AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ದಾಖಲೆ ಸೃಷ್ಟಿಸಿ ಕೆಎಸ್​ಆರ್​ಟಿಸಿ ಸಿಬ್ಬಂದಿ ವರ್ಗಾವಣೆ: ಪರಿಶೀಲನೆ ಬಳಿಕ ಅಸಲಿ ಸತ್ಯ ಬಯಲು

ಇತ್ತೀಚೆಗೆ ಆರೋಗ್ಯ ಇಲಾಖೆ ಅಧಿಕಾರಿಯನ್ನ ಅಬಕಾರಿ ಇಲಾಖೆಗೆ ವರ್ಗಾವಣೆ ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಮಧ್ಯೆ ಮತ್ತೊಂದು ವರ್ಗಾವಣೆ ನಡೆದಿದೆ. ವರ್ಗಾವಣೆ ಕೋರಿ ಅರ್ಜಿ ಸಲ್ಲಿಸದಿದ್ದರೂ ವರ್ಗಾವಣೆ ಮಾಡಿರುವುದು ವಿಚಿತ್ರ. ಸದ್ಯ ಈ ವಿಚಾರವಾಗಿ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಕಲಿ ದಾಖಲೆ ಸೃಷ್ಟಿಸಿ ಕೆಎಸ್​ಆರ್​ಟಿಸಿ ಸಿಬ್ಬಂದಿ ವರ್ಗಾವಣೆ: ಪರಿಶೀಲನೆ ಬಳಿಕ ಅಸಲಿ ಸತ್ಯ ಬಯಲು
ಪ್ರಾತಿನಿಧಿಕ ಚಿತ್ರImage Credit source: google
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Feb 16, 2026 | 8:16 PM

Share

ಬೆಂಗಳೂರು, ಫೆಬ್ರವರಿ 16: ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಲಿದ್ದರು ಕೆಎಸ್​ಆರ್​ಟಿಸಿ (KSRTC) ಸಿಬ್ಬಂದಿ ವರ್ಗಾವಣೆ (Transfer) ನಡೆದಿರುವಂತಹ ಘಟನೆಯೊಂದು ನಗರದಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ವಿಭಾಗದ ಮಾಗಡಿ ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಚಾಲಕ ಕಂ ನಿರ್ವಾಹಕ ಎಂ.ಜಯದೇವರನ್ನು ಏಕಾಏಕಿ ಮಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು. ಸದ್ಯ ಪರಿಶೀಲನೆ ವೇಳೆ ಯಾರೋ ಇವರ ಹೆಸರಿನಲ್ಲಿ ವರ್ಗಾವಣೆ ಅರ್ಜಿ ಸಲ್ಲಿಸಿರುವುದು ಪತ್ತೆಯಾಗಿದ್ದು, ವಿಧಾನಸೌಧ ಠಾಣೆಯಲ್ಲಿ ಸಚಿನ್ ಎಂಬುವವರ ವಿರುದ್ಧ ಕೇಸ್ ದಾಖಲಾಗಿದೆ.

ನಡೆದಿದ್ದೇನು? 

ಬೆಂಗಳೂರು ದಕ್ಷಿಣ ವಿಭಾಗದ ಮಾಗಡಿ ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎಂ.ಜಯದೇವರನ್ನು ಏಕಾಏಕಿ ಮಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶಿಫಾರಸಿನ ಮೇಲೆ ವರ್ಗಾವಣೆ ಆಗಿತ್ತು.

ಇದನ್ನೂ ಓದಿ: ಪ್ರಯಾಣಿಕರಿಗೆ ಶಾಕ್ ಕೊಟ್ಟ ಕೆಎಸ್​ಆರ್​ಟಿಸಿ: ಇಂದಿನಿಂದಲೇ ಈ ದರ ಹೆಚ್ಚಳ

ವರ್ಗಾವಣೆ ಬಗ್ಗೆ ಅನುಮಾನ ಹಿನ್ನೆಲೆ ಜಯದೇವ ಪರಿಶೀಲನೆ ಮಾಡಿದ್ದಾರೆ. ವಿಧಾನಸೌಧದ ಸಚಿವರ ಕಚೇರಿಗೆ ಭೇಟಿ ನೀಡಿದ್ದ ಸಿಬ್ಬಂದಿ, ಜಯದೇವ ಹೆಸರಿನಲ್ಲಿ ಸಚಿವರು ಶಿಫಾರಸು ಮಾಡಿ ಪತ್ರ ನೀಡಿರುವುದು ಪತ್ತೆಯಾಗಿತ್ತು. ಹೀಗಾಗಿ ನಾನು ವರ್ಗಾವಣೆ ಕೋರಿ ಮನವಿ ಪತ್ರ ಸಲ್ಲಿಸಿಲ್ಲ. ಯಾರೋ ನನ್ನ ಹೆಸರಿನ ಮನವಿ ಪತ್ರ ಸಲ್ಲಿಸಿದ್ದಾರೆ ಎಂದು ವಿಧಾನಸೌಧ ಠಾಣೆಗೆ ಜಯದೇವ ದೂರು ನೀಡಿದ್ದಾರೆ.

ದೂರಿನಲ್ಲೇನಿದೆ? 

ಈ ಹಿಂದೆ ನಾನು (ಜಯದೇವ) ಬೆಂಗಳೂರು ಕೇಂದ್ರೀಯ ವಿಭಾಗದ 6ನೇ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ದಿನಾಂಕ 11.11.2025 ರಂದು ಮುಖ್ಯ ಸಂಚಾರ ವ್ಯವಸ್ಥಾಪಕರಾದ ಅಂತೋಣಿ ಜಾರ್ಜ್ ರವರು ನನ್ನನ್ನು ಏಕಾಏಕಿ ಬೆಂಗಳೂರು ಕೇಂದ್ರೀಯ ದಿಂದ ಮಂಗಳೂರು ವಿಭಾಗಕ್ಕೆ ವರ್ಗಾವಣೆ ಮಾಡಿದ್ದರು. ಈ ಬಗ್ಗೆ ಅನುಮಾನಗೊಂಡು ಪರಿಶೀಲನೆ ಮಾಡಿದಾಗ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಶಿಫಾರಸ್ಸಿನ ಮೇರೆಗೆ ನನ್ನ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಯಿತು.

ಇದನ್ನೂ ಓದಿ: ಬಿಗ್ ಶಾಕ್ ಕೊಟ್ಟ KSRTC: ನಾಳೆಯಿಂದಲೇ ನೂತನ ಪರಿಷ್ಕ್ರತ ದರ ಜಾರಿಗೆ

ನಂತರ ಕೆಎಸ್​​ಆರ್​​ಟಿಸಿ ಕೇಂದ್ರ ಕಚೇರಿಗೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಆರ್​ಟಿಐ ಮೂಲಕ ಅರ್ಜಿ ಸಲ್ಲಿಸಿ ದಾಖಲಾತಿಗಳನ್ನು ಪಡೆದು ಪರಿಶೀಲಿಸಿದಾಗ ನನ್ನ ಹೆಸರಿನಲ್ಲಿ ನಕಲಿ ಸಹಿ ಮಾಡಿ, ನಕಲಿ ದಾಖಲೆ ಸೃಷ್ಟಿ ಮಾಡಿ ನಾನು ಕೋರಿರುವಂತೆ ಕೌಟುಂಬಿಕ ಸಮಸ್ಯೆ ಹಿನ್ನಲೆಯಲ್ಲಿ ಬೆಂಗಳೂರು ಕೇಂದ್ರೀಯ ವಿಭಾಗದಿಂದ ಮಂಗಳೂರು ವಿಭಾಗಕ್ಕೆ ವರ್ಗಾವಣೆ ಮಾಡುವಂತೆ ದಿನಾಂಕ 24.09.2025 ರಂದು ಮನವಿ ಸಲ್ಲಿಸಿದ್ದು, ಸಚಿವರ ನಡವಳಿ ಪತ್ರ ಸ್ವೀಕರಿಸಿ ತೆಗೆದುಕೊಂಡು ಹೋದ ಸಚಿನ್ ನನ್ನು ವಿಚಾರಿಸಿ, ಸದರಿ ನಕಲಿ ದಾಖಲಾತಿಯನ್ನು ಸೃಷ್ಟಿಸಿ, ಸಚಿವರ ಕಚೇರಿಗೆ ಸಲ್ಲಿಸಿ ವರ್ಗಾವಣೆಗೆ ಕಾರಣರಾಗಿರುವ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ
ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ
ರಣಜಿ ಟ್ರೋಫಿ ಸೆಮಿಫೈನಲ್‌; ಸ್ಮರಣೀಯ ಶತಕ ಸಿಡಿಸಿದ ಸ್ಮರಣ್
ರಣಜಿ ಟ್ರೋಫಿ ಸೆಮಿಫೈನಲ್‌; ಸ್ಮರಣೀಯ ಶತಕ ಸಿಡಿಸಿದ ಸ್ಮರಣ್
ಭಾರತದ ವಿರುದ್ಧ ಸೋಲು; ಪಾಕಿಸ್ತಾನದಲ್ಲಿ ಟಿವಿಗಳು ಪುಡಿಪುಡಿ
ಭಾರತದ ವಿರುದ್ಧ ಸೋಲು; ಪಾಕಿಸ್ತಾನದಲ್ಲಿ ಟಿವಿಗಳು ಪುಡಿಪುಡಿ
ಅಪಘಾತಕ್ಕೆ 2 ವರ್ಷದ ಮಗು ಬಲಿ: ರಸ್ತೆ ದುಃಸ್ಥಿತಿ ಖಂಡಿಸಿ ಪ್ರತಿಭಟನೆ
ಅಪಘಾತಕ್ಕೆ 2 ವರ್ಷದ ಮಗು ಬಲಿ: ರಸ್ತೆ ದುಃಸ್ಥಿತಿ ಖಂಡಿಸಿ ಪ್ರತಿಭಟನೆ
ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಮಣಿಶಂಕರ್ ಅಯ್ಯರ್
ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಮಣಿಶಂಕರ್ ಅಯ್ಯರ್
ನಾಪತ್ತೆಯಾದ ಮಹಿಳೆ ಪರಪುರುಷನ ಮನೆಯಲ್ಲಿ ಪತ್ತೆ: ಇಲ್ಲಿದೆ Exclusive ದೃಶ್ಯ
ನಾಪತ್ತೆಯಾದ ಮಹಿಳೆ ಪರಪುರುಷನ ಮನೆಯಲ್ಲಿ ಪತ್ತೆ: ಇಲ್ಲಿದೆ Exclusive ದೃಶ್ಯ
ಮಿತಿಮೀರಿ ನಡೆದುಕೊಂಡ ದರ್ಶನ್ ಅಭಿಮಾನಿಗೆ ಪೊಲೀಸ್ ಅಧಿಕಾರಿಯಿಂದ ಕಪಾಳಮೋಕ್ಷ
ಮಿತಿಮೀರಿ ನಡೆದುಕೊಂಡ ದರ್ಶನ್ ಅಭಿಮಾನಿಗೆ ಪೊಲೀಸ್ ಅಧಿಕಾರಿಯಿಂದ ಕಪಾಳಮೋಕ್ಷ
ರಿಂಕು ಸಿಂಗ್ ಕೈಯಲ್ಲಿ ಬೌಲಿಂಗ್ ಮಾಡಿಸಿ ನಮ್ಮ ಮರ್ಯಾದೆಯನ್ನೇ ತೆಗೆದುಬಿಟ್ರು
ರಿಂಕು ಸಿಂಗ್ ಕೈಯಲ್ಲಿ ಬೌಲಿಂಗ್ ಮಾಡಿಸಿ ನಮ್ಮ ಮರ್ಯಾದೆಯನ್ನೇ ತೆಗೆದುಬಿಟ್ರು