ಬೆಂಗಳೂರಿನಿಂದ ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ತೆರಳುವವರಿಗೆ ಕೆಎಸ್​ಆರ್​ಟಿಸಿ ವಿಶೇಷ ಬಸ್

KSRTC special bus to Shabarimala from Bengaluru: ಶಬರಿಮಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕೆಎಸ್​ಆರ್​ಟಿಸಿ ಬೆಂಗಳೂರಿನಿಂದ ಪಂಪಾಕ್ಕೆ ವಿಶೇಷ ಬಸ್​ ಸೌಕರ್ಯ ಕಲ್ಪಿಸಿದೆ. ಡಿಸೆಂಬರ್ 1ರಿಂದ ವಿಶೇಷ ಬಸ್ ಸೌಲಭ್ಯ ಪ್ರಯಾಣಿಕರಿಗೆ ಲಭ್ಯವಿರಲಿದ್ದು, ಯಾತ್ರಾರ್ಥಿಗಳು ಸದುಪಯೋಗಪಡೆದುಕೊಳ್ಳಬೇಕು ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ಬೆಂಗಳೂರಿನಿಂದ ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ತೆರಳುವವರಿಗೆ ಕೆಎಸ್​ಆರ್​ಟಿಸಿ ವಿಶೇಷ ಬಸ್
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on: Nov 27, 2023 | 2:57 PM

ಬೆಂಗಳೂರು, ನವೆಂಬರ್ 27: ಕೇರಳದ ಪ್ರಸಿದ್ಧ ಯಾತ್ರಾ ಸ್ಥಳ ಶಬರಿಮಲೆಗೆ (Shabarimala) ಅಯ್ಯಪ್ಪನ ದರ್ಶನಕ್ಕಾಗಿ ತೆರಳುವವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬೆಂಗಳೂರಿನಿಂದ ಬಸ್​​ ವ್ಯವಸ್ಥೆ ಮಾಡಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್ ಕಾರ್ಯಚರಣೆ ನಡೆಸಲಿದೆ. ಬೆಂಗಳೂರಿಂದ ನೀಲಕ್ಕಲ್ (ಪಂಪಾ, ಶಬರಿಮಲೈ) ಮಾರ್ಗವಾಗಿ ವೋಲ್ವೋ ಬಸ್ ಸಂಚರಿಸಲಿದೆ.

ಡಿಸೆಂಬರ್ 1 ರಿಂದ ಶಬರಿಮಲೆಗೆ ವೋಲ್ವೋ ಬಸ್ ಸಂಚರಿಸಲಿದೆ. ವೋಲ್ವೊ ಬಸ್​​ನ ಟಿಕೆಟ್ ದರ, ಮಾರ್ಗ, ಸಂಚಾರದ ವೇಳಾಪಟ್ಟಿಯ ಕುರಿತು ಕೆಎಸ್​ಆರ್​ಟಿಸಿ ಮಾಹಿತಿ ನೀಡಿದೆ.

ವಯಸ್ಕರಿಗೆ ಬೆಂಗಳೂರಿಂದ ಶಬರಿಮಲೆಗೆ 1600 ರೂಪಾಯಿ ದರ ನಿಗದಿ ಮಾಡಲಾಗಿದೆ. ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50 ಕ್ಕೆ ಹೊರಡಲಿರುವ ವೋಲ್ವೋ ಬಸ್ ಮರುದಿನ ಬೆಳಿಗ್ಗೆ 6.45 ಕ್ಕೆ ಪಂಪಾ ತಲುಪಲಿದೆ. ಅಂದು ಸಂಜೆ ಮತ್ತೆ ಪಂಪಾದಿಂದ ಹೊರಟು ಮರುದಿನ ಬೆಳಿಗ್ಗೆ 10 ಗಂಟೆಗೆ ಬೆಂಗಳೂರು ತಲುಪಲಿದೆ.

ಮತ್ತೊಂದು ರಾಜಹಂಸ ಬಸ್ (ನಾನ್‌ಎಸಿ) ಕೂಡ ಶಬರಿಮಲೆಗೆ ಸಂಚರಿಸಲಿದೆ. ರಾಜಹಂಸ ಬಸ್ ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 8.15ಕ್ಕೆ ಪಂಪಾ ತಲುಪಲಿದೆ. ಆ ದಿನ ಸಂಜೆ 5 ಗಂಟೆಗೆ ಪಂಪಾದಿಂದ ಹೊರಟು ಮರುದಿನ ಮಧ್ಯಾಹ್ನ 12 ಗಂಟೆಗೆ ಬೆಂಗಳೂರು ತಲುಪಲಿದೆ. ರಾಜಹಂಸದಲ್ಲಿ ಬೆಂಗಳೂರಿನಿಂದ ಶಬರಿಮಲೆಗೆ ಪ್ರತಿ ಟಿಕೆಟ್ ಬೆಲೆ 940 ರೂ. ಆಗಿದೆ.

ಶಬರಿಮಲೆ ಬಸ್​ಗೆ ಟಿಕೆಟ್ ಬುಕಿಂಗ್ ಹೇಗೆ?

ಕೆಎಸ್​ಆರ್​ಟಿಸಿ ಅಧಿಕೃತ ವೆಬ್​ಸೈಟ್ (www.ksrtc.in) ಮೂಲಕ ಅಥವಾ ರಾಜ್ಯದಾದ್ಯಂತ ಪ್ರಮುಖ ಬಸ್ ಡಿಪೋಗಳಲ್ಲಿ ಕಾರ್ಯನಿರ್ವಹಿಸುವ ಕೆಎಸ್‌ಆರ್‌ಟಿಸಿ ಟಿಕೆಟ್ ಕೌಂಟರ್‌ಗಳಲ್ಲಿ ಟಿಕೆಟ್ ಕಾಯ್ದಿರಿಸುವಂತೆ ಸಂಸ್ಥೆಯು ಪ್ರಯಾಣಿಕರಿಗೆ ಸಲಹೆ ನೀಡಿದೆ.

ಕೆಎಸ್​ಆರ್​ಟಿಸಿ ಪ್ಯಾಸೆಂಜರ್​ ಅಡ್ವೈಸರಿಯಲ್ಲಿರುವ ಮಾಹಿತಿ ಪ್ರಕಾರ, ಕರ್ನಾಟಕ ರಾಜ್ಯದಾದ್ಯಂತ ಮತ್ತು ನೆರೆಯ ರಾಜ್ಯಗಳ ಪ್ರಮುಖ ಕಡೆಗಳಲ್ಲಿ ಒಟ್ಟು 707 ಟಿಕೆಟ್ ಕೌಂಟರ್‌ಗಳು ಕಾರ್ಯನಿರ್ವಹಿಸುತ್ತಿವೆ.

ಇದನ್ನೂ ಓದಿ: ಅಂಬಾರಿ, ಪಲ್ಲಕ್ಕಿ ಉತ್ಸವಕ್ಕಾಗಿ ಕೆಎಸ್​ಆರ್​ಟಿಸಿಗೆ ಅತ್ಯುತ್ತಮ ಸಾರ್ವಜನಿಕ ಸಂಸ್ಥೆ ಪ್ರಶಸ್ತಿ

ಪ್ರತಿ ವರ್ಷ ಡಿಸೆಂಬರ್ ಹಾಗೂ ಜನವರಿಯಲ್ಲಿ ಭಕ್ತರು ಶಬರಿಮಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರೆ ಕೈಗೊಳ್ಳುತ್ತಾರೆ. ಜನವರಿಯಲ್ಲಿ ಮಕರ ಸಂಕ್ರಮಣದ ದಿನ ದೇಗುಲದಲ್ಲಿ ವಾರ್ಷಿಕ ಉತ್ಸವ ನಡೆಯಲಿದ್ದು, ಮಕರ ಜ್ಯೋತಿಯ ದರ್ಶನವಾಗುತ್ತದೆ. ಉತ್ಸವದ ದಿನ ಲಕ್ಷಾಂತರ ಭಕ್ತರು ಶಬರಿಮಲೆಗೆ ತೆರಳುತ್ತಾರೆ. ಕರ್ನಾಟಕದಿಂದಲೂ ಹೆಚ್ಚಿನ ಸಂಖ್ಯೆಯ ಭಕ್ತರು ಶಬರಿಮಲೆಗೆ ಯಾತ್ರೆ ಕೈಗೊಳ್ಳುತ್ತಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ