AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ ಪ್ರಯಾಣಿಕನಿಂದ 5 ಲಕ್ಷ ಕದ್ದು ಪರಾರಿಯಾಗುತ್ತಿದ್ದ ಕಳ್ಳನ ಸೆರೆ ಹಿಡಿದ ಕೆಎಸ್​ಆರ್​ಟಿಸಿ ಸಿಬ್ಬಂದಿ

ಊಟ ಮಾಡಲೆಂದು ಬಸ್​ನಿಂದ ಕೆಳಗಿಳಿದ​ ಪ್ರಯಾಣಿಕನ ಬ್ಯಾಗ್​ನಲ್ಲಿದ್ದ ಹಣವನ್ನು ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಕೆಎಸ್​ಆರ್​ಟಿಸಿ ಸಿಬ್ಬಂದಿ ಬೆನ್ನಟ್ಟಿ ಸೆರೆ ಹಿಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದ್ಯ ಕಳ್ಳ ಪೊಲೀಸರ ಅತಿಥಿಯಾಗಿದ್ದು, ಹಣ ಕಳೆದುಕೊಂಡಿದ್ದ ಪ್ರಯಾಣಿಕನಿಗೆ ಹಣ ಹಸ್ತಾಂತರಿಸಲಾಗಿದೆ.

ಬಸ್​ ಪ್ರಯಾಣಿಕನಿಂದ 5 ಲಕ್ಷ ಕದ್ದು ಪರಾರಿಯಾಗುತ್ತಿದ್ದ ಕಳ್ಳನ ಸೆರೆ ಹಿಡಿದ ಕೆಎಸ್​ಆರ್​ಟಿಸಿ ಸಿಬ್ಬಂದಿ
ಕಳ್ಳನನ್ನು ಸೆರೆ ಹಿಡಿದ ಕೆಎಸ್​ಆರ್​ಟಿಸಿ ಸಿಬ್ಬಂದಿ
Rakesh Nayak Manchi
|

Updated on: Jun 15, 2023 | 3:40 PM

Share

ಬೆಂಗಳೂರು: ಬಸ್​ ಪ್ರಯಾಣಿಕನಿಂದ 5 ಲಕ್ಷ ರೂಪಾಯಿ ಕದ್ದು (Theft) ಪರಾರಿಯಾಗುತ್ತಿದ್ದ ಕಳ್ಳನನ್ನು ಕೆಎಸ್​ಆರ್​ಟಿಸಿ (KSRTC) ಸಿಬ್ಬಂದಿ ಬೆನ್ನಟ್ಟಿ ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜೂನ್ 14 ರಂದು ಈ ಘಟನೆ ನಡೆದಿದ್ದು, ಸದ್ಯ ಸಿಬ್ಬಂದಿಯ ಸಾಹಸ ಕಾರ್ಯಕ್ಕೆ ಸಾರ್ವಜನಿಕರಿಂದ ಮಾತ್ರವಲ್ಲದೆ, ಸಾರಿಗೆ ಸಂಸ್ಥೆಯೂ ಮೆಚ್ಚುಗೆ ವ್ಯಕ್ತಪಡಿಸಿದೆ.

ಬೆಂಗಳೂರಿನಿಂದ ತಿರುನಲ್ಲಾರ್ ಮಾರ್ಗದಲ್ಲಿ ಕೆಎಸ್​ಆರ್​ಟಿಸಿ ಬಸ್ ಸಂಚಾರ ಮಾಡುತ್ತಿತ್ತು. ಈ ವೇಳೆ ಊಟಕ್ಕೆಂದು ಹೊಟೇಲ್ ಬಳಿ ನಿಲ್ಲಿಸಲಾಗಿತ್ತು. ಅದರಂತೆ, ಆಸನ ಸಂಖ್ಯೆ 29-30 ರಲ್ಲಿ ಕುಳಿತಿದ್ದ ತಿರುಮುರುಗನ್ ಮತ್ತು ಅವರ ಪತ್ನಿ ಊಟಕ್ಕಾಗಿ ಕೆಳಗಿಳಿದ್ದರು. ಇದನ್ನು ಗಮನಿಸಿದ ಆಸನ ಸಂಖ್ಯೆ 17 -18 ರಲ್ಲಿ ಪ್ರಯಾಣಿಕರ ಸೋಗಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಅವರ ಬ್ಯಾಗ್​ನಲ್ಲಿದ್ದ 5 ಲಕ್ಷ ಮೊತ್ತವನ್ನು ಕಳವು ಮಾಡಿದ್ದಾರೆ. ಬಸ್ ಹೊರಟು ಎಲೆಕ್ಟ್ರಾನಿಕ್ ಸಿಟಿ ಸಿಗ್ನಲ್ ಬಳಿ ತಲುಪುತ್ತಿದ್ದಂತೆ ಇಳಿದು ಓಡಲು ಪ್ರಾರಂಭಿಸಿದ್ದಾನೆ.

ಇದನ್ನೂ ಓದಿ: Mysuru Accident: KSRTC ಬಸ್​ ಡಿಕ್ಕಿಯಾಗಿ ಕಾರಿನಲ್ಲಿದ್ದ ನಿಲುವಾಗಿಲು ಗ್ರಾ.ಪಂ. ಸದಸ್ಯ ಸಾವು

ಇದನ್ನು ಗಮನಿಸಿದ ಬಸ್ ಚಾಲಕ ಮಂಜುನಾಥ್ ಹಾಗೂ ಚಾಲಕ ಕಂ ನಿರ್ವಾಹಕ ಸೋಮಪ್ಪ ಟಿ. ಎನ್. ಅವರು ಓಡುತ್ತಿದ್ದ ವ್ಯಕ್ತಿಯನ್ನು ಬೆನ್ನಟ್ಟಿ ಹಿಡಿದು ವಿಚಾರಿಸಿದಾಗ ಹಣ ಪತ್ತೆಯಾಗಿದೆ. ಕೂಡಲೇ ಪೊಲೀಸ್ ಠಾಣೆಗೆ ಒಪ್ಪಿಸಿ ಶೌರ್ಯ ಮೆರೆದಿದ್ದಾರೆ. ಇತ್ತ ಹಣ ಕಳೆದುಕೊಂಡಿದ್ದ ತಿರುಮುರುಗನ್ ತಮ್ಮ ಹಣ ತಮಗೆ ಸಿಕ್ಕ ಕುರಿತು ಅತೀವ ಸಂತಸ ವ್ಯಕ್ತಪಡಿಸಿ, ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿ ಇ-ಮೇಲ್ ಕಳುಹಿಸಿದ್ದಾರೆ.

ಈ ಘಟನೆ ಬಗ್ಗೆ ಸಂತಸ ವ್ಯಕ್ತಪಡಿಸಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕರವ ವಿ. ಅನ್ಬುಕುಮಾರ್, ಸಿಬ್ಬಂದಿಗಳ ಸಮಯ ಪ್ರಜ್ಞೆ, ಧೈರ್ಯ, ಸಾಹಸ ಮತ್ತು ಪ್ರಯಾಣಿಕರ ಬಗೆಗಿನ ಕಾಳಜಿಯು ಪ್ರಶ್ನಾತೀತ. ಇಂತಹ ಸಿಬ್ಬಂದಿಗಳೇ ನಮ್ಮ ಸಂಸ್ಥೆಯ ಹೆಮ್ಮೆ ಮತ್ತು ಗೌರವ. ಇವರ ಈ ಕಾರ್ಯವು ಇತರರಿಗೆ ಮಾದರಿಯಾಗಲಿ ಎಂದು ಆಶಿಸಿ ಇವರ ಸಮಯೋಚಿತ ಸೇವಾ ಕಾರ್ಯಕ್ಕೆ ಹರ್ಷವನ್ನು ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ಈ ಬಗ್ಗೆ ನಿಗಮವು ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ