AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ಬೆಂಗಳೂರಿನ ಕೆಎಸ್​ಆರ್​, ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ: ಮೋದಿ

ಕೆಎಸ್​ಆರ್​, ಕಂಟೋನ್ಮೆಂಟ್ ಸೇರಿ ಬೆಂಗಳೂರಿನ ಇತರೆ ರೈಲು ನಿಲ್ದಾಣಗಳ ಅಭಿವೃದ್ಧಿಗೆ ಚಿಂತನೆ ನಡೆಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಶೀಘ್ರವೇ ಬೆಂಗಳೂರಿನ ಕೆಎಸ್​ಆರ್​, ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ: ಮೋದಿ
Narendra Modi
TV9 Web
| Edited By: |

Updated on:Nov 11, 2022 | 2:00 PM

Share

ಕೆಎಸ್​ಆರ್​, ಕಂಟೋನ್ಮೆಂಟ್ ಸೇರಿ ಬೆಂಗಳೂರಿನ ಇತರೆ ರೈಲು ನಿಲ್ದಾಣಗಳ ಅಭಿವೃದ್ಧಿಗೆ ಚಿಂತನೆ ನಡೆಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಕೆಂಪೇಗೌಡರ ಪ್ರಗತಿ ಪ್ರತಿಮೆ ಅನಾವರಣಗೊಳಿಸಿ ಬಳಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಬ್ರಾಡ್​ಗೇಜ್ ಪರಿವರ್ತನೆಗೆ ವೇಗ ಕೊಟ್ಟಿದ್ದೇವೆ. ಹಲವು ಹೊಸ ಪ್ರದೇಶಗಳಿಗೆ ರೈಲು ಸಂಪರ್ಕ ಸಿಕ್ಕಿದೆ ಎಂದರು.

ನಮ್ಮ ರೈಲು ನಿಲ್ದಾನಗಳು ಆಧುನೀಕರಣಗೊಂಡಿವೆ. ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ರೈಲು ನಿಲ್ದಾಣ ಬೇರೆಯೇ ಅನುಭವ ಕೊಡುತ್ತದೆ. ದೇಶದ ಇತರ ರೈಲು ನಿಲ್ದಾಣಗಳನ್ನು ಇದೇ ರೀತಿ ಆಧುನೀಕರಣ ಮಾಡುತ್ತೇವೆ. ಬೆಂಗಳೂರು ನಗರ, ಯಶವಂತಪುರ ನಿಲ್ದಾಣಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ ಎಂದರು.

ಭಾರತ ಇನ್ನು ಕುಂಟುವುದಿಲ್ಲ. ಅತ್ಯಂತ ವೇಗವಾಗಿ ಓಡುತ್ತದೆ. ಭಾರತದಾದ್ಯಂತ ವಂದೇ ಭಾರತ್ ರೈಲು, ವಿಸ್ಟರ್​ಡೊಮ್ ಬೋಗಿಗಳು ಇರುತ್ತವೆ. ಸಾರಿಗೆಯನ್ನು ನಾವು ಸುಧಾರಿಸುತ್ತೇವೆ. ಸಮಯ ಉಳಿಸುತ್ತೇವೆ.

ವಂದೇ ಭಾರತ್ ಎಕ್ಸ್​ಪ್ರೆಸ್​ ಕೇವಲ ಒಂದು ರೈಲು ಮಾತ್ರವೇ ಅಲ್ಲ. ಅದು ಹೊಸ ಭಾರತದ ಹೊಸ ಮೈಲಿಗಲ್ಲು ಮುಂದಿನ ದಿನಗಳಲ್ಲಿ ಭಾರತದ ರೈಲುಗಲು ಹೇಗಿರಲಿವೆ ಎಂಬುದರ ಒಂದು ಝಲಕ್ ಅಷ್ಟೇ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಸ್ಟಾರ್ಟ್​ಅಪ್​ ಎನ್ನುವುದು ಒಂದು ಕಂಪನಿಯಿಂದ ಆಗುವುದಿಲ್ಲ. ಅದೊಂದು ಮನೋಭಾವ, ಸಮಗ್ರ ಪ್ರಯತ್ನದ ಫಲ. ಬೆಂಗಳೂರು ಭಾರತದ ಭವಿಷ್ಯಕ್ಕೆ ಅತ್ಯಂತ ಮುಖ್ಯ ನಗರ. ಬೆಂಗಳೂರು ಭಾರತದ ಯುವಶಕ್ತಿಯ ಪ್ರತೀಕವಾಗಿದೆ. KIA ಟರ್ಮಿನಲ್ 2 ಫೋಟೋಗಳಲ್ಲಿ ಕಾಣುವುದಕ್ಕಿಂತ ಹೆಚ್ಚು ಆಧುನಿಕವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:59 pm, Fri, 11 November 22

Follow Us
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್