AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಎಂದಿನಂತೆ ಬಸ್​​ ಸಂಚಾರ: ಹೈಕೋರ್ಟ್​​ ಆದೇಶದ ಬೆನ್ನಲ್ಲೇ ಮುಷ್ಕರ ಹಿಂಪಡೆದ ಸಾರಿಗೆ ನೌಕರರು

ಕರ್ನಾಟಕದಲ್ಲಿ ಮೇ 20ರಂದು ನಿಗದಿಯಾಗಿದ್ದ ಸಾರಿಗೆ ನೌಕರರ ಮುಷ್ಕರವನ್ನು ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹಿಂಪಡೆಯಲಾಗಿದೆ. KSRTC ಜಂಟಿ ಕ್ರಿಯಾ ಸಮಿತಿ ಹೈಕೋರ್ಟ್ ತೀರ್ಪಿಗೆ ಗೌರವ ಸಲ್ಲಿಸಿ ಮುಷ್ಕರವನ್ನು ವಾಪಸ್ ಪಡೆದುಕೊಂಡಿದೆ. ಹೀಗಾಗಿ ರಾಜ್ಯಾದ್ಯಂತ ಬಸ್ ಸೇವೆಗಳು ಎಂದಿನಂತೆ ಸುಗಮವಾಗಿ ನಡೆಯಲಿವೆ. ಸರ್ಕಾರದೊಂದಿಗೆ ಸಭೆ ನಡೆಸುವಂತೆ ಹೈಕೋರ್ಟ್ ನಿರ್ದೇಶಿಸಿದ್ದು, ನೌಕರರು ಸಭೆಯನ್ನು ಸದುಪಯೋಗಪಡಿಸಿಕೊಳ್ಳಲು ಸಿದ್ಧರಿರೋದಾಗಿ ತಿಳಿಸಿದ್ದಾರೆ.

ನಾಳೆ ಎಂದಿನಂತೆ ಬಸ್​​ ಸಂಚಾರ: ಹೈಕೋರ್ಟ್​​ ಆದೇಶದ ಬೆನ್ನಲ್ಲೇ ಮುಷ್ಕರ ಹಿಂಪಡೆದ ಸಾರಿಗೆ ನೌಕರರು
ಕೆಎಸ್​​​ಆರ್​​​​​ಟಿಸಿ ಬಸ್ (ಸಾಂದರ್ಭಿಕ ಚಿತ್ರ)Image Credit source: mathrubhumi.com
ಪ್ರಸನ್ನ ಹೆಗಡೆ
|

Updated on:May 19, 2026 | 5:20 PM

Share

ಬೆಂಗಳೂರು, ಮೇ 19: ಹೈಕೋರ್ಟ್​​ ಆದೇಶದ ಬೆನ್ನಲ್ಲೇ ನಾಳೆ (ಮೇ 20) ಕರೆ ನೀಡಿದ್ದ ಮುಷ್ಕರವನ್ನು ಸಾರಿಗೆ ನೌಕರರು ಹಿಂಪಡೆದಿದ್ದಾರೆ. ಹೈಕೋರ್ಟ್ ಆದೇಶಕ್ಕೆ ಗೌರವ ಕೊಟ್ಟು ಮುಷ್ಕರ ಹಿಂದಕ್ಕೆ ಪಡೆಯುತ್ತಿರೋದಾಗಿ KSRTC ಜಂಟಿ ಕ್ರಿಯಾ ಸಮಿತಿ ಸಂಚಾಲಕ ಜಯದೇವರಾಜೆ ಅರಸ್ ತಿಳಿಸಿದ್ದಾರೆ. ನಾವು ಮುಷ್ಕರದ ಸಂಬಂಧ ಸರ್ಕಾರಕ್ಕೆ ಮೊದಲೇ ಮಾಹಿತಿ ಕೊಟ್ಟಿದ್ದೆವು. ಈ ನಡುವೆ ಹೈಕೋರ್ಟ್ ಮುಂದೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಬಂದಿತ್ತು. ವಾದ-ಪ್ರತಿವಾದ ಆಲಿಸಿದ ನಂತರ ಮುಷ್ಕರ ಹಿಂದಕ್ಕೆ ಪಡೆಯಬೇಕು ಎಂದು ಕೋರ್ಟ್​​ ನಿರ್ದೇಶನ ಕೊಟ್ಟಿದೆ. ಸಿಎಂ ಅಥವಾ ಸಾರಿಗೆ ಸಚಿವರು ಶೀಘ್ರ ಸಮಯ ನಿಗದಿ ಮಾಡಿ ಸಭೆ ಮಾಡಬೇಕು ಅಂತಲೂ ಹೇಳಿದೆ. ಹೈಕೋರ್ಟ್ ಆದೇಶದ ಪ್ರಕಾರ ಮುಷ್ಕರ ಹಿಂಪಡೆದಿದ್ದೇವೆ ಎಂದವರು ತಿಳಿಸಿದ್ದಾರೆ.

ಎಲ್ಲಾ ಕಾರ್ಮಿಕರಿಗೂ ಪ್ರತಿಭಟನೆ ಮಾಡುವ ಹಕ್ಕು ಇದ್ದು, ಏಕಪಕ್ಷೀಯವಾಗಿ ನೀವು ತೀರ್ಮಾನ ಮಾಡಿದ್ದೀರಿ. ಯಾರೋ ಹಾಕಿದ PILನಿಂದಾಗಿ ಸರ್ಕಾರ ನಮ್ಮ ಜೊತೆ ಸಭೆ ಮಾಡಬೇಕಿದೆ. ಅದನ್ನ ಸರ್ಕಾರವೇ ನಿರ್ಧಾರ ಮಾಡಿ ಸಭೆ ಮಾಡಬಹುದಿತ್ತು. ಹೈಕೋರ್ಟ್ ಸೂಚಿಸಿರುವ ಪ್ರಕಾರ ಸರ್ಕಾರದ ಜೊತೆಗಿನ ಸಭೆಯನ್ನು ಸದುಪಯೋಗ ಮಾಡಿಕೊಳ್ಳುತ್ತೇವೆ . ನಮ್ಮ ಒಂದಷ್ಟು ಮನವಿಯನ್ನು ಕೂಡ ಹೈಕೋರ್ಟ್ ಗಮನಿಸಿದೆ ಎಂದು ಜಂಟಿ ಕ್ರಿಯಾ ಸಮಿತಿ ಪ್ರಧಾನ ಕಾರ್ಯದರ್ಶಿ ವಿಜಯ್ ಭಾಸ್ಕರ್ ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರಿಗೆ ಬಿಗ್​​ ಶಾಕ್​​; ಮುಷ್ಕರ ನಡೆಸದಂತೆ ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್ ಆದೇಶ

ಸರ್ಕಾರ ಇದನ್ನ ಪ್ರತಿಷ್ಠೆಯ ವಿಚಾರವಾಗಿ ತೆಗೆದುಕೊಳ್ಳಬಾರದು. ಮುಷ್ಕರದ ನೋಟಿಸ್​​ನ ಅಧಿಕೃತವಾಗಿ ವಾಪಸ್ ತೆಗೆದುಕೊಳ್ಳುತ್ತಿದ್ದೇವೆ. ಸಿಎಂ ಜೊತೆಗಿನ ಸಭೆ ಯಾವಾಗ ಎಂದು ಇನ್ನೂ ನಿಗದಿ ಮಾಡಿಲ್ಲ. KSRTC ಎಂಡಿ ಮೂಲಕ ಸಿಎಂ ಜೊತೆಗಿನ ಸಭೆಗೆ ಸಿದ್ದ ಇದ್ದೇವೆ. ಇನ್ಕ್ರಿಮೆಂಟ್ ಹಾಗೂ DA ಹೆಚ್ಚಳ ಆಗಬೇಕಿದೆ. ಎಸ್ಮಾ ತಂದರೂ ಕೂಡ ಹಲವು ಬಾರಿ ಮುಷ್ಕರ ಮಾಡಿದ್ದೇವೆ. ಜಂಟಿ ಕ್ರಿಯಾ ಸಮಿತಿ ಒಂದು ಸಂಘಟ ಅಲ್ಲ, ಹಲವು ಗುಂಪು ಸೇರಿ ಆಗಿರುವಂತಹದ್ದು. ಮುಷ್ಕರ ಆಗಿದ್ದರೆ, ಬೆಂಬಲ ವಾಪಸ್ ತೆಗೆದುಕೊಂಡವರ ಶಕ್ತಿ ಗೊತ್ತಾಗ್ತಾ ಇತ್ತು. ಬೆಂಬಲ ವಾಪಸ್ ತೆಗೆದುಕೊಂಡವರಿಗೆ ಒತ್ತಡ ಇರಬಹುದು. ಸರ್ಕಾರವೇ ಹಿಂದೆ ನಿಂತು PIL ಅರ್ಜಿ ಹಾಕಿಸುತ್ತಿದೆ. ಪರ್ಯಾಯ ವ್ಯವಸ್ಥೆ ಮಾಡಿಕೊಂಡಿದ್ದೇವೆ ಅಂದರೆ, ಎಸ್ಮಾ ಯಾಕೆ ಹಾಕಿದ್ರಿ? ಸಾರಿಗೆ ಸಚಿವರು ಸ್ಮಾರ್ಟ್ ಇದ್ದಾರೆ, ಅದನ್ನ ಜನಕ್ಕೆ ಉಪಯೋಗ ಆಗುವ ರೀತಿ ಮಾಡಬೇಕು ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:40 pm, Tue, 19 May 26

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ