AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿ ಗಣೇಶ ಹಬ್ಬಕ್ಕೆ ಕೆಎಸ್ಆರ್​ಟಿಸಿ ಕಡೆಯಿಂದ ಬಂಪರ್ ಆಫರ್: ಹೆಚ್ಚಿನ ಬಸ್ ವ್ಯವಸ್ಥೆ, ಟಿಕೆಟ್ ಬುಕಿಂಗ್​ಗೆ ರಿಯಾಯಿತಿ

ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡ ಆನ್ ಲೈನ್ ಮೂಲಕ ಟಿಕೆಟ್ ಬುಕಿಂಗ್ ಮಾಡಲು ಅವಕಾಶ ಮಾಡಿಕೊಡಲಾಗಿದೆ. 5ಕ್ಕೂ ಹೆಚ್ವು ಪ್ರಯಾಣಿಕರು ಮುಂಗಡ ಟಿಕೆಟ್ ಬುಕಿಂಗ್ ಮಾಡಿದಲ್ಲಿ 5% ರಿಯಾಯಿತಿ ಹಾಗೂ ಹೋಗುವ ಹಾಗೂ ಬರುವ ಟಿಕೆಟ್ ಒಟ್ಟಿಗೆ ಖರೀದಿಸಿದಲ್ಲಿ 10% ರಿಯಾಯಿತಿ ನೀಡುವ ಮೂಲಕ ಪ್ರಯಾಣಿಕರಿಗೆ ಬಂಪರ್ ಆಫರ್ ನೀಡಿದೆ.

ಗೌರಿ ಗಣೇಶ ಹಬ್ಬಕ್ಕೆ ಕೆಎಸ್ಆರ್​ಟಿಸಿ ಕಡೆಯಿಂದ ಬಂಪರ್ ಆಫರ್: ಹೆಚ್ಚಿನ ಬಸ್ ವ್ಯವಸ್ಥೆ, ಟಿಕೆಟ್ ಬುಕಿಂಗ್​ಗೆ ರಿಯಾಯಿತಿ
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Aug 25, 2022 | 6:46 PM

Share

ಬೆಂಗಳೂರು: ಗೌರಿ ಗಣೇಶ ಹಬ್ಬದ(Gowri Ganesha Festival) ಹಿನ್ನಲೆ ಪ್ರಯಾಣಿಕರಿಗೆ ಕೆಎಸ್ಆರ್​ಟಿಸಿ (KSRTC) ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಆಗಸ್ಟ್ 30 ಹಾಗೂ 31ರಂದು ಗೌರಿ ಗಣೇಶ ಹಬ್ಬದ ಹಿನ್ನಲೆ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಮಾಡುವುದಾಗಿ ಕೆಎಸ್ಆರ್ಟಿಸಿ ತಿಳಿಸಿದೆ.

ಗೌರಿ ಗಣೇಶ ಹಬ್ಬಕ್ಕಾಗಿ ಕೆಎಸ್ಆರ್ಟಿಸಿಯಿಂದ 500 ಹೆಚ್ಚುವರಿ ಬಸ್ಸುಗಳು ಸೇವೆ ಸಲ್ಲಿಸಲಿವೆ. ಮೆಜೆಸ್ಟಿಕ್ ನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕುಂದಾಪುರ, ತಿರುಪತಿ, ಹೈದರಾಬಾದ್ ಸೇರಿದಂತೆ ಹಲವೆಡೆಗೆ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ವಿರಾಜಪೇಟೆ, ಕುಶಾಲನಗರ ಹಾಗೂ ಶಾಂತಿನಗರ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ಕಡೆಗೆ ಬಸ್ ವ್ಯವಸ್ಥೆ ಮಾಡಲಾಗಿದೆ.

ಟಿಕೆಟ್ ಬುಕಿಂಗ್​ಗೆ ಶೇಕಡಾ ಐದು -ಹತ್ತು ರಿಯಾಯಿತಿ:

ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡ ಆನ್ ಲೈನ್ ಮೂಲಕ ಟಿಕೆಟ್ ಬುಕಿಂಗ್ ಮಾಡಲು ಅವಕಾಶ ಮಾಡಿಕೊಡಲಾಗಿದೆ. 5ಕ್ಕೂ ಹೆಚ್ವು ಪ್ರಯಾಣಿಕರು ಮುಂಗಡ ಟಿಕೆಟ್ ಬುಕಿಂಗ್ ಮಾಡಿದಲ್ಲಿ 5% ರಿಯಾಯಿತಿ ಹಾಗೂ ಹೋಗುವ ಹಾಗೂ ಬರುವ ಟಿಕೆಟ್ ಒಟ್ಟಿಗೆ ಖರೀದಿಸಿದಲ್ಲಿ 10% ರಿಯಾಯಿತಿ ನೀಡುವ ಮೂಲಕ ಪ್ರಯಾಣಿಕರಿಗೆ ಬಂಪರ್ ಆಫರ್ ನೀಡಿದೆ. ರಾಜ್ಯದ ಹಾಗೂ ಅಂತರಾಜ್ಯದ ವಿವಿಧ ಸ್ಥಳಗಳಿಂದ ದಿನಾಂಕ 31ರಂದು ಆಗಮಿಸುವ ಪ್ರಯಾಣಿಕರಿಗೂ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:32 pm, Thu, 25 August 22

Follow Us
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!