ಕೆಎಸ್​​ಆರ್​ಟಿಸಿ ಬಸ್ ಅಪಘಾತ: ನಮ್ಮ ಮನೆ ದೇವರೆ ಜೀವ ಉಳಿಸಿದ್ದಾನೆ ಎಂದ ಮಹಿಳೆ

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದವಾರ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ. ಅಪಘಾತಕ್ಕೀಡಾದ ಕೆಎಸ್​ಆರ್​ಟಿಸಿ ಬಸ್​ನಲ್ಲಿ 20 ಪ್ರಯಾಣಿಕರಿದ್ದರು.

ಕೆಎಸ್​​ಆರ್​ಟಿಸಿ ಬಸ್ ಅಪಘಾತ: ನಮ್ಮ ಮನೆ ದೇವರೆ ಜೀವ ಉಳಿಸಿದ್ದಾನೆ ಎಂದ ಮಹಿಳೆ
ಡಿವೈಡರ್​​ಗೆ ಗುದ್ದಿದ ಕೆಎಸ್​ಆರ್​​ಟಿಸಿ ಬಸ್​
Edited By: ವಿವೇಕ ಬಿರಾದಾರ

Updated on: Nov 26, 2023 | 11:38 AM

ನೆಲಮಂಗಲ ನ.26: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಕೆಎಸ್​ಆರ್​ಟಿಸಿ (KSRTC) ಬಸ್ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ಮಾದವಾರ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ. ಅಪಘಾತಕ್ಕೀಡಾದ ಕೆಎಸ್​ಆರ್​ಟಿಸಿ ಬಸ್​ನಲ್ಲಿ 20 ಪ್ರಯಾಣಿಕರಿದ್ದರು. ಬಸ್​ನಲ್ಲಿ ಮುಂದೆ ಕುಳಿತಿದ್ದ ಮಹಿಳೆಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಎಸ್​ಆರ್​ಟಿಸಿ ಬಸ್ (KSRTC Bus) ಬೆಂಗಳೂರಿನಿಂದ ಸೋಮವಾರಪೇಟೆಗೆ ತೆರಳುತ್ತಿತ್ತು.

ಡಿವೈಡರ್​ಗೆ ಡಿಕ್ಕಿ ನಿಂತಿರುವ ಕೆಎಸ್​ಆರ್​ಟಿಸಿ ಬಸ್ ಹೊಡೆದು ರಸ್ತೆ ಮಧ್ಯೆ ನಿಂತಿದ್ದು, ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ. ಕೆಲಹೊತ್ತಿನ ನಂತರ ಪೊಲೀಸರು ಬಿಎಂಆರ್​ಸಿಎಲ್​ ಕ್ರೇನ್ ಮೂಲಕ ಬಸ್ ತೆರವುಗೊಳಿಸಿದರು. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಒವರ್ ಟೇಕ್ ಮಾಡಲು ಹೋಗಿ ಬಸ್ ಅಪಘಾತ: ಪ್ರಯಾಣಿಕ ಲತಾ

ಲಾರಿ ಒವರ್ ಟೇಕ್ ಮಾಡಲು ಹೋಗಿ ಈ ರೀತಿ ಬಸ್ ಅಪಘಾತವಾಗಿದೆ. ಚಾಲಕನ ನಿಯಂತ್ರಣದಿಂದ ನಾವೆಲ್ಲರೂ ಬಚಾವ್ ಆಗಿದ್ದೇವೆ. ಮನೆ ದೇವರ ದರ್ಶನಕ್ಕೆ ಹೋಗುತ್ತಿದ್ದಾಗ ಈ ರೀತಿಯಲ್ಲಿ ಆಗಿದೆ. ನಮ್ಮ ಮನೆ ದೇವರೆ ನಮ್ಮ ಜೀವ ಉಳಿಸಿದ್ದಾನೆ ಎಂದು ಲಗ್ಗೆರೆಯ ಪ್ರಯಾಣಿಕ ಲತಾ ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಪಘಾತಕ್ಕೆ ಕಾರಣವಾದ ನಾಯಿ ಮೃತನ ಮನೆಗೆ ಹೋಗಿ ಪಶ್ಚಾತ್ತಾಪ ವ್ಯಕ್ತಪಡಿಸಿತೇ? ಈ ವಿಡಿಯೋ ನೋಡಿದರೆ ಹಾಗನ್ನಿಸುತ್ತದೆ!

ನಮ್ಮ ಬಸ್ಸಿಗೆ ಲಾರಿ ಡಿಕ್ಕಿಯಾಗುತ್ತಿತ್ತು: ಬಸ್​ ಚಾಲಕ

ರೈಟ್ ಸೈಡ್ ಬಸ್ ಚಾಲನೆ ಮಾಡಿಕೊಂಡು ಹೋಗುತ್ತಿದ್ದೆ ಬಿಬಿಎಂಪಿ ಕಸದ ಲಾರಿ ಚಾಲಕ ವೇಗವಾಗಿ ನಿರ್ಲಕ್ಷ್ಯತನದಿಂದ ಚಾಲನೆ ಮಾಡುತ್ತಿದ್ದನು. ನಮ್ಮ ಬಸ್ಸಿಗೆ, ಲಾರಿಗೆ ಡಿಕ್ಕಿಯಾಗುತ್ತಿತ್ತು ಅದನ್ನ ತಪ್ಪಿಸಲು ಹೋಗಿ ಅಪಘಾತವಾಗಿದೆ. ಅದೃಷ್ಟವಶಾತ್ ಬಸ್​ ಕಂಟ್ರೋಲ್​ಗೆ ಬಂದಿದ್ದರಿಂದ ಯಾರಿಗೂ ಗಂಭೀರ ತರಹದ ರೀತಿಯಲ್ಲಿ ಏನೂ ಆಗಿಲ್ಲ, ಮುಂದೆ ಕೂತಿದ್ದ ಮಹಿಳೆಗೆ ಕೈ ಗಾಯವಾಗಿತ್ತು ಅಂಬ್ಯೂಲನ್ಸ್ ಮುಖಾಂತರವಾಗಿ ಅಸ್ಪತ್ರೆಗೆ ಕಳಿಸಿದ್ದೇವೆ ಎಂದು ಬಸ್ ಚಾಲಕ ಸಂತೋಷ್ ಹೇಳಿದರು.

ಮೊದಲ ಬಾರಿ ನನಗೆ ಈ ತರಹ ಆಗಿದೆ: ಪ್ರಯಾಣಿಕ ಪ್ರೇಮಾ

ರಸ್ತೆ ತಡೆಗೋಡೆಯಿಂದಾಗಿ ನಾವೆಲ್ಲರೂ ಬದುಕುಳಿದಿದ್ದೇವೆ. ಮೆಜೆಸ್ಟಿಕ್​ನಿಂದ ಬಸ್​ ಬರುತ್ತಿದ್ದು, ನಾನು ನಿದ್ದೆ ಮಾಡುತ್ತಿದ್ದೆ. ಜನರೆಲ್ಲ ಕೂಗಾಡುತ್ತಿದ್ದರು. ಆಗ ನನಗೆ ಕೈಕಾಲು ನಡುಗುತ್ತಿತ್ತು. ಮೊದಲ ಬಾರಿ ನನಗೆ ಈತರಹ ಆಗಿದೆ ತುಂಬಾ ಭಯ ಆಗಿದೆ ಎಂದು ಪ್ರಯಾಣಿಕ ಪ್ರೇಮಾ ಹೇಳಿದರು. ಚಾಲಕ ನಮ್ಮನ್ನೇಲ್ಲ ಕಾಪಾಡಿದ್ದಾರೆ, ಅಷ್ಟೇ ನಾವೆಲ್ಲರೂ ಉಳಿಯೋದಿಲ್ಲ ಅಂದುಕೊಂಡಿದ್ವಿ ಎಂದು ಪ್ರಯಾಣಿಕ ಪ್ರಮೀಳಾ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us