AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಗ್ನಲಿಂಗ್ ಸುಧಾರಣೆ, ಪ್ಲಾಟ್‌ಫಾರ್ಮ್ ವಿಸ್ತರಣೆ ಕಾಮಗಾರಿ ಹಿನ್ನೆಲೆ KSR ಬೆಂಗಳೂರು ನಿಲ್ದಾಣದಿಂದ ರೈಲುಗಳ ಸಂಚಾರದಲ್ಲಿ ವ್ಯತ್ಯಯ

ವಿವಿಧ ಅಭಿವೃದ್ಧಿ ಕಾಮಗಾರಿಗಳ ಹಿನ್ನೆಲೆ ಕೆಎಸ್‌ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ (ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ) ಮುಂದಿನ ಕೆಲವು ದಿನ ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಲಿದೆ. ವಂದೇ ಭಾರತ್, ರಾಜಧಾನಿ ಮತ್ತು ಕರ್ನಾಟಕ ಎಕ್ಸ್‌ಪ್ರೆಸ್ ರೈಲುಗಳು ಓಡಾಟದಲ್ಲಿ ಬದಲಾವಣೆ ಸೇರಿ ಕೆಲ ರೈಲುಗಳ ಸಂಚಾರ ರದ್ದಾಗಿವೆ. ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಸಿಗ್ನಲಿಂಗ್ ಸುಧಾರಣೆ, ಪ್ಲಾಟ್‌ಫಾರ್ಮ್ ವಿಸ್ತರಣೆ ಕಾಮಗಾರಿ ಹಿನ್ನೆಲೆ KSR ಬೆಂಗಳೂರು ನಿಲ್ದಾಣದಿಂದ ರೈಲುಗಳ ಸಂಚಾರದಲ್ಲಿ ವ್ಯತ್ಯಯ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣImage Credit source: deccanherald.com
ಪ್ರಸನ್ನ ಹೆಗಡೆ
|

Updated on:Jun 16, 2026 | 8:09 AM

Share

ಬೆಂಗಳೂರು, ಜೂನ್​​ 16: ಯಾರ್ಡ್ ಮರು ವಿನ್ಯಾಸ (Yard Remodelling) ಹಾಗೂ ಸುರಕ್ಷತಾ ಸುಧಾರಣಾ ಕಾಮಗಾರಿಗಳು ಕೈಗೊಳ್ಳಲಾಗುತ್ತಿರುವ ಹಿನ್ನೆಲೆ ಕೆಎಸ್‌ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ (ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ) ಮುಂದಿನ ಕೆಲವು ದಿನ ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಲಿದೆ. ಕಾಮಗಾರಿಗಳ ಹಿನ್ನೆಲೆ 58 ರೈಲುಗಳನ್ನು ಸಂಪೂರ್ಣ ರದ್ದುಗೊಳಿಸಲಾಗಿದ್ದು, 116 ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ. ನಾಲ್ಕು ರೈಲುಗಳ ಸಂಚಾರವನ್ನು ಭಾಗಶಃ ವಿಸ್ತರಿಸಲಾಗಿದ್ದು, 26 ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಎರಡು ರೈಲುಗಳ ವೇಳಾಪಟ್ಟಿಯನ್ನು ಮರುನಿಗದಿಪಡಿಸಲಾಗಿದ್ದು, ಐದು ರೈಲುಗಳ ಸಂಚಾರ 15ರಿಂದ 60 ನಿಮಿಷಗಳವರೆಗೆ ನಿಯಂತ್ರಣಗೊಳ್ಳಲಿದೆ. ಕೆಲವು ರೈಲುಗಳ ರದ್ದತಿ ಜೂನ್ 16ರಿಂದಲೇ (ಇಂದಿನಿಂದ) ಆರಂಭವಾಗಲಿದ್ದು, ಸುಮಾರು ಎರಡು ತಿಂಗಳ ಕಾಲ ಇದು ಮುಂದುವರಿಯಲಿದೆ.

ವಂದೇ ಭಾರತ್ ಸಂಚಾರವೂ ಬದಲಾವಣೆ

ಒಟ್ಟು 10 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಆದರೆ ಯಾವುದೇ ವಂದೇ ಭಾರತ್ ರೈಲನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿಲ್ಲ.

ಇದನ್ನೂ ಓದಿ: ಬೆಂಗಳೂರು ರೈಲು ಪ್ರಯಾಣಿಕರಿಗೆ ಕೇಂದ್ರ ಸಚಿವ ಸೋಮಣ್ಣ ಗುಡ್ ನ್ಯೂಸ್; ಕೊನೆಗೂ ಈಡೇರಿತು ಬಹುಕಾಲದ ಬೇಡಿಕೆ

ಆಗಸ್ಟ್ 1ರಿಂದ 3ರವರೆಗೆ

  • ಬೆಳಗಾವಿ–ಕೆಎಸ್‌ಆರ್ ಬೆಂಗಳೂರು ವಂದೇ ಭಾರತ್ (26751) ಯಶವಂತಪುರದಲ್ಲಿ ಅಂತ್ಯಗೊಳ್ಳಲಿದೆ.
  • ಕೆಎಸ್‌ಆರ್ ಬೆಂಗಳೂರು–ಬೆಳಗಾವಿ ವಂದೇ ಭಾರತ್ (26752) ಯಶವಂತಪುರದಿಂದ ಆರಂಭವಾಗಲಿದೆ.
  • ಕಲಬುರಗಿ–ಎಸ್‌ಎಂವಿಟಿ ಬೆಂಗಳೂರು ವಂದೇ ಭಾರತ್ (22232) ಯಲಹಂಕದಲ್ಲಿ ಅಂತ್ಯಗೊಳ್ಳಲಿದೆ.
  • ಎಸ್‌ಎಂವಿಟಿ ಬೆಂಗಳೂರು–ಕಲಬುರಗಿ ವಂದೇ ಭಾರತ್ (22231) ಯಲಹಂಕದಿಂದ ಆರಂಭವಾಗಲಿದೆ.
  • ಕೆಎಸ್‌ಆರ್ ಬೆಂಗಳೂರು–ಧಾರವಾಡ ವಂದೇ ಭಾರತ್ (20661) ಯಶವಂತಪುರದಿಂದ ಸಂಚರಿಸಲಿದೆ.

ಜುಲೈ 31ರಿಂದ ಆಗಸ್ಟ್ 3ರವರೆಗೆ

  • ಧಾರವಾಡ–ಕೆಎಸ್‌ಆರ್ ಬೆಂಗಳೂರು ವಂದೇ ಭಾರತ್ (20662) ಯಶವಂತಪುರದಲ್ಲಿ ಅಂತ್ಯಗೊಳ್ಳಲಿದೆ.
  • ಎರ್ನಾಕುಲಂ–ಕೆಎಸ್‌ಆರ್ ಬೆಂಗಳೂರು ವಂದೇ ಭಾರತ್ (26652) ಕೆ.ಆರ್.ಪುರಂನಲ್ಲಿ ಅಂತ್ಯಗೊಳ್ಳಲಿದೆ.

ಆಗಸ್ಟ್ 1ರಿಂದ 4ರವರೆಗೆ

ಕೆಎಸ್‌ಆರ್ ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ (26651) ಬೆಂಗಳೂರು ಕ್ಯಾಂಟೋನ್ಮೆಂಟ್‌ನಿಂದ ಆರಂಭವಾಗಲಿದೆ.

ರಾಜಧಾನಿ ಮತ್ತು ಕರ್ನಾಟಕ ಎಕ್ಸ್‌ಪ್ರೆಸ್ ರೈಲುಗಳು

ಆಗಸ್ಟ್ 1ರಿಂದ 3ರವರೆಗೆ

  • ಕೆಎಸ್‌ಆರ್ ಬೆಂಗಳೂರು–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ (22691) ಯಶವಂತಪುರದಿಂದ ಆರಂಭವಾಗಲಿದೆ.
  • ಇದರ ಜೋಡಿ ರೈಲು (22692) ಆಗಸ್ಟ್ 2ರಂದು ಮಾರ್ಗ ಮಧ್ಯೆ 60 ನಿಮಿಷಗಳ ಕಾಲ ನಿಯಂತ್ರಣಕ್ಕೆ ಒಳಪಡಲಿದೆ.

ಜುಲೈ 29ರಿಂದ ಆಗಸ್ಟ್ 1ರವರೆಗೆ

  • ನವದೆಹಲಿ–ಕೆಎಸ್‌ಆರ್ ಬೆಂಗಳೂರು ಕರ್ನಾಟಕ ಎಕ್ಸ್‌ಪ್ರೆಸ್ (12628) ಬೈಯಪ್ಪನಹಳ್ಳಿಯಲ್ಲಿ ಅಂತ್ಯಗೊಳ್ಳಲಿದೆ.
  • ಕೆಎಸ್‌ಆರ್ ಬೆಂಗಳೂರು–ನವದೆಹಲಿ ಕರ್ನಾಟಕ ಎಕ್ಸ್‌ಪ್ರೆಸ್ (12627) ಆಗಸ್ಟ್ 1ರಿಂದ 3ರವರೆಗೆ ಬೈಯಪ್ಪನಹಳ್ಳಿಯಿಂದ ಆರಂಭವಾಗಲಿದೆ.

ಮೈಸೂರು-ತುಮಕೂರು ಪ್ರಯಾಣಿಕರಿಗೆ ಹೆಚ್ಚು ಅನಾನುಕೂಲ

ಮೈಸೂರು/ಅಶೋಕಪುರಂನಿಂದ ಆರಂಭವಾಗುವ ಅಥವಾ ಅಂತ್ಯಗೊಳ್ಳುವ 16 ರೈಲುಗಳನ್ನು ರದ್ದುಗೊಳಿಸಲಾಗಿದೆ. ಇದಲ್ಲದೆ, ಕೆಎಸ್‌ಆರ್ ಬೆಂಗಳೂರು ನಗರವನ್ನು ಸಂಪರ್ಕಿಸುವ 9 ಮೆಮು ರೈಲುಗಳ ಸಂಚಾರವನ್ನೂ ಸ್ಥಗಿತಗೊಳಿಸಲಾಗಿದೆ. ಈ ರೈಲುಗಳು ತುಮಕೂರು ಸೇರಿದಂತೆ ನಗರದ ವಿವಿಧ ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದವು. ಭಾಗಶಃ ರದ್ದುಗೊಂಡ ರೈಲುಗಳು ಬೆಂಗಳೂರಿನ ಇತರ ನಿಲ್ದಾಣಗಳಿಂದ ಆರಂಭವಾಗಲಿದ್ದು ಅಥವಾ ಅಲ್ಲಿ ಅಂತ್ಯಗೊಳ್ಳಲಿವೆ.

ಕಾಮಗಾರಿಗಳಿಂದ ಆಗುವ ಪ್ರಯೋಜನಗಳು

ದಕ್ಷಿಣ ಪಶ್ಚಿಮ ರೈಲ್ವೆ (SWR) ಪ್ರಕಾರ, ಈ ಯಾರ್ಡ್ ಮರು ವಿನ್ಯಾಸ ಕಾಮಗಾರಿಯಿಂದ ಹಲವು ಕಾರ್ಯಾಚರಣಾ ಸುಧಾರಣೆಗಳು ಸಾಧ್ಯವಾಗಲಿವೆ.

  • ಬೆಂಗಳೂರು ಕ್ಯಾಂಟೋನ್ಮೆಂಟ್ ದಿಕ್ಕಿನಲ್ಲಿ ಒಂದೇ ಸಮಯದಲ್ಲಿ ರೈಲು ಆಗಮನ ಹಾಗೂ ನಿರ್ಗಮನ ವ್ಯವಸ್ಥೆ.
  • 7ನೇ ಪ್ಲಾಟ್‌ಫಾರ್ಮ್ ಅನ್ನು 460 ಮೀಟರ್‌ನಿಂದ 600 ಮೀಟರ್‌ಗೆ ವಿಸ್ತರಿಸಿ 24 ಬೋಗಿಗಳ ಪೂರ್ಣ ಉದ್ದದ ರೈಲುಗಳನ್ನು ನಿರ್ವಹಿಸುವ ಸಾಮರ್ಥ್ಯ.
  • ಸರಕು ರೈಲುಗಳಿಗೆ ಪ್ರತ್ಯೇಕ ನಾನ್-ಪ್ಲಾಟ್‌ಫಾರ್ಮ್ ಮಾರ್ಗ ಸೌಲಭ್ಯ.
  • ಮೈಸೂರು ಹಾಗೂ ಕ್ಯಾಂಟೋನ್ಮೆಂಟ್ ಮಾರ್ಗಗಳಲ್ಲಿ ಉತ್ತಮ ಸಿಗ್ನಲಿಂಗ್ ವ್ಯವಸ್ಥೆ.
  • ಹಳೆಯ Solid State Interlocking (SSI) ವ್ಯವಸ್ಥೆಯನ್ನು ಅತ್ಯಾಧುನಿಕ Electronic Interlocking (EI) ವ್ಯವಸ್ಥೆಯಾಗಿ ಪರಿವರ್ತನೆ.

ಎರಡು ಹಂತಗಳಲ್ಲಿ ಕಾಮಗಾರಿ

ದಕ್ಷಿಣ ಪಶ್ಚಿಮ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಂಜುನಾಥ ಕನಮಾಡಿ ಅವರ ಪ್ರಕಾರ, ಕಾಮಗಾರಿ ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ರೈಲುಗಳ ಆಗಮನ ಮತ್ತು ನಿರ್ಗಮನ ವ್ಯವಸ್ಥೆಯನ್ನು ಸುಧಾರಿಸಲಾಗುತ್ತಿದೆ. ಎರಡನೇ ಹಂತದಲ್ಲಿ ಯಶವಂತಪುರ ಗ್ರಿಡ್ ಭಾಗದಲ್ಲಿ ಇನ್ನೆರಡು ಹೊಸ ಪ್ಲಾಟ್‌ಫಾರ್ಮ್‌ಗಳನ್ನು ನಿರ್ಮಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 8:07 am, Tue, 16 June 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ