AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲ ಬಾರಿಗೆ ಲಾರಿಗಳ ಖರೀದಿಸಿದ KSRTC; ಡಿ.15ರ ನಂತರ ಲಾಜಿಸ್ಟಿಕ್ಸ್ ಸೇವೆ ಆರಂಭ

ಕೆಎಸ್​ಆರ್​ಟಿಸಿ ನಿಗಮದ 62 ವರ್ಷಗಳ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಹೊಸ ಅದೃಷ್ಟ ಪರೀಕ್ಷೆಗೆ ಇಳಿದಿದೆ. ಕೆಎಸ್‌ಆರ್‌ಟಿಸಿಯಲ್ಲೂ ಇನ್ಮುಂದೆ ಲಾಜಿಸ್ಟಿಕ್ಸ್ ಸೇವೆ ಆರಂಭವಾಗಲಿದೆ.  ಇದೇ ಪ್ರಪ್ರಥಮ ಬಾರಿಗೆ KSRTC ಲಾರಿಗಳ ಖರೀದಿಗೆ ಮುಂದಾಗಿದೆ. ಡಿಸೆಂಬರ್ 15ರಂದು ಈ ಲಾರಿಗಳು ಕೆಎಸ್‌ಆರ್‌ಟಿಸಿಯಿಂದ ಲೋಕಾರ್ಪಣೆಯಾಗಲಿದೆ.

ಇದೇ ಮೊದಲ ಬಾರಿಗೆ ಲಾರಿಗಳ ಖರೀದಿಸಿದ KSRTC; ಡಿ.15ರ ನಂತರ ಲಾಜಿಸ್ಟಿಕ್ಸ್ ಸೇವೆ ಆರಂಭ
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
Follow us
Kiran Surya
| Updated By: ಆಯೇಷಾ ಬಾನು

Updated on: Nov 27, 2023 | 4:18 PM

ಬೆಂಗಳೂರು, ನ.27: ನಿಗಮದ ಇತಿಹಾಸದಲ್ಲೇ ಇದೇ ಪ್ರಪ್ರಥಮ ಬಾರಿಗೆ KSRTC ಲಾರಿಗಳ ಖರೀದಿಗೆ ಮುಂದಾಗಿದೆ. ಸಾರ್ವಜನಿಕ ಸೇವೆಯಲ್ಲಿ ಈಗಾಗಲೇ ಮೈಲಿಗಲ್ಲು ಸಾಧಿಸಿರೋ KSRTC ಈಗ ಲಾಜಿಸ್ಟಿಕ್ಸ್ ವಿಭಾಗದಲ್ಲೂ ತನ್ನ ಅದೃಷ್ಟ‌ ಪರೀಕ್ಷೆಗೆ ಇಳಿದಿದೆ. ಆರಂಭಿಕ ಹಂತದಲ್ಲೇ 100 ಕೋಟಿ ಆದಾಯದ ನಿರೀಕ್ಷೆ ಇಟ್ಟಿರೋ ಇಲಾಖೆ, ಮುಂದಿನ ದಿನಗಳಲ್ಲಿ ಹೆಚ್ಚುವರಿ ಲಾರಿಗಳನ್ನು ಖರೀದಿ ಮಾಡೋ ಲೆಕ್ಕಾಚಾರವನ್ನೂ ಹೊಂದಿದೆ.

ಇಡೀ ದೇಶದಲ್ಲೇ ಸಾರ್ವಜನಿಕ ಸಾರಿಗೆ ಸೇವೆಯಲ್ಲಿ ಛಾಪು ಮೂಡಿಸಿ ನೂರಾರು ಪ್ರಶಸ್ತಿಗಳನ್ನು ಪಡೆದಿರೋ ಕೆಎಸ್‌ಆರ್‌ಟಿಸಿ ಹೊಸ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ. ನಿಗಮಕ್ಕೆ ವಾಣಿಜ್ಯ ಆದಾಯವನ್ನು ಹೆಚ್ಚಿಸಿಕೊಳ್ಳೋ ನಿಟ್ಟಿನಲ್ಲಿ ಲಾಜಿಸ್ಟಿಕ್ಸ್ ಸೇವೆ ಆರಂಭಿಸಲು ನಿರ್ಧರಿಸಿದೆ. ಯಾವ ರೀತಿ ಬಸ್‌ಗಳ ಸೇವೆಯನ್ನು ಇಡೀ ರಾಜ್ಯದಲ್ಲಿ ನೀಡಲಾಗ್ತಿದ್ಯೋ, ಅದೇ ಮಾದರಿಯಲ್ಲೇ ಲಾರಿಗಳ ಸೇವೆಯನ್ನೂ ಇಡೀ ರಾಜ್ಯಕ್ಕೆ ವಿಸ್ತರಿಸಲು ನಿರ್ಧರಿಸಿದೆ. ಒಂದು ವೇಳೆ ಈ ಪ್ಲಾನ್ ಕ್ಲಿಕ್ ಆಗಿ ಅಂದುಕೊಂಡಿರೋದಕ್ಕಿಂತ ಹೆಚ್ಚು ಲಾಭ ಸಿಗುವಂತಾದ್ರೆ ಇತರೆ ರಾಜ್ಯಗಳಿಗೂ ರೂಟ್ ಹಾಕಿ ಲಾರಿಗಳನ್ನು ಕಳಿಸಿ ಗುರಿ ಹೊಂದಿದೆ.

ಇದನ್ನೂ ಓದಿ: ಬೆಂಗಳೂರಿನಿಂದ ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ತೆರಳುವವರಿಗೆ ಕೆಎಸ್​ಆರ್​ಟಿಸಿ ವಿಶೇಷ ಬಸ್

ಪೈಲಟ್ ಪ್ರಾಜೆಕ್ಟ್‌ ಆಗಿರೋ ಈ ಲಾಜಿಸ್ಟಿಕ್ಸ್ ಸೇವೆಯ ಮೇಲೆ ಇಲಾಖೆಗೆ ಹೆಚ್ಚಿನ ನಿರೀಕ್ಷೆಯಿದೆ. ಸಾಮಾನ್ಯವಾಗಿ ನಿಗಮಗಳ ಬಸ್‌ಗಳನ್ನು ಹೇಗೆ ಡಿಪೋಗಳಲ್ಲಿ ನಿರ್ವಹಿಸಲಾಗುತ್ತೋ, ಅದೇ ರೀತಿ ಈ ಲಾರಿಗಳನ್ನು ಕೂಡ ನಿರ್ವಹಿಸಲು ಯೋಜಿಸಲಾಗಿದೆ. ಲಾರಿಯೊಂದಕ್ಕೆ 17.03 ಲಕ್ಷದ ಥರ 3.4 ಕೋಟಿ ರೂಪಾಯಿ ವೆಚ್ಚದಲ್ಲಿ 20 ಲಾರಿಗಳನ್ನು ಖರೀದಿ ಮಾಡಲಾಗಿದೆ. ಪೂಣೆಯಲ್ಲಿ ಈಗಾಗಲೇ ಲಾರಿಗಳ ಬಾಡಿ ಬಿಲ್ಡಿಂಗ್ ಕಾಮಗಾರಿಯೂ ಆರಂಭವಾಗಿದ್ದು, ಕೆಲವೇ ದಿನಗಳಲ್ಲಿ ನೂತನ ಕೆಎಸ್‌ಆರ್‌ಟಿಸಿ ಲಾರಿಗಳು ನಮ್ಮ ರಾಜ್ಯಕ್ಕೆ ಆಗಮಿಸಲಿವೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ಸಾರಿಗೆ ಮುಖಂಡರು ಇದರಿಂದ ನಿಗಮಕ್ಕೆ ಲಾಭ ಬರಲಿದೆ ‌ಎಂದು ತಿಳಿಸಿದ್ದಾರೆ.

ಇನ್ನು, ಅಂದುಕೊಂಡ ಸಮಯಕ್ಕೆ ಎಲ್ಲ ಕೆಲಸಗಳು ಮುಗಿದ್ರೆ, ಡಿಸೆಂಬರ್ 15ರಂದು ಈ ಲಾರಿಗಳು ಕೆಎಸ್‌ಆರ್‌ಟಿಸಿಯಿಂದ ಲೋಕಾರ್ಪಣೆಯಾಗಲಿದೆ. ವಾಣಿಜ್ಯ ಆದಾಯ ಜಾಸ್ತಿ ಮಾಡೋ ಉದ್ದೇಶದಿಂದ ಪ್ರಾರಂಭಿಸುತ್ತಿರೋ ಈ ಯೋಜನೆಯಿಂದ ಮೊದಲ ನಿರೀಕ್ಷೆಯೇ ಬರೊಬ್ಬರಿ 100 ಕೋಟಿ ರೂಪಾಯಿಯಾಗಿದೆ. ಒಂದು ವೇಳೆ ಜನರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದ್ರೆ, ಹೆಚ್ಚಿನ ಲಾರಿಗಳನ್ನು ಖರೀದಿಸಿ ರಾಜ್ಯಕ್ಕೆ ಮಾತ್ರ ಸೀಮಿತವಾಗದಂತೆ ಪರರಾಜ್ಯಗಳಿಗೆ ಲಾಜಿಸ್ಟಿಕ್ಸ್ ಸೇವೆ ನೀಡೋ ಚಿಂತನೆ ಸಾರಿಗೆ ಇಲಾಖೆಯದ್ದಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್