AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heavy Traffic! ಶಕ್ತಿ ಯೋಜನೆ ಜಾರಿ -ಮಹಿಳೆಯರಿಗೆ ಉಚಿತ ಬಸ್​​ ಪ್ರಯಾಣದ ಎಫೆಕ್ಟ್​​, ಕೆಎಸ್ಆರ್ಟಿಸಿ ಸರ್ವರ್ ಡೌನ್, ಮಹಿಳೆಯರ ಪರದಾಟ

ಮಹಿಳೆಯರಿಗೆ ಉಚಿತ ಬಸ್​​ ಪ್ರಯಾಣದ ಎಫೆಕ್ಟ್​​, ಕೆಎಸ್ಆರ್ಟಿಸಿ ಸರ್ವರ್ ಡೌನ್, ಟಿಕೆಟ್ ಬುಕ್ ಮಾಡಿದ್ರೆ ಅಮೌಂಟ್ ಕಟ್ ಆಗ್ತಿದೆ, ಸೀಟ್ ಬುಕ್ ಆಗ್ತಿಲ್ಲ!

Heavy Traffic! ಶಕ್ತಿ ಯೋಜನೆ ಜಾರಿ -ಮಹಿಳೆಯರಿಗೆ ಉಚಿತ ಬಸ್​​ ಪ್ರಯಾಣದ ಎಫೆಕ್ಟ್​​, ಕೆಎಸ್ಆರ್ಟಿಸಿ ಸರ್ವರ್ ಡೌನ್, ಮಹಿಳೆಯರ ಪರದಾಟ
ಮಹಿಳೆಯರಿಗೆ ಉಚಿತ ಬಸ್​​ ಪ್ರಯಾಣದ ಎಫೆಕ್ಟ್​​, ಕೆಎಸ್ಆರ್ಟಿಸಿ ಸರ್ವರ್ ಡೌನ್
Follow us
ಸಾಧು ಶ್ರೀನಾಥ್​
|

Updated on:Jun 16, 2023 | 7:00 AM

ಬೆಂಗಳೂರು: ರಾಜ್ಯದ ನೂತನ ಕಾಂಗ್ರೆಸ್​​ ಸರ್ಕಾರ ಮಹಿಳೆಯರಿಗೆ (Women) ಉಚಿತ ಬಸ್​​ ಪ್ರಯಾಣ (Free Bus Travel) ಕಲ್ಪಿಸುವ ನಿಟ್ಟಿನಲ್ಲಿ ಶಕ್ತಿ ಯೋಜನೆ (Shakti Scheme) ಜಾರಿಗೆ ತಂದಿದೆ. ಯೋಜನೆ ಜಾರಿಯಾಗಿ ನಾಲ್ಕು ದಿನ ಕಳೆದಿದ್ದು, ಇದರ ಪ್ರಯೋಜನ ಪಡೆಯಲು ಮಹಿಳೆಯರು ನಾ ಮುಂದು ತಾ ಮುಂದು ಎಂದು ಮುಗಿಬಿದ್ದು ಟಿಕೆಟ್ ಬುಕ್ಕಿಂಗ್ ಮಾಡುತ್ತಿದ್ದಾರೆ. ನಾರ್ಮಲ್ ಬಸ್ ಗಳಿಗೆ ಟಿಕೆಟ್ ಬುಕ್ ಮಾಡಲು ಕೆಎಸ್ಆರ್ಟಿಸಿ ಆ್ಯಪ್ ನಲ್ಲಿ ಅವಕಾಶ ನೀಡಲಾಗಿದೆ. ಮಹಿಳೆಯರು ಟಿಕೆಟ್ ಬುಕ್ ಮಾಡಲು ಕೇವಲ 20 ರೂಪಾಯಿ ಮಾತ್ರ ಪಾವತಿಸಬೇಕಾಗುತ್ತದೆ.

ಈ ಹಿನ್ನೆಲೆಯಲ್ಲಿ ಮಹಿಳೆಯರು ಭಾರೀ ಸಂಖ್ಯೆಯಲ್ಲಿ ಟಿಕೆಟ್​ ಬುಕ್ಕಿಂಗ್​ ಮಾಡಿಸಲು ಮುಂದಾಗಿದ್ದಾರೆ. ಇದರಿಂದ  ಕೆಎಸ್ಆರ್ಟಿಸಿ ಸಂಸ್ಥೆಯ ವೈಬ್ ಸೈಟ್ ಸರ್ವರ್ (KSRTC Server) ಮೇಲೆ ಭಾರೀ ಟ್ರಾಫಿಕ್​​ ಪ್ರಭಾವ ಬೀರಿದ್ದು ಅದು ನಿಶ್ಯಕ್ತಿಗೊಂಡು, ಡೌನ್ ಆಗಿದೆ. ಇದರಿಂದ ಟ್ವಿಟರ್ ನಲ್ಲಿ ಜನ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಕೆಟ್ ಬುಕ್ ಮಾಡಿದ್ರೆ ಅಮೌಂಟ್ ಕಟ್ ಆಗ್ತಿದೆ – ಸೀಟ್ ಬುಕ್ ಆಗ್ತಿಲ್ಲ ಎಂದು ಟ್ವೀಟ್ ಮಾಡಿ ಮಹಿಳೆಯರು ಕಣ್ಣೀರು ಹಾಕಿದ್ದಾರೆ. ಕೆಎಸ್ಆರ್ಟಿಸಿ ಸಹಾಯವಾಣಿಗೆ ಕರೆ ಮಾಡಿದರೆ ನೋ ರೆಸ್ಪಾನ್ಸ್ ಬರುತ್ತಿದೆ ಎಂದೂ ಮಹಿಳೆಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Also read:  ಮಹಿಳಾ ಪ್ರಯಾಣಿಕರ ಹೆಚ್ಚಳಕ್ಕೆ ಕೆಎಸ್​ಆರ್​ಟಿಸಿ ಫೆಡರೇಷನ್ ಕಳವಳ: ಸಿದ್ದರಾಮಯ್ಯ ಮುಂದೆ 7 ಬೇಡಿಕೆ

ಯಾವಾಗ ನಮ್ಮ ಹಣ ವಾಪಸ್ ಮಾಡ್ತಿರಾ ಎಂದು ಪ್ರಶ್ನೆಗಳ ಸುರಿಮಳೆಯಾಗಿದೆ. ಇದಕ್ಕೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಕೆಎಸ್ಆರ್ಟಿಸಿ ಅಧಿಕಾರಿಗಳು ಟೆಕ್ನಿಕಲ್ ಸಮಸ್ಯೆಯಿಂದ ‌ಸರ್ವರ್ ಡೌನ್ ಆಗಿದೆ. ಹಾಗಾಗಿ ಐದರಿಂದ ಏಳು ದಿನದೊಳಗೆ ನಿಮ್ಮ ಹಣ ರಿ ಫಂಡ್ ಆಗುತ್ತದೆ ಎಂದು ಸಮಜಾಯಿಷಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:52 am, Fri, 16 June 23

ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ