AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heavy Traffic! ಶಕ್ತಿ ಯೋಜನೆ ಜಾರಿ -ಮಹಿಳೆಯರಿಗೆ ಉಚಿತ ಬಸ್​​ ಪ್ರಯಾಣದ ಎಫೆಕ್ಟ್​​, ಕೆಎಸ್ಆರ್ಟಿಸಿ ಸರ್ವರ್ ಡೌನ್, ಮಹಿಳೆಯರ ಪರದಾಟ

ಮಹಿಳೆಯರಿಗೆ ಉಚಿತ ಬಸ್​​ ಪ್ರಯಾಣದ ಎಫೆಕ್ಟ್​​, ಕೆಎಸ್ಆರ್ಟಿಸಿ ಸರ್ವರ್ ಡೌನ್, ಟಿಕೆಟ್ ಬುಕ್ ಮಾಡಿದ್ರೆ ಅಮೌಂಟ್ ಕಟ್ ಆಗ್ತಿದೆ, ಸೀಟ್ ಬುಕ್ ಆಗ್ತಿಲ್ಲ!

Heavy Traffic! ಶಕ್ತಿ ಯೋಜನೆ ಜಾರಿ -ಮಹಿಳೆಯರಿಗೆ ಉಚಿತ ಬಸ್​​ ಪ್ರಯಾಣದ ಎಫೆಕ್ಟ್​​, ಕೆಎಸ್ಆರ್ಟಿಸಿ ಸರ್ವರ್ ಡೌನ್, ಮಹಿಳೆಯರ ಪರದಾಟ
ಮಹಿಳೆಯರಿಗೆ ಉಚಿತ ಬಸ್​​ ಪ್ರಯಾಣದ ಎಫೆಕ್ಟ್​​, ಕೆಎಸ್ಆರ್ಟಿಸಿ ಸರ್ವರ್ ಡೌನ್
ಸಾಧು ಶ್ರೀನಾಥ್​
|

Updated on:Jun 16, 2023 | 7:00 AM

Share

ಬೆಂಗಳೂರು: ರಾಜ್ಯದ ನೂತನ ಕಾಂಗ್ರೆಸ್​​ ಸರ್ಕಾರ ಮಹಿಳೆಯರಿಗೆ (Women) ಉಚಿತ ಬಸ್​​ ಪ್ರಯಾಣ (Free Bus Travel) ಕಲ್ಪಿಸುವ ನಿಟ್ಟಿನಲ್ಲಿ ಶಕ್ತಿ ಯೋಜನೆ (Shakti Scheme) ಜಾರಿಗೆ ತಂದಿದೆ. ಯೋಜನೆ ಜಾರಿಯಾಗಿ ನಾಲ್ಕು ದಿನ ಕಳೆದಿದ್ದು, ಇದರ ಪ್ರಯೋಜನ ಪಡೆಯಲು ಮಹಿಳೆಯರು ನಾ ಮುಂದು ತಾ ಮುಂದು ಎಂದು ಮುಗಿಬಿದ್ದು ಟಿಕೆಟ್ ಬುಕ್ಕಿಂಗ್ ಮಾಡುತ್ತಿದ್ದಾರೆ. ನಾರ್ಮಲ್ ಬಸ್ ಗಳಿಗೆ ಟಿಕೆಟ್ ಬುಕ್ ಮಾಡಲು ಕೆಎಸ್ಆರ್ಟಿಸಿ ಆ್ಯಪ್ ನಲ್ಲಿ ಅವಕಾಶ ನೀಡಲಾಗಿದೆ. ಮಹಿಳೆಯರು ಟಿಕೆಟ್ ಬುಕ್ ಮಾಡಲು ಕೇವಲ 20 ರೂಪಾಯಿ ಮಾತ್ರ ಪಾವತಿಸಬೇಕಾಗುತ್ತದೆ.

ಈ ಹಿನ್ನೆಲೆಯಲ್ಲಿ ಮಹಿಳೆಯರು ಭಾರೀ ಸಂಖ್ಯೆಯಲ್ಲಿ ಟಿಕೆಟ್​ ಬುಕ್ಕಿಂಗ್​ ಮಾಡಿಸಲು ಮುಂದಾಗಿದ್ದಾರೆ. ಇದರಿಂದ  ಕೆಎಸ್ಆರ್ಟಿಸಿ ಸಂಸ್ಥೆಯ ವೈಬ್ ಸೈಟ್ ಸರ್ವರ್ (KSRTC Server) ಮೇಲೆ ಭಾರೀ ಟ್ರಾಫಿಕ್​​ ಪ್ರಭಾವ ಬೀರಿದ್ದು ಅದು ನಿಶ್ಯಕ್ತಿಗೊಂಡು, ಡೌನ್ ಆಗಿದೆ. ಇದರಿಂದ ಟ್ವಿಟರ್ ನಲ್ಲಿ ಜನ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಕೆಟ್ ಬುಕ್ ಮಾಡಿದ್ರೆ ಅಮೌಂಟ್ ಕಟ್ ಆಗ್ತಿದೆ – ಸೀಟ್ ಬುಕ್ ಆಗ್ತಿಲ್ಲ ಎಂದು ಟ್ವೀಟ್ ಮಾಡಿ ಮಹಿಳೆಯರು ಕಣ್ಣೀರು ಹಾಕಿದ್ದಾರೆ. ಕೆಎಸ್ಆರ್ಟಿಸಿ ಸಹಾಯವಾಣಿಗೆ ಕರೆ ಮಾಡಿದರೆ ನೋ ರೆಸ್ಪಾನ್ಸ್ ಬರುತ್ತಿದೆ ಎಂದೂ ಮಹಿಳೆಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Also read:  ಮಹಿಳಾ ಪ್ರಯಾಣಿಕರ ಹೆಚ್ಚಳಕ್ಕೆ ಕೆಎಸ್​ಆರ್​ಟಿಸಿ ಫೆಡರೇಷನ್ ಕಳವಳ: ಸಿದ್ದರಾಮಯ್ಯ ಮುಂದೆ 7 ಬೇಡಿಕೆ

ಯಾವಾಗ ನಮ್ಮ ಹಣ ವಾಪಸ್ ಮಾಡ್ತಿರಾ ಎಂದು ಪ್ರಶ್ನೆಗಳ ಸುರಿಮಳೆಯಾಗಿದೆ. ಇದಕ್ಕೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಕೆಎಸ್ಆರ್ಟಿಸಿ ಅಧಿಕಾರಿಗಳು ಟೆಕ್ನಿಕಲ್ ಸಮಸ್ಯೆಯಿಂದ ‌ಸರ್ವರ್ ಡೌನ್ ಆಗಿದೆ. ಹಾಗಾಗಿ ಐದರಿಂದ ಏಳು ದಿನದೊಳಗೆ ನಿಮ್ಮ ಹಣ ರಿ ಫಂಡ್ ಆಗುತ್ತದೆ ಎಂದು ಸಮಜಾಯಿಷಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:52 am, Fri, 16 June 23

Follow Us
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ