AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿ ಗಣೇಶ ಹಬ್ಬಕ್ಕೆ ಕೆಎಸ್ಆರ್​ಟಿಸಿ ಕಡೆಯಿಂದ ಬಂಪರ್ ಆಫರ್: ಹೆಚ್ಚಿನ ಬಸ್ ವ್ಯವಸ್ಥೆ, ಟಿಕೆಟ್ ಬುಕಿಂಗ್​ಗೆ ರಿಯಾಯಿತಿ

ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡ ಆನ್ ಲೈನ್ ಮೂಲಕ ಟಿಕೆಟ್ ಬುಕಿಂಗ್ ಮಾಡಲು ಅವಕಾಶ ಮಾಡಿಕೊಡಲಾಗಿದೆ. 5ಕ್ಕೂ ಹೆಚ್ವು ಪ್ರಯಾಣಿಕರು ಮುಂಗಡ ಟಿಕೆಟ್ ಬುಕಿಂಗ್ ಮಾಡಿದಲ್ಲಿ 5% ರಿಯಾಯಿತಿ ಹಾಗೂ ಹೋಗುವ ಹಾಗೂ ಬರುವ ಟಿಕೆಟ್ ಒಟ್ಟಿಗೆ ಖರೀದಿಸಿದಲ್ಲಿ 10% ರಿಯಾಯಿತಿ ನೀಡುವ ಮೂಲಕ ಪ್ರಯಾಣಿಕರಿಗೆ ಬಂಪರ್ ಆಫರ್ ನೀಡಿದೆ.

ಗೌರಿ ಗಣೇಶ ಹಬ್ಬಕ್ಕೆ ಕೆಎಸ್ಆರ್​ಟಿಸಿ ಕಡೆಯಿಂದ ಬಂಪರ್ ಆಫರ್: ಹೆಚ್ಚಿನ ಬಸ್ ವ್ಯವಸ್ಥೆ, ಟಿಕೆಟ್ ಬುಕಿಂಗ್​ಗೆ ರಿಯಾಯಿತಿ
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Aug 25, 2022 | 6:46 PM

Share

ಬೆಂಗಳೂರು: ಗೌರಿ ಗಣೇಶ ಹಬ್ಬದ(Gowri Ganesha Festival) ಹಿನ್ನಲೆ ಪ್ರಯಾಣಿಕರಿಗೆ ಕೆಎಸ್ಆರ್​ಟಿಸಿ (KSRTC) ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಆಗಸ್ಟ್ 30 ಹಾಗೂ 31ರಂದು ಗೌರಿ ಗಣೇಶ ಹಬ್ಬದ ಹಿನ್ನಲೆ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಮಾಡುವುದಾಗಿ ಕೆಎಸ್ಆರ್ಟಿಸಿ ತಿಳಿಸಿದೆ.

ಗೌರಿ ಗಣೇಶ ಹಬ್ಬಕ್ಕಾಗಿ ಕೆಎಸ್ಆರ್ಟಿಸಿಯಿಂದ 500 ಹೆಚ್ಚುವರಿ ಬಸ್ಸುಗಳು ಸೇವೆ ಸಲ್ಲಿಸಲಿವೆ. ಮೆಜೆಸ್ಟಿಕ್ ನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕುಂದಾಪುರ, ತಿರುಪತಿ, ಹೈದರಾಬಾದ್ ಸೇರಿದಂತೆ ಹಲವೆಡೆಗೆ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ವಿರಾಜಪೇಟೆ, ಕುಶಾಲನಗರ ಹಾಗೂ ಶಾಂತಿನಗರ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ಕಡೆಗೆ ಬಸ್ ವ್ಯವಸ್ಥೆ ಮಾಡಲಾಗಿದೆ.

ಟಿಕೆಟ್ ಬುಕಿಂಗ್​ಗೆ ಶೇಕಡಾ ಐದು -ಹತ್ತು ರಿಯಾಯಿತಿ:

ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡ ಆನ್ ಲೈನ್ ಮೂಲಕ ಟಿಕೆಟ್ ಬುಕಿಂಗ್ ಮಾಡಲು ಅವಕಾಶ ಮಾಡಿಕೊಡಲಾಗಿದೆ. 5ಕ್ಕೂ ಹೆಚ್ವು ಪ್ರಯಾಣಿಕರು ಮುಂಗಡ ಟಿಕೆಟ್ ಬುಕಿಂಗ್ ಮಾಡಿದಲ್ಲಿ 5% ರಿಯಾಯಿತಿ ಹಾಗೂ ಹೋಗುವ ಹಾಗೂ ಬರುವ ಟಿಕೆಟ್ ಒಟ್ಟಿಗೆ ಖರೀದಿಸಿದಲ್ಲಿ 10% ರಿಯಾಯಿತಿ ನೀಡುವ ಮೂಲಕ ಪ್ರಯಾಣಿಕರಿಗೆ ಬಂಪರ್ ಆಫರ್ ನೀಡಿದೆ. ರಾಜ್ಯದ ಹಾಗೂ ಅಂತರಾಜ್ಯದ ವಿವಿಧ ಸ್ಥಳಗಳಿಂದ ದಿನಾಂಕ 31ರಂದು ಆಗಮಿಸುವ ಪ್ರಯಾಣಿಕರಿಗೂ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:32 pm, Thu, 25 August 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​