AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC Electric Bus: ರಸ್ತೆಗಿಳಿದ ಕೆಎಸ್​​​ಆರ್​​​ಟಿಸಿ ಎಲೆಕ್ಟ್ರಿಕ್​​​ ಬಸ್​ಗಳು, ಮೊದಲ ಪ್ರಯಾಣ ಆರಂಭ

ಬೆಂಗಳೂರು-ಮೈಸೂರು ನಡುವೆ ಮೊದಲ ಎಲೆಕ್ಟ್ರಿಕ್​​ ಬಸ್ ಸೇವೆ ಇಂದಿನಿಂದ ಆರಂಭವಾಗಿದೆ. ಎಕ್ಸ್​​​ಪ್ರೆಸ್ ವೇನಲ್ಲಿ ಈ ಕೆಎಸ್​ಆರ್​​ಟಿಸಿ ಎಲೆಕ್ಟ್ರಿಕ್ ಬಸ್ ಸಂಚರಿಸುತ್ತಿದೆ. ಕೆಎಸ್​​ಆರ್​ಟಿಸಿ ಎಲೆಕ್ಟ್ರಿಕ್​​​ ಬಸ್​​ನಲ್ಲಿ ವಿದ್ಯಾರ್ಥಿ ಪಾಸ್​​ಗೆ ಅವಕಾಶವಿಲ್ಲ.

KSRTC Electric Bus: ರಸ್ತೆಗಿಳಿದ ಕೆಎಸ್​​​ಆರ್​​​ಟಿಸಿ ಎಲೆಕ್ಟ್ರಿಕ್​​​ ಬಸ್​ಗಳು, ಮೊದಲ ಪ್ರಯಾಣ ಆರಂಭ
ರಸ್ತೆಗಿಳಿದ ಕೆಎಸ್​​​ಆರ್​​​ಟಿಸಿ ಎಲೆಕ್ಟ್ರಿಕ್​​​ ಬಸ್​ಗಳು
TV9 Web
| Edited By: ಆಯೇಷಾ ಬಾನು|

Updated on:Jan 16, 2023 | 11:06 AM

Share

ಬೆಂಗಳೂರು: ಇಂದಿನಿಂದ ಬೆಂಗಳೂರಿನಲ್ಲಿ ಕೆಎಸ್​​​ಆರ್​​​ಟಿಸಿ ಎಲೆಕ್ಟ್ರಿಕ್​​​ ಬಸ್​​​ಗೆ ಚಾಲನೆ ಸಿಕ್ಕಿದೆ. ಕಳೆದ ಒಂದು ವಾರದಿಂದ ಡಿಪೋನಲ್ಲೇ ಪ್ರಾಯೋಗಿಕವಾಗಿ ಓಡಾಟ ನಡೆಸುತ್ತಿದ್ದ ಕೆಎಸ್​​​ಆರ್​​​ಟಿಸಿ ಎಲೆಕ್ಟ್ರಿಕ್​​​ ಬಸ್​ಗಳು ಇಂದು ರಸ್ತೆಗೆ ಇಳಿದಿವೆ. ಸಂಚಾರ ಶುರು ಮಾಡಿವೆ. ಮೆಜೆಸ್ಟಿಕ್​ ಕೆಎಸ್​​ಆರ್​​ಟಿಸಿ ನಿಲ್ದಾಣದ ಡಿಸಿ ಚಂದ್ರಶೇಖರ್ ಹಾಗೂ KSRTC ವಿಭಾಗೀಯ ನಿಯಂತ್ರಣಾಧಿಕಾರಿ ಲಕ್ಷ್ಮಣ್ ಅವರು ಮೆಜೆಸ್ಟಿಕ್ KSRTC ನಿಲ್ದಾಣದಲ್ಲಿ ಎಲೆಕ್ಟ್ರಿಕ್​ ಬಸ್​​ಗೆ ಚಾಲನೆ ನೀಡಿದ್ದಾರೆ.

ಬೆಂಗಳೂರು-ಮೈಸೂರು ನಡುವೆ ಮೊದಲ ಎಲೆಕ್ಟ್ರಿಕ್​​ ಬಸ್ ಸೇವೆ ಇಂದಿನಿಂದ ಆರಂಭವಾಗಿದೆ. ಎಕ್ಸ್​​​ಪ್ರೆಸ್ ವೇನಲ್ಲಿ ಈ ಕೆಎಸ್​ಆರ್​​ಟಿಸಿ ಎಲೆಕ್ಟ್ರಿಕ್ ಬಸ್ ಸಂಚರಿಸುತ್ತಿದೆ. ಕೆಎಸ್​​ಆರ್​ಟಿಸಿ ಎಲೆಕ್ಟ್ರಿಕ್​​​ ಬಸ್​​ನಲ್ಲಿ ವಿದ್ಯಾರ್ಥಿ ಪಾಸ್​​ಗೆ ಅವಕಾಶವಿಲ್ಲ. ಮುಂದಿನ ಮೂರು ತಿಂಗಳಲ್ಲಿ 50 KSRTC ಎಲೆಕ್ಟ್ರಿಕ್ ಬಸ್ ಸಂಚಾರ ನಡೆಸಲಿವೆ. ಬೆಂಗಳೂರಿನ ಹತ್ತಿರದ ಜಿಲ್ಲೆಗಳಿಗೆ ಸಂಚರಿಸಲಿವೆ. 300 ಕಿ.ಮೀ ವ್ಯಾಪ್ತಿಯಲ್ಲಿ ಎಲೆಕ್ಟ್ರಿಕ್​​ ಬಸ್ ಓಡಿಸಲು KSRTC ನಿರ್ಧಾರ ಮಾಡಿದೆ.

ಇ-ಬಸ್‌ಗಳು ಆರಾಮದಾಯಕವಾದ ಆಸನ, ದೂರದರ್ಶನ, ಪ್ರೀಮಿಯಂ ಸೀಟ್‌ಗಳು, ಪ್ರತಿಯೊಂದು ಸೀಟ್​ಗು ಚಾರ್ಜಿಂಗ್ ಸಾಕೆಟ್‌ , ಎಸಿ​ ವೆಂಟ್‌ಗಳು, ಓದುವ ದೀಪಗಳು ಇನ್ನೂ ಅನೇಕ ಸೌಲಭ್ಯಗಳನ್ನು ಒಳಗೊಳ್ಳಲಿದೆ. ಎಲೆಕ್ಟ್ರಿಕ್​ ಬಸ್​ಗಳು 2022 ಡಿಸೆಂಬರ್​ 31 ರಂದು ರಾಜ್ಯಕ್ಕೆ ಬಂದಿದ್ದು, ಈಗಾಗಲೆ ಟ್ರಯಲ್​ ರೈಡ್​​ನ್ನು ಯಶಸ್ವಿಯಾಗಿ ಪೂರ್ಣಗೊಳಿಸಿವೆ. ಮೊದಲ ಇ-ಬಸ್ ಜನವರಿ 16ರಂದು​ ಬೆಂಗಳೂರಿನಿಂದ ಹೊರಟು ಮೈಸೂರು ತಲುಪುತ್ತದೆ. ಬೆಂಗಳೂರಿಂದ ಮೈಸೂರಿಗೆ ಹೊರಡುವ ಎಲೆಕ್ಟ್ರಿಕ್​ ಬಸ್​​ ತಡೆರಹಿತವಾಗಿದ್ದು, ಬಸ್​ಗೆ ಪ್ರಿಮಿಯಂ ಸರ್ವಿಸ್​ ಪಾಸ್​​ ಹೊಂದಿರುತ್ತದೆ.

KSRTC Electric bus

ಇದನ್ನೂ ಓದಿ: ನರ್ಸ್ ಅಂತ ಬಂದು ಸಿಕ್ಕಿದ್ದನೆಲ್ಲಾ ಕದಿತಾಳೆ, ಡಾಕ್ಟರ್ ಅಂತಾ ಬಂದು ರೋಗಿಯ ಮೈಮೇಲಿದ್ದ ಚಿನ್ನಾಭರಣವೇ ಗಾಯಬ್; ಬೆಂಗಳೂರಿನಲ್ಲಿ ಖತರ್ನಾಕ್ ಕಳ್ಳಿ

ಎಲೆಕ್ಟ್ರಿಕ್​ ಬಸ್​​ಗಳನ್ನು ಒಂದು ಸಾರಿ ಚಾರ್ಜ್​ ಮಾಡಿದರೆ 300ಕೀಮಿ ಸಂಚರಿಸುತ್ತದೆ. ಇನ್ನು ಫೆಬ್ರವರಿಯಲ್ಲಿ ರೋಡಿಗಿಳಿಯುವ 50 ಬಸ್​ಗಳು ಬೆಂಗಳೂರಿನಿಂದ ಮಡಿಕೇರಿ, ವಿರಾಜ​ಪೇಟ, ಚಿಕ್ಕಮಗಳೂರು, ದಾವಣಗೇರೆ ಮತ್ತು ಶಿವಮೊಗ್ಗ ನಗರಕ್ಕೆ ಸಂಪರ್ಕ ಕಲ್ಪಿಸಲಿವೆ. ಈಗಾಗಲೆ ಬಸ್​ಗಳಿಗಾಗಿ ಮೈಸೂರು ಮತ್ತು ಬೆಂಗಳೂರಲ್ಲಿ ಚಾರ್ಜಿಂಗ್​ ಪಾಯಿಂಟ್​ಗಳನ್ನು ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ಮಡಿಕೇರಿ, ವಿರಾಜಪೇಟ, ದಾವಣಗೇರೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಬಸ್​ ನಿಲ್ದಾಣಗಳಲ್ಲಿ ಚಾರ್ಜಿಂಗ್​ ಪಾಯಿಂಟ್​ ಇರಿಸಲಾಗುತ್ತದೆ.

ಎಲೆಕ್ಟ್ರಿಕ್​ ಬಸ್​ಗಳ ಕಾರ್ಯನಿರ್ವಹಣೆಯನ್ನು ಖಾಸಗಿಯವರಿಗೆ ನೀಡಲಾಗಿದ್ದು, ಗ್ರಾಸ್ ಕಾಸ್ಟ್ ಕಾಂಟ್ರಾಕ್ಟ್ (GCC) ನಿರ್ವಹಿಸಲಿದೆ. ಈ ನಿರ್ವಹಣೆಗೆ ಕೆಎಸ್​​ಆರ್​ಟಿಸಿ ಕೂಡ ಹಣ ನೀಡಲು ಮುಂದಾಗಿದ್ದು, ಕಾರ್ಯಾಚರಣೆಯ ವೆಚ್ಚವಾಗಿ ಕಿಮೀಗೆ 55 ರೂಪಾಯಿಗಳನ್ನು ಪಾವತಿಸಲಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:06 am, Mon, 16 January 23

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ