AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC Electric Bus: ರಸ್ತೆಗಿಳಿದ ಕೆಎಸ್​​​ಆರ್​​​ಟಿಸಿ ಎಲೆಕ್ಟ್ರಿಕ್​​​ ಬಸ್​ಗಳು, ಮೊದಲ ಪ್ರಯಾಣ ಆರಂಭ

ಬೆಂಗಳೂರು-ಮೈಸೂರು ನಡುವೆ ಮೊದಲ ಎಲೆಕ್ಟ್ರಿಕ್​​ ಬಸ್ ಸೇವೆ ಇಂದಿನಿಂದ ಆರಂಭವಾಗಿದೆ. ಎಕ್ಸ್​​​ಪ್ರೆಸ್ ವೇನಲ್ಲಿ ಈ ಕೆಎಸ್​ಆರ್​​ಟಿಸಿ ಎಲೆಕ್ಟ್ರಿಕ್ ಬಸ್ ಸಂಚರಿಸುತ್ತಿದೆ. ಕೆಎಸ್​​ಆರ್​ಟಿಸಿ ಎಲೆಕ್ಟ್ರಿಕ್​​​ ಬಸ್​​ನಲ್ಲಿ ವಿದ್ಯಾರ್ಥಿ ಪಾಸ್​​ಗೆ ಅವಕಾಶವಿಲ್ಲ.

KSRTC Electric Bus: ರಸ್ತೆಗಿಳಿದ ಕೆಎಸ್​​​ಆರ್​​​ಟಿಸಿ ಎಲೆಕ್ಟ್ರಿಕ್​​​ ಬಸ್​ಗಳು, ಮೊದಲ ಪ್ರಯಾಣ ಆರಂಭ
ರಸ್ತೆಗಿಳಿದ ಕೆಎಸ್​​​ಆರ್​​​ಟಿಸಿ ಎಲೆಕ್ಟ್ರಿಕ್​​​ ಬಸ್​ಗಳು
TV9 Web
| Edited By: |

Updated on:Jan 16, 2023 | 11:06 AM

Share

ಬೆಂಗಳೂರು: ಇಂದಿನಿಂದ ಬೆಂಗಳೂರಿನಲ್ಲಿ ಕೆಎಸ್​​​ಆರ್​​​ಟಿಸಿ ಎಲೆಕ್ಟ್ರಿಕ್​​​ ಬಸ್​​​ಗೆ ಚಾಲನೆ ಸಿಕ್ಕಿದೆ. ಕಳೆದ ಒಂದು ವಾರದಿಂದ ಡಿಪೋನಲ್ಲೇ ಪ್ರಾಯೋಗಿಕವಾಗಿ ಓಡಾಟ ನಡೆಸುತ್ತಿದ್ದ ಕೆಎಸ್​​​ಆರ್​​​ಟಿಸಿ ಎಲೆಕ್ಟ್ರಿಕ್​​​ ಬಸ್​ಗಳು ಇಂದು ರಸ್ತೆಗೆ ಇಳಿದಿವೆ. ಸಂಚಾರ ಶುರು ಮಾಡಿವೆ. ಮೆಜೆಸ್ಟಿಕ್​ ಕೆಎಸ್​​ಆರ್​​ಟಿಸಿ ನಿಲ್ದಾಣದ ಡಿಸಿ ಚಂದ್ರಶೇಖರ್ ಹಾಗೂ KSRTC ವಿಭಾಗೀಯ ನಿಯಂತ್ರಣಾಧಿಕಾರಿ ಲಕ್ಷ್ಮಣ್ ಅವರು ಮೆಜೆಸ್ಟಿಕ್ KSRTC ನಿಲ್ದಾಣದಲ್ಲಿ ಎಲೆಕ್ಟ್ರಿಕ್​ ಬಸ್​​ಗೆ ಚಾಲನೆ ನೀಡಿದ್ದಾರೆ.

ಬೆಂಗಳೂರು-ಮೈಸೂರು ನಡುವೆ ಮೊದಲ ಎಲೆಕ್ಟ್ರಿಕ್​​ ಬಸ್ ಸೇವೆ ಇಂದಿನಿಂದ ಆರಂಭವಾಗಿದೆ. ಎಕ್ಸ್​​​ಪ್ರೆಸ್ ವೇನಲ್ಲಿ ಈ ಕೆಎಸ್​ಆರ್​​ಟಿಸಿ ಎಲೆಕ್ಟ್ರಿಕ್ ಬಸ್ ಸಂಚರಿಸುತ್ತಿದೆ. ಕೆಎಸ್​​ಆರ್​ಟಿಸಿ ಎಲೆಕ್ಟ್ರಿಕ್​​​ ಬಸ್​​ನಲ್ಲಿ ವಿದ್ಯಾರ್ಥಿ ಪಾಸ್​​ಗೆ ಅವಕಾಶವಿಲ್ಲ. ಮುಂದಿನ ಮೂರು ತಿಂಗಳಲ್ಲಿ 50 KSRTC ಎಲೆಕ್ಟ್ರಿಕ್ ಬಸ್ ಸಂಚಾರ ನಡೆಸಲಿವೆ. ಬೆಂಗಳೂರಿನ ಹತ್ತಿರದ ಜಿಲ್ಲೆಗಳಿಗೆ ಸಂಚರಿಸಲಿವೆ. 300 ಕಿ.ಮೀ ವ್ಯಾಪ್ತಿಯಲ್ಲಿ ಎಲೆಕ್ಟ್ರಿಕ್​​ ಬಸ್ ಓಡಿಸಲು KSRTC ನಿರ್ಧಾರ ಮಾಡಿದೆ.

ಇ-ಬಸ್‌ಗಳು ಆರಾಮದಾಯಕವಾದ ಆಸನ, ದೂರದರ್ಶನ, ಪ್ರೀಮಿಯಂ ಸೀಟ್‌ಗಳು, ಪ್ರತಿಯೊಂದು ಸೀಟ್​ಗು ಚಾರ್ಜಿಂಗ್ ಸಾಕೆಟ್‌ , ಎಸಿ​ ವೆಂಟ್‌ಗಳು, ಓದುವ ದೀಪಗಳು ಇನ್ನೂ ಅನೇಕ ಸೌಲಭ್ಯಗಳನ್ನು ಒಳಗೊಳ್ಳಲಿದೆ. ಎಲೆಕ್ಟ್ರಿಕ್​ ಬಸ್​ಗಳು 2022 ಡಿಸೆಂಬರ್​ 31 ರಂದು ರಾಜ್ಯಕ್ಕೆ ಬಂದಿದ್ದು, ಈಗಾಗಲೆ ಟ್ರಯಲ್​ ರೈಡ್​​ನ್ನು ಯಶಸ್ವಿಯಾಗಿ ಪೂರ್ಣಗೊಳಿಸಿವೆ. ಮೊದಲ ಇ-ಬಸ್ ಜನವರಿ 16ರಂದು​ ಬೆಂಗಳೂರಿನಿಂದ ಹೊರಟು ಮೈಸೂರು ತಲುಪುತ್ತದೆ. ಬೆಂಗಳೂರಿಂದ ಮೈಸೂರಿಗೆ ಹೊರಡುವ ಎಲೆಕ್ಟ್ರಿಕ್​ ಬಸ್​​ ತಡೆರಹಿತವಾಗಿದ್ದು, ಬಸ್​ಗೆ ಪ್ರಿಮಿಯಂ ಸರ್ವಿಸ್​ ಪಾಸ್​​ ಹೊಂದಿರುತ್ತದೆ.

KSRTC Electric bus

ಇದನ್ನೂ ಓದಿ: ನರ್ಸ್ ಅಂತ ಬಂದು ಸಿಕ್ಕಿದ್ದನೆಲ್ಲಾ ಕದಿತಾಳೆ, ಡಾಕ್ಟರ್ ಅಂತಾ ಬಂದು ರೋಗಿಯ ಮೈಮೇಲಿದ್ದ ಚಿನ್ನಾಭರಣವೇ ಗಾಯಬ್; ಬೆಂಗಳೂರಿನಲ್ಲಿ ಖತರ್ನಾಕ್ ಕಳ್ಳಿ

ಎಲೆಕ್ಟ್ರಿಕ್​ ಬಸ್​​ಗಳನ್ನು ಒಂದು ಸಾರಿ ಚಾರ್ಜ್​ ಮಾಡಿದರೆ 300ಕೀಮಿ ಸಂಚರಿಸುತ್ತದೆ. ಇನ್ನು ಫೆಬ್ರವರಿಯಲ್ಲಿ ರೋಡಿಗಿಳಿಯುವ 50 ಬಸ್​ಗಳು ಬೆಂಗಳೂರಿನಿಂದ ಮಡಿಕೇರಿ, ವಿರಾಜ​ಪೇಟ, ಚಿಕ್ಕಮಗಳೂರು, ದಾವಣಗೇರೆ ಮತ್ತು ಶಿವಮೊಗ್ಗ ನಗರಕ್ಕೆ ಸಂಪರ್ಕ ಕಲ್ಪಿಸಲಿವೆ. ಈಗಾಗಲೆ ಬಸ್​ಗಳಿಗಾಗಿ ಮೈಸೂರು ಮತ್ತು ಬೆಂಗಳೂರಲ್ಲಿ ಚಾರ್ಜಿಂಗ್​ ಪಾಯಿಂಟ್​ಗಳನ್ನು ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ಮಡಿಕೇರಿ, ವಿರಾಜಪೇಟ, ದಾವಣಗೇರೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಬಸ್​ ನಿಲ್ದಾಣಗಳಲ್ಲಿ ಚಾರ್ಜಿಂಗ್​ ಪಾಯಿಂಟ್​ ಇರಿಸಲಾಗುತ್ತದೆ.

ಎಲೆಕ್ಟ್ರಿಕ್​ ಬಸ್​ಗಳ ಕಾರ್ಯನಿರ್ವಹಣೆಯನ್ನು ಖಾಸಗಿಯವರಿಗೆ ನೀಡಲಾಗಿದ್ದು, ಗ್ರಾಸ್ ಕಾಸ್ಟ್ ಕಾಂಟ್ರಾಕ್ಟ್ (GCC) ನಿರ್ವಹಿಸಲಿದೆ. ಈ ನಿರ್ವಹಣೆಗೆ ಕೆಎಸ್​​ಆರ್​ಟಿಸಿ ಕೂಡ ಹಣ ನೀಡಲು ಮುಂದಾಗಿದ್ದು, ಕಾರ್ಯಾಚರಣೆಯ ವೆಚ್ಚವಾಗಿ ಕಿಮೀಗೆ 55 ರೂಪಾಯಿಗಳನ್ನು ಪಾವತಿಸಲಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:06 am, Mon, 16 January 23

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ