AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸರಕು ಸಾಗಣೆ ಸೇವೆ ಆರಂಭಿಸಿದ ಕೆಎಸ್‌ಆರ್‌ಟಿಸಿ; 20 ‘ನಮ್ಮ ಕಾರ್ಗೋ’ ಟ್ರಕ್‌ಗಳಿಗೆ ಸಾರಿಗೆ ಸಚಿವ ಚಾಲನೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಲಾಜಿಸ್ಟಿಕ್ಸ್​ನಲ್ಲಿ ‘ನಮ್ಮ ಕಾರ್ಗೋ' ಟ್ರಕ್‌ಗಳನ್ನು ಬಿಡುಗಡೆ ಮಾಡುವ ಮೂಲಕ ತನ್ನ ಹೊಸದೊಂದು ಪ್ರಯತ್ನಕ್ಕೆ ಕಾಲಿಟ್ಟಿದೆ. ರಾಜ್ಯಾದ್ಯಂತ ಕಾರ್ಯನಿರ್ವಹಿಸುವ 20 ಹೊಸ ಟ್ರಕ್‌ಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು (ಶನಿವಾರ) ಚಾಲನೆ ನೀಡಿದರು.

ಬೆಂಗಳೂರು: ಸರಕು ಸಾಗಣೆ ಸೇವೆ ಆರಂಭಿಸಿದ ಕೆಎಸ್‌ಆರ್‌ಟಿಸಿ; 20 'ನಮ್ಮ ಕಾರ್ಗೋ’ ಟ್ರಕ್‌ಗಳಿಗೆ ಸಾರಿಗೆ ಸಚಿವ ಚಾಲನೆ
ಸರಕು ಸಾಗಣೆ ಸೇವೆ ಆರಂಭಿಸಿದ KSRTC
ಕಿರಣ್ ಹನುಮಂತ್​ ಮಾದಾರ್
|

Updated on: Dec 23, 2023 | 3:52 PM

Share

ಬೆಂಗಳೂರು, ಡಿ.23: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC) ಲಾಜಿಸ್ಟಿಕ್ಸ್​ ಆರಂಭಿಸಿದೆ. ಇಂದು(ಡಿ.23) ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ(Ramalinga Reddy) ಅವರು 20 ‘ನಮ್ಮ ಕಾರ್ಗೋ’ ಟ್ರಕ್‌ಗಳಿಗೆ ಚಾಲನೆ ನೀಡಿದರು. ನಂತರ  ಮಾತನಾಡಿ, ‘ಕೆಎಸ್‌ಆರ್‌ಟಿಸಿ ಒಂದು ವರ್ಷದೊಳಗೆ 500 ಟ್ರಕ್‌ಗಳಿಗೆ ತನ್ನ ಕಾರ್ಗೋ ಫ್ಲೀಟ್ ಅನ್ನು ವಿಸ್ತರಿಸಲು ಯೋಜಿಸಿದೆ. ಮುಂದಿನ ಕೆಲವು ದಿನಗಳಲ್ಲಿ 100 ಟ್ರಕ್‌ಗಳು ಸೇರ್ಪಡೆಗೊಳ್ಳಲಿವೆ ಎಂದು ಹೇಳಿದರು.

ಇನ್ನು ಈ ಹೊಸ ಟ್ರಕ್‌ಗಳನ್ನು ಟಾಟಾದ ಪುಣೆ ತಯಾರಿಕ ಘಟಕದಲ್ಲಿ ತಯಾರಿಸಲಾಗಿದ್ದು, ಇದನ್ನು ರಾಜ್ಯದೊಳಗೆ ಸರಕು ಸಾಗಿಸಲು ಬಳಸಲಾಗುತ್ತದೆ. ಈಗ 20 ಟ್ರಕ್​ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಇದರ ಪ್ರತಿಕ್ರಿಯೆಯನ್ನು ನೋಡಿದ ನಂತರ ಒಂದು ತಿಂಗಳಲ್ಲಿ 100 ಮತ್ತು ಒಂದು ವರ್ಷದಲ್ಲಿ 500 ಕ್ಕೆ ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದರು.

ಇದನ್ನೂ ಓದಿ:ಕ್ರಿಸ್​ಮಸ್​ ಹಬ್ಬಕ್ಕೆ ಸಾವಿರ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಿದ KSRTC

ಈ ಟ್ರಕ್​ಗಳಲ್ಲಿ 6 ಟನ್ ಸರಕುಗಳನ್ನು ಸಾಗಿಸಬಹುದು

ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣವು ಸರಕು ಸಾಗಣೆ ಟ್ರಕ್‌ಗಳ ಡಿಪೋ ಆಗಿದ್ದು, ಅಲ್ಲಿಂದ ಅವುಗಳ ಕಾರ್ಯಾಚರಣೆ ನಡೆಯಲಿದೆ. ಕೆಎಸ್‌ಆರ್‌ಟಿಸಿ ತನ್ನ ಸರಕು ವ್ಯಾಪಾರವನ್ನು 2021 ರಲ್ಲಿಯೇ ಸರಕುಗಳನ್ನು ಸಾಗಿಸಲು ಬಸ್‌ಗಳನ್ನು ಬಳಸಿ ಪ್ರಾರಂಭಿಸಿತು. ಇದೀಗ ಸಾರಿಗೆ ಸಂಸ್ಥೆ ಹೆಚ್ಚು ಭಾರವಾದ ಸರಕುಗಳನ್ನು ಸಾಗಿಸಲು ಟ್ರಕ್‌ಗಳನ್ನು ಬಳಸಲು ಪ್ರಾರಂಭಿಸಿದ. ಈ ಆರು ಚಕ್ರಗಳ ಟ್ರಕ್​​ನಲ್ಲಿ 6 ಟನ್ ಸರಕುಗಳನ್ನು ಸಾಗಿಸಬಹುದಾಗಿದೆ.

ರಾಜ್ಯದ ಹಲವೆಡೆ ಸಂಚರಿಸಲಿವೆ ಈ ಟ್ರಕ್​ಗಳು

ಕೆಎಸ್‌ಆರ್‌ಟಿಸಿ ಸಂಸ್ಥೆ ಪ್ರಕಾರ, ಈ ಟ್ರಕ್‌ಗಳು ಬೆಂಗಳೂರು, ಮೈಸೂರು, ತುಮಕೂರು, ಹಾಸನ, ಮಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಸ್ಥಳಗಳಿಂದ ಕಾರ್ಯನಿರ್ವಹಿಸುತ್ತದೆ. ಈ ಕುರಿತು ಉತ್ತಮ ಪ್ರತಿಕ್ರಿಯೆ ಬಂದಲ್ಲಿ, ಹೆಚ್ಚಿನ ಟ್ರಕ್‌ಗಳನ್ನು ಕೊಂಡುಕೊಂಡು ಇನ್ನಷ್ಟು ಜಿಲ್ಲೆಗಳಿಂದ ಸಂಚರಿಸಲಿದೆ. ಆರಂಭದಲ್ಲಿ, ಸಾರಿಗೆ ಇಲಾಖೆಯು ಔಷಧೀಯ, ಜವಳಿ, ಆಹಾರ ಮತ್ತು ಆತಿಥ್ಯ ಉದ್ಯಮಗಳಿಂದ ಸರಕುಗಳನ್ನು ಸಾಗಿಸಲು ಯೋಜಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ