AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಟಿಕೆಟ್ ಇಲ್ಲದೆ ಪಯಾಣಿಸಿದ 3208 ಪ್ರಯಾಣಿಕರಿಗೆ ದಂಡ ಹಾಕಿದ ಕೆಎಸ್ಆರ್​ಟಿಸಿ; ಬಂದ ಮೊತ್ತವೆಷ್ಟು ಗೊತ್ತಾ?

ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 69 ಸಾವಿರ ರೂಗಳನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದು, ತಪ್ಪಿತಸ್ಥರ ವಿರುದ್ಧ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ. ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್ ಅಥವಾ ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು ಈ ಮೂಲಕ ಪ್ರಯಾಣಿಕರಲ್ಲಿ ಮನವಿ ಮಾಡಿದೆ.

ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಟಿಕೆಟ್ ಇಲ್ಲದೆ ಪಯಾಣಿಸಿದ 3208 ಪ್ರಯಾಣಿಕರಿಗೆ ದಂಡ ಹಾಕಿದ ಕೆಎಸ್ಆರ್​ಟಿಸಿ; ಬಂದ ಮೊತ್ತವೆಷ್ಟು ಗೊತ್ತಾ?
ಕೆಎಸ್​ಆರ್​ಟಿಸಿ
Kiran Surya
| Edited By: |

Updated on: Sep 13, 2023 | 6:59 PM

Share

ಬೆಂಗಳೂರು, ಸೆ.13: ಆಗಸ್ಟ್ ತಿಂಗಳಲ್ಲಿ ಕೆಎಸ್ಆರ್​ಟಿಸಿ (KSRTC) ನಿಗಮವು ಟಿಕೆಟ್ ಇಲ್ಲದೆ ಪಯಾಣಿಸಿದ 3208 ಪ್ರಯಾಣಿಕರಿಗೆ ದಂಡ ಹಾಕಿದೆ. ಹೌದು, ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ, ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ ಬರೊಬ್ಬರಿ 44,416 ವಾಹನಗಳನ್ನು ತನಿಖೆಗೊಳಪಡಿಸಿ 3020 ಪ್ರಕರಣಗಳನ್ನು ಪತ್ತೆಹಚ್ಚಿ, 3208 ಪ್ರಯಾಣಿಕರಿಗೆ 4ಲಕ್ಷದ 70 ಸಾವಿರ ರೂ ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ನಿಗಮದ ಆದಾಯದಲ್ಲಿ ಸೋರಿಕೆಯಾಗುತ್ತಿದ್ದ ಸಾವಿರಾರು ರೂಪಾಯಿ ಹಣ ಪತ್ತೆ

ಹೌದು, ದಂಡ ಹಾಕಿದಲ್ಲದೆ, ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 69 ಸಾವಿರ ರೂಗಳನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದು, ತಪ್ಪಿತಸ್ಥರ ವಿರುದ್ಧ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ. ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್ ಅಥವಾ ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು ಈ ಮೂಲಕ ಪ್ರಯಾಣಿಕರಲ್ಲಿ ಮನವಿ ಮಾಡಲಾಗಿದೆ ಎಂದು ಕೆಎಸ್ಆರ್​ಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಇದನ್ನೂ ಓದಿ:ಪ್ಯಾಕೆಟ್​​ನಲ್ಲಿ ಒಂದೇ ಒಂದು ಬಿಸ್ಕತ್ ಕಡಿಮೆ ಕೊಟ್ಟು.. ಒಂದು ಲಕ್ಷ ರೂಪಾಯಿ ದಂಡ ಕಟ್ಟಿದ ಸನ್​ ಫೀಸ್ಟ್!

ಬೆಂಗಳೂರು ಬಂದ್ ಕರೆ ಕೊಟ್ಟಿತ್ತು. ಇದರಿಂದ ಬಿಎಂಟಿಸಿಗೆ ಕೋಟಿ ಕೋಟಿ ಆದಾಯ ಹರಿದು ಬಂದಿದೆ ಎಂದು ಟಿವಿ9 ಗೆ ಬಿಎಂಟಿಸಿಯ ಹಿರಿಯ ಅಧಿಕಾರಿಗಳ ಮಾಹಿತಿ ನೀಡಿದ್ದರು. ಬಂದ್​ ಇರುವ ಹಿನ್ನಲೆ ಖಾಸಗಿ ಸಾರಿಗೆಗಳನ್ನು ಅವಲಂಬಿಸುತ್ತಿದ್ದವರು, ನಿನ್ನೆ ಸಾರಿಗೆ ಬಸ್​ಗಳನ್ನು ಅವಲಂಬಿಸುವಂತಾಗಿತ್ತು. ಹೀಗಾಗಿ ಬಿಎಂಟಿಸಿ ಬಸ್​ಗಳಿಗೆ ಡಿಮಾಂಡ್ ಹೆಚ್ಚಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಬಿಎಂಟಿಸಿ ಕಡೆ ಮುಖ ಮಾಡಿದ್ದರು.

ಇನ್ನು ಈ ಕುರಿತು ಹೇಳಿದ್ದ ಅಧಿಕಾರಿಯೊಬ್ಬರು ‘ಯಾವಾಗಲೂ 2400 ರಿಂದ 2500 ಶೆಡ್ಯುಲ್ ಅಪರೇಟ್ ಮಾಡುತ್ತಿದ್ದೇವೂ, ನಿನ್ನೆ 384 ಶೆಡ್ಯುಲ್ ಹೆಚ್ಚುವರಿ ಸಂಚಾರ ಮಾಡಿ, 1600 ಟ್ರಿಪ್ ಹೆಚ್ಚುವರಿಯಾಗಿ ಮಾಡಲಾಗಿತ್ತು. ಜೊತೆಗೆ ಏರ್ಪೋರ್ಟ್​ಗೆ ವಿಶೇಷವಾಗಿ ಸುಮಾರು 55 ರಿಂದ 60 ಹೆಚ್ಚುವರಿ ಟ್ರಿಪ್​ಗಳನ್ನು ಮಾಡಲಾಗಿದ್ದು, 12 ಸಾವಿರ ಜನ ಯಾವಾಗಲೂ ಏರ್ಪೋರ್ಟ್ ಬಸ್​ನಲ್ಲಿ ಪ್ರಯಾಣಿಸುತ್ತಿದ್ದರು. ಆದರೆ, ಬಂದ್ ದಿನ ಏರ್ಪೋರ್ಟ್ ರಸ್ತೆಯಲ್ಲಿ ಬರೊಬ್ಬರಿ 22,371 ಜನ ಓಡಾಟ ನಡೆಸಿದ್ದಾರೆ. ಇದರಿಂದ ಒಂದೇ ದಿನ60 ಲಕ್ಷ ರೆವಿನ್ಯೂ ಏರ್ಪೋರ್ಟ್ ಬಸ್​ಗಳಿಂದ ಬಂದಿದೆ ಎಂದಿದ್ದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​