಸ್ಪಷ್ಟನೆ ನೀಡಿದೆ. ಆದರೆ ಶಬ್ದ ಹೇಗೆ ಬಂತು ಎಂಬ ಬಗ್ಗೆ ಅಧಿಕಾರಿಗಳಿಗಳು, ತಜ್ಞರಿಗೂ ಸದ್ಯಕ್ಕೆ ಮಾಹಿತಿ ಇಲ್ಲ ಎನ್ನಲಾಗಿದ್ದು, ಈ ಕುರಿತು ಇನ್ನಷ್ಟೇ ಮಾಹಿತಿ ತಿಳಿದುಬರಬೇಕಿದೆ. ಈ ಹಿಂದೆ ಬೆಂಗಳೂರಿನ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ವರದಿಯಾಗಿತ್ತು. ರಾಜರಾಜೇಶ್ವರಿ ನಗರ, ಕೆಂಗೇರಿ, ಕಗ್ಗಲೀಪುರ, ಹೆಮ್ಮಿಗೆಪುರ, ಜ್ಞಾನಭಾರತಿನಗರ, ಮೈಸೂರು ರಸ್ತೆಯ ಕೆಲ ಏರಿಯಾದಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿತ್ತು. ಎರಡು ಸಲ ಭೂಮಿ ಕಂಪಿಸಿದ ಅನುಭವವಾಗಿದ್ದು, ಮೊದಲ ಸಲ ಲಘುವಾಗಿ, ನಂತರ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿತ್ತು. ಆದರೆ ಇದೀಗ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಸ್ಪಷ್ಟನೆ ನೀಡಿದ್ದು, ಭೂಮಿ ಕಂಪಿಸಿಲ್ಲ ಎಂದು ಸ್ಪಷ್ಟನೆ ನೀಡಿದೆ.

‘‘ರಾಜರಾಜೇಶ್ವರಿ ನಗರ, ಕೆಂಗೇರಿ, ಕಗ್ಗಲೀಪುರ, ಹೆಮ್ಮಿಗೆಪುರ, ಜ್ಞಾನಭಾರತಿನಗರ ಮೊದಲಾದೆಡೆ 11.50 ರಿಂದ 12.15 ವರೆಗೆ ಭೂಮಿ ಕಂಪಿಸಿದ ವರದಿಗಳನ್ನು ಆಧರಿಸಿ, ಮಾಪಕದಲ್ಲಿ ಮಾಹಿತಿ ಇದೆಯೇ ಎಂದು ಪರಿಶೀಲಿಸಲಾಯಿತು. ಆದರೆ ಯಾವುದೇ ಕಂಪನದ ಅಲೆಗಳು ದಾಖಲಾಗಿಲ್ಲ’’ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ನೀಡಿರುವ ಮಾಹಿತಿ:

KSNDMC note on Bengaluru earthquake

ಕೆಎಸ್​​ಎನ್​ಎಮ್​ಡಿಸಿ ನೀಡಿರುವ ಸ್ಪಷ್ಟನೆ

ಭೂಕಂಪದ ಕುರಿತು ಸಚಿವ ಬಿಸಿ ಪಾಟೀಲ್ ಹೇಳಿಕೆ: ಇಲಾಖೆಯಿಂದ ಭೂಕಂಪದ ಬಗ್ಗೆ ಮಾಹಿತಿ ಇಲ್ಲ ಎಂದು ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ. ಕಳೆದ ಬಾರ ಕಲಬುರ್ಗಿ ಭಾಗದಲ್ಲಿ ಆದಾಗ ಕಂದಾಯ ಸಚಿವರು ಬಂದು ವಿಚಾರಣೆ ಮಾಡಿದ್ದಾರೆ. ಇಲಾಖೆಯಿಂದ ಅಗತ್ಯವಿದ್ದರೆ ಪರಿಶೀಲನೆ ಮಾಡಿಸುತ್ತೇವೆ. ಇವತ್ತಿನ ಸದ್ದಿನ ಬಗ್ಗೆ ಮಾಹಿತಿ ಬಂದಿಲ್ಲ. ನಮ್ಮ ಇಲಾಖೆಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದುಕೊಳ್ಳುತ್ತೇವೆ ಎಂದು ಅವರು ನುಡಿದಿದ್ದಾರೆ.

ಇದನ್ನೂ ಓದಿ:

Bengaluru Earthquake: ಬೆಂಗಳೂರಿನಲ್ಲಿ ಎರಡೆರಡು ಬಾರಿ ಭೂಕಂಪದ ಅನುಭವ; ಮಂಡ್ಯದಲ್ಲಿ ನಿಗೂಢ ಶಬ್ದಕ್ಕೆ ಬೆಚ್ಚಿಬಿದ್ದ ಜನ!

ಇದ್ದೂ ಇಲ್ಲದಂತಾದ ಸೋಲಾರ್ ಬೀದಿ ದೀಪಗಳು, ಅಳವಡಿಸುವಾಗ ಇದ್ದ ಜೋಷ್ ನಿರ್ವಹಣೆಯಲ್ಲಿ ಇಲ್ಲ

Published On - 1:45 pm, Fri, 26 November 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ