AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್​​ಆರ್​ಟಿಸಿ ಬಸ್ ಅಪಘಾತ: ನಮ್ಮ ಮನೆ ದೇವರೆ ಜೀವ ಉಳಿಸಿದ್ದಾನೆ ಎಂದ ಮಹಿಳೆ

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದವಾರ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ. ಅಪಘಾತಕ್ಕೀಡಾದ ಕೆಎಸ್​ಆರ್​ಟಿಸಿ ಬಸ್​ನಲ್ಲಿ 20 ಪ್ರಯಾಣಿಕರಿದ್ದರು.

ಕೆಎಸ್​​ಆರ್​ಟಿಸಿ ಬಸ್ ಅಪಘಾತ: ನಮ್ಮ ಮನೆ ದೇವರೆ ಜೀವ ಉಳಿಸಿದ್ದಾನೆ ಎಂದ ಮಹಿಳೆ
ಡಿವೈಡರ್​​ಗೆ ಗುದ್ದಿದ ಕೆಎಸ್​ಆರ್​​ಟಿಸಿ ಬಸ್​
ಬಿ ಮೂರ್ತಿ, ನೆಲಮಂಗಲ
| Updated By: ವಿವೇಕ ಬಿರಾದಾರ|

Updated on: Nov 26, 2023 | 11:38 AM

Share

ನೆಲಮಂಗಲ ನ.26: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಕೆಎಸ್​ಆರ್​ಟಿಸಿ (KSRTC) ಬಸ್ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ಮಾದವಾರ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ. ಅಪಘಾತಕ್ಕೀಡಾದ ಕೆಎಸ್​ಆರ್​ಟಿಸಿ ಬಸ್​ನಲ್ಲಿ 20 ಪ್ರಯಾಣಿಕರಿದ್ದರು. ಬಸ್​ನಲ್ಲಿ ಮುಂದೆ ಕುಳಿತಿದ್ದ ಮಹಿಳೆಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಎಸ್​ಆರ್​ಟಿಸಿ ಬಸ್ (KSRTC Bus) ಬೆಂಗಳೂರಿನಿಂದ ಸೋಮವಾರಪೇಟೆಗೆ ತೆರಳುತ್ತಿತ್ತು.

ಡಿವೈಡರ್​ಗೆ ಡಿಕ್ಕಿ ನಿಂತಿರುವ ಕೆಎಸ್​ಆರ್​ಟಿಸಿ ಬಸ್ ಹೊಡೆದು ರಸ್ತೆ ಮಧ್ಯೆ ನಿಂತಿದ್ದು, ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ. ಕೆಲಹೊತ್ತಿನ ನಂತರ ಪೊಲೀಸರು ಬಿಎಂಆರ್​ಸಿಎಲ್​ ಕ್ರೇನ್ ಮೂಲಕ ಬಸ್ ತೆರವುಗೊಳಿಸಿದರು. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಒವರ್ ಟೇಕ್ ಮಾಡಲು ಹೋಗಿ ಬಸ್ ಅಪಘಾತ: ಪ್ರಯಾಣಿಕ ಲತಾ

ಲಾರಿ ಒವರ್ ಟೇಕ್ ಮಾಡಲು ಹೋಗಿ ಈ ರೀತಿ ಬಸ್ ಅಪಘಾತವಾಗಿದೆ. ಚಾಲಕನ ನಿಯಂತ್ರಣದಿಂದ ನಾವೆಲ್ಲರೂ ಬಚಾವ್ ಆಗಿದ್ದೇವೆ. ಮನೆ ದೇವರ ದರ್ಶನಕ್ಕೆ ಹೋಗುತ್ತಿದ್ದಾಗ ಈ ರೀತಿಯಲ್ಲಿ ಆಗಿದೆ. ನಮ್ಮ ಮನೆ ದೇವರೆ ನಮ್ಮ ಜೀವ ಉಳಿಸಿದ್ದಾನೆ ಎಂದು ಲಗ್ಗೆರೆಯ ಪ್ರಯಾಣಿಕ ಲತಾ ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಪಘಾತಕ್ಕೆ ಕಾರಣವಾದ ನಾಯಿ ಮೃತನ ಮನೆಗೆ ಹೋಗಿ ಪಶ್ಚಾತ್ತಾಪ ವ್ಯಕ್ತಪಡಿಸಿತೇ? ಈ ವಿಡಿಯೋ ನೋಡಿದರೆ ಹಾಗನ್ನಿಸುತ್ತದೆ!

ನಮ್ಮ ಬಸ್ಸಿಗೆ ಲಾರಿ ಡಿಕ್ಕಿಯಾಗುತ್ತಿತ್ತು: ಬಸ್​ ಚಾಲಕ

ರೈಟ್ ಸೈಡ್ ಬಸ್ ಚಾಲನೆ ಮಾಡಿಕೊಂಡು ಹೋಗುತ್ತಿದ್ದೆ ಬಿಬಿಎಂಪಿ ಕಸದ ಲಾರಿ ಚಾಲಕ ವೇಗವಾಗಿ ನಿರ್ಲಕ್ಷ್ಯತನದಿಂದ ಚಾಲನೆ ಮಾಡುತ್ತಿದ್ದನು. ನಮ್ಮ ಬಸ್ಸಿಗೆ, ಲಾರಿಗೆ ಡಿಕ್ಕಿಯಾಗುತ್ತಿತ್ತು ಅದನ್ನ ತಪ್ಪಿಸಲು ಹೋಗಿ ಅಪಘಾತವಾಗಿದೆ. ಅದೃಷ್ಟವಶಾತ್ ಬಸ್​ ಕಂಟ್ರೋಲ್​ಗೆ ಬಂದಿದ್ದರಿಂದ ಯಾರಿಗೂ ಗಂಭೀರ ತರಹದ ರೀತಿಯಲ್ಲಿ ಏನೂ ಆಗಿಲ್ಲ, ಮುಂದೆ ಕೂತಿದ್ದ ಮಹಿಳೆಗೆ ಕೈ ಗಾಯವಾಗಿತ್ತು ಅಂಬ್ಯೂಲನ್ಸ್ ಮುಖಾಂತರವಾಗಿ ಅಸ್ಪತ್ರೆಗೆ ಕಳಿಸಿದ್ದೇವೆ ಎಂದು ಬಸ್ ಚಾಲಕ ಸಂತೋಷ್ ಹೇಳಿದರು.

ಮೊದಲ ಬಾರಿ ನನಗೆ ಈ ತರಹ ಆಗಿದೆ: ಪ್ರಯಾಣಿಕ ಪ್ರೇಮಾ

ರಸ್ತೆ ತಡೆಗೋಡೆಯಿಂದಾಗಿ ನಾವೆಲ್ಲರೂ ಬದುಕುಳಿದಿದ್ದೇವೆ. ಮೆಜೆಸ್ಟಿಕ್​ನಿಂದ ಬಸ್​ ಬರುತ್ತಿದ್ದು, ನಾನು ನಿದ್ದೆ ಮಾಡುತ್ತಿದ್ದೆ. ಜನರೆಲ್ಲ ಕೂಗಾಡುತ್ತಿದ್ದರು. ಆಗ ನನಗೆ ಕೈಕಾಲು ನಡುಗುತ್ತಿತ್ತು. ಮೊದಲ ಬಾರಿ ನನಗೆ ಈತರಹ ಆಗಿದೆ ತುಂಬಾ ಭಯ ಆಗಿದೆ ಎಂದು ಪ್ರಯಾಣಿಕ ಪ್ರೇಮಾ ಹೇಳಿದರು. ಚಾಲಕ ನಮ್ಮನ್ನೇಲ್ಲ ಕಾಪಾಡಿದ್ದಾರೆ, ಅಷ್ಟೇ ನಾವೆಲ್ಲರೂ ಉಳಿಯೋದಿಲ್ಲ ಅಂದುಕೊಂಡಿದ್ವಿ ಎಂದು ಪ್ರಯಾಣಿಕ ಪ್ರಮೀಳಾ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ