Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ ಪ್ರಯಾಣಿಕನಿಂದ 5 ಲಕ್ಷ ಕದ್ದು ಪರಾರಿಯಾಗುತ್ತಿದ್ದ ಕಳ್ಳನ ಸೆರೆ ಹಿಡಿದ ಕೆಎಸ್​ಆರ್​ಟಿಸಿ ಸಿಬ್ಬಂದಿ

ಊಟ ಮಾಡಲೆಂದು ಬಸ್​ನಿಂದ ಕೆಳಗಿಳಿದ​ ಪ್ರಯಾಣಿಕನ ಬ್ಯಾಗ್​ನಲ್ಲಿದ್ದ ಹಣವನ್ನು ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಕೆಎಸ್​ಆರ್​ಟಿಸಿ ಸಿಬ್ಬಂದಿ ಬೆನ್ನಟ್ಟಿ ಸೆರೆ ಹಿಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದ್ಯ ಕಳ್ಳ ಪೊಲೀಸರ ಅತಿಥಿಯಾಗಿದ್ದು, ಹಣ ಕಳೆದುಕೊಂಡಿದ್ದ ಪ್ರಯಾಣಿಕನಿಗೆ ಹಣ ಹಸ್ತಾಂತರಿಸಲಾಗಿದೆ.

ಬಸ್​ ಪ್ರಯಾಣಿಕನಿಂದ 5 ಲಕ್ಷ ಕದ್ದು ಪರಾರಿಯಾಗುತ್ತಿದ್ದ ಕಳ್ಳನ ಸೆರೆ ಹಿಡಿದ ಕೆಎಸ್​ಆರ್​ಟಿಸಿ ಸಿಬ್ಬಂದಿ
ಕಳ್ಳನನ್ನು ಸೆರೆ ಹಿಡಿದ ಕೆಎಸ್​ಆರ್​ಟಿಸಿ ಸಿಬ್ಬಂದಿ
Follow us
Rakesh Nayak Manchi
|

Updated on: Jun 15, 2023 | 3:40 PM

ಬೆಂಗಳೂರು: ಬಸ್​ ಪ್ರಯಾಣಿಕನಿಂದ 5 ಲಕ್ಷ ರೂಪಾಯಿ ಕದ್ದು (Theft) ಪರಾರಿಯಾಗುತ್ತಿದ್ದ ಕಳ್ಳನನ್ನು ಕೆಎಸ್​ಆರ್​ಟಿಸಿ (KSRTC) ಸಿಬ್ಬಂದಿ ಬೆನ್ನಟ್ಟಿ ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜೂನ್ 14 ರಂದು ಈ ಘಟನೆ ನಡೆದಿದ್ದು, ಸದ್ಯ ಸಿಬ್ಬಂದಿಯ ಸಾಹಸ ಕಾರ್ಯಕ್ಕೆ ಸಾರ್ವಜನಿಕರಿಂದ ಮಾತ್ರವಲ್ಲದೆ, ಸಾರಿಗೆ ಸಂಸ್ಥೆಯೂ ಮೆಚ್ಚುಗೆ ವ್ಯಕ್ತಪಡಿಸಿದೆ.

ಬೆಂಗಳೂರಿನಿಂದ ತಿರುನಲ್ಲಾರ್ ಮಾರ್ಗದಲ್ಲಿ ಕೆಎಸ್​ಆರ್​ಟಿಸಿ ಬಸ್ ಸಂಚಾರ ಮಾಡುತ್ತಿತ್ತು. ಈ ವೇಳೆ ಊಟಕ್ಕೆಂದು ಹೊಟೇಲ್ ಬಳಿ ನಿಲ್ಲಿಸಲಾಗಿತ್ತು. ಅದರಂತೆ, ಆಸನ ಸಂಖ್ಯೆ 29-30 ರಲ್ಲಿ ಕುಳಿತಿದ್ದ ತಿರುಮುರುಗನ್ ಮತ್ತು ಅವರ ಪತ್ನಿ ಊಟಕ್ಕಾಗಿ ಕೆಳಗಿಳಿದ್ದರು. ಇದನ್ನು ಗಮನಿಸಿದ ಆಸನ ಸಂಖ್ಯೆ 17 -18 ರಲ್ಲಿ ಪ್ರಯಾಣಿಕರ ಸೋಗಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಅವರ ಬ್ಯಾಗ್​ನಲ್ಲಿದ್ದ 5 ಲಕ್ಷ ಮೊತ್ತವನ್ನು ಕಳವು ಮಾಡಿದ್ದಾರೆ. ಬಸ್ ಹೊರಟು ಎಲೆಕ್ಟ್ರಾನಿಕ್ ಸಿಟಿ ಸಿಗ್ನಲ್ ಬಳಿ ತಲುಪುತ್ತಿದ್ದಂತೆ ಇಳಿದು ಓಡಲು ಪ್ರಾರಂಭಿಸಿದ್ದಾನೆ.

ಇದನ್ನೂ ಓದಿ: Mysuru Accident: KSRTC ಬಸ್​ ಡಿಕ್ಕಿಯಾಗಿ ಕಾರಿನಲ್ಲಿದ್ದ ನಿಲುವಾಗಿಲು ಗ್ರಾ.ಪಂ. ಸದಸ್ಯ ಸಾವು

ಇದನ್ನು ಗಮನಿಸಿದ ಬಸ್ ಚಾಲಕ ಮಂಜುನಾಥ್ ಹಾಗೂ ಚಾಲಕ ಕಂ ನಿರ್ವಾಹಕ ಸೋಮಪ್ಪ ಟಿ. ಎನ್. ಅವರು ಓಡುತ್ತಿದ್ದ ವ್ಯಕ್ತಿಯನ್ನು ಬೆನ್ನಟ್ಟಿ ಹಿಡಿದು ವಿಚಾರಿಸಿದಾಗ ಹಣ ಪತ್ತೆಯಾಗಿದೆ. ಕೂಡಲೇ ಪೊಲೀಸ್ ಠಾಣೆಗೆ ಒಪ್ಪಿಸಿ ಶೌರ್ಯ ಮೆರೆದಿದ್ದಾರೆ. ಇತ್ತ ಹಣ ಕಳೆದುಕೊಂಡಿದ್ದ ತಿರುಮುರುಗನ್ ತಮ್ಮ ಹಣ ತಮಗೆ ಸಿಕ್ಕ ಕುರಿತು ಅತೀವ ಸಂತಸ ವ್ಯಕ್ತಪಡಿಸಿ, ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿ ಇ-ಮೇಲ್ ಕಳುಹಿಸಿದ್ದಾರೆ.

ಈ ಘಟನೆ ಬಗ್ಗೆ ಸಂತಸ ವ್ಯಕ್ತಪಡಿಸಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕರವ ವಿ. ಅನ್ಬುಕುಮಾರ್, ಸಿಬ್ಬಂದಿಗಳ ಸಮಯ ಪ್ರಜ್ಞೆ, ಧೈರ್ಯ, ಸಾಹಸ ಮತ್ತು ಪ್ರಯಾಣಿಕರ ಬಗೆಗಿನ ಕಾಳಜಿಯು ಪ್ರಶ್ನಾತೀತ. ಇಂತಹ ಸಿಬ್ಬಂದಿಗಳೇ ನಮ್ಮ ಸಂಸ್ಥೆಯ ಹೆಮ್ಮೆ ಮತ್ತು ಗೌರವ. ಇವರ ಈ ಕಾರ್ಯವು ಇತರರಿಗೆ ಮಾದರಿಯಾಗಲಿ ಎಂದು ಆಶಿಸಿ ಇವರ ಸಮಯೋಚಿತ ಸೇವಾ ಕಾರ್ಯಕ್ಕೆ ಹರ್ಷವನ್ನು ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ಈ ಬಗ್ಗೆ ನಿಗಮವು ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್