AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಕೊಯಿಕ್ಕೋಡ್​​ ನಡುವೆ ಆ.15ರಿಂದ KSRTC ಫ್ಲೈ ಬಸ್ ಸಂಚಾರ: ಸಮಯ, ಟಿಕೆಟ್​​ ದರದ ಮಾಹಿತಿ ಇಲ್ಲಿದೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇರಳದ ಪ್ರಮುಖ ನಗರವಾದ ಕೊಯಿಕ್ಕೋಡ್‌ಗೆ'ಫ್ಲೈ ಬಸ್' ಸೇವೆಯನ್ನು ಆಗಸ್ಟ್ 15ರಿಂದ ಆರಂಭಿಸುತ್ತಿದೆ. ಬಸ್​​ ಮಾರ್ಗ, ಟಿಕೆಟ್​​ ದರದ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು-ಕೊಯಿಕ್ಕೋಡ್​​ ನಡುವೆ ಆ.15ರಿಂದ KSRTC ಫ್ಲೈ ಬಸ್ ಸಂಚಾರ: ಸಮಯ, ಟಿಕೆಟ್​​ ದರದ ಮಾಹಿತಿ ಇಲ್ಲಿದೆ
ಬೆಂಗಳೂರು-ಕೊಯಿಕ್ಕೋಡ್​​ ನಡುವೆ ಆ.15ರಿಂದ ಫ್ಲೈ ಬಸ್ ಸಂಚಾರ
ಕಿರಣ್​ ಸೂರ್ಯ
| Edited By: |

Updated on:Aug 07, 2026 | 6:22 PM

Share

ಬೆಂಗಳೂರು, ಆಗಸ್ಟ್​​ 07: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಬೆಂಗಳೂರು- ಕೇರಳದ ಕೊಯಿಕ್ಕೋಡ್​​ ನಡುವೆ ಸಂಪರ್ಕ ಕಲ್ಪಿಸುವ ಫ್ಲೈ ಬಸ್ ಸೇವೆ ಆರಂಭವಾಗುತ್ತಿದೆ. ಆಗಸ್ಟ್ 15ರಿಂದ ಈ ನೂತನ ಮಾರ್ಗದಲ್ಲಿ ಬಸ್ ಸಂಚಾರ ಶುರುವಾಗಲಿದ್ದು, ಬಸ್ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಯಲಹಂಕ, ಹೆಬ್ಬಾಳ ಹಾಗೂ ನಾಯಂಡಹಳ್ಳಿ ಮೆಟ್ರೋ ಸ್ಟೇಷನ್ ಮೂಲಕ ಮೈಸೂರು, ಹುಣಸೂರು, ಗೋಣಿಕೊಪ್ಪ, ಪೊನ್ನಂಪೇಟೆ, ಕುಟ್ಟಾ, ಮಾನಂತವಾಡಿ, ಕಲ್ಪಟ್ಟಾ ಮಾರ್ಗದಲ್ಲಿ ಕೋಯಿಕ್ಕೋಡ್ ತಲುಪಲಿದೆ.

ಬಸ್​​ ಮಾರ್ಗ ಮತ್ತು ಸಮಯದ ಮಾಹಿತಿ

ಬೆಂಗಳೂರು- ಕೊಯಿಕ್ಕೋಡ್ ಕೊಯಿಕ್ಕೋಡ್- ಬೆಂಗಳೂರು
ಸ್ಥಳ ಸಮಯ ಸ್ಥಳ ಸಮಯ
ಬೆಂಗಳೂರು ಏರ್​ಪೋರ್ಟ್​​ 22:45:00 ಕೊಯಿಕ್ಕೋಡ್- ಬೆಂಗಳೂರು 19:30:00
ನಾಯಂಡಳ್ಳಿ ಮೆಟ್ರೋ ನಿಲ್ದಾಣ 23:55:00 ಕಲ್ಪಟ್ಟಾ 20:40:00
ಮೈಸೂರು 02:45:00 ಮಾನಂತವಾಡಿ 21:15:00
ಗೋಣೊಕೊಪ್ಪ 04:15:00 ಗೋಣೊಕೊಪ್ಪ 22:50:00
ಮಾನಂತವಾಡಿ 05:20:00 ಮೈಸೂರು 00:30:00
ಕಲ್ಪಟ್ಟಾ 06:00:00 ನಾಯಂಡಳ್ಳಿ ಮೆಟ್ರೋ ನಿಲ್ದಾಣ 03:15:00
ಕೊಯಿಕ್ಕೋಡ್ 07:15:00 ಬೆಂಗಳೂರು ಏರ್​ಪೋರ್ಟ್​​ 04:15:00

ಇದನ್ನೂ ಓದಿ: ಜೋಗ ಜಲಪಾತ ವೀಕ್ಷಣೆಗೆ KSRTCಯಿಂದ ವೀಕೆಂಡ್ ಪ್ಯಾಕೇಜ್

ಟಿಕೆಟ್​​ ದರ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ 960 ರೂ., ಗೋಣಿಕೊಪ್ಪಕ್ಕೆ 1,200 ರೂ., ಮಾನಂತವಾಡಿಗೆ 1,350ರೂ, ಕಲ್ಪೆಟ್ಟಾಗೆ 1,400 ರೂ. ಮತ್ತು ಕೊಯಿಕ್ಕೋಡ್​​ಗೆ 1,500 ರೂಪಾಯಿ ದರವನ್ನು ನಿಗದಿಪಡಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:21 pm, Fri, 7 August 26

Follow Us
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​