AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident In majestic: ಮೆಜೆಸ್ಟಿಕ್​ನಲ್ಲಿ ಕೆಎಸ್​ಆರ್​ಟಿಸಿ ವೋಲ್ವೋ ಬಸ್ ಅಪಘಾತ; ವ್ಯಕ್ತಿ ಸಾವು

ಘಟನೆಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವನ ಕಾಲುಗಳು ಕಟ್ ಆಗಿವೆ. ಸ್ಥಳಕ್ಕೆ ಉಪ್ಪಾರಪೇಟೆ ಸಂಚಾರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Accident In majestic: ಮೆಜೆಸ್ಟಿಕ್​ನಲ್ಲಿ ಕೆಎಸ್​ಆರ್​ಟಿಸಿ ವೋಲ್ವೋ ಬಸ್ ಅಪಘಾತ; ವ್ಯಕ್ತಿ ಸಾವು
ಮೆಜೆಸ್ಟಿಕ್ನಲ್ಲಿ ಕೆಎಸ್ಅರ್ಟಿಸಿ ವೋಲ್ವೋ ಬಸ್ ಅಪಘಾತ
TV9 Web
| Edited By: |

Updated on:Jul 29, 2021 | 9:12 AM

Share

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದ ಮುಂಭಾಗದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಕೆಎಸ್ಆರ್ಟಿಸಿ ವೋಲ್ವೋ ಬಸ್ ವ್ಯಕ್ತಿಗೆ ಡಿಕ್ಕಿ ಹೊಡೆದು ಬಳಿಕ ಖಾಸಗಿ ಬಸ್ಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವನ ಕಾಲುಗಳು ಕಟ್ ಆಗಿವೆ. ಸ್ಥಳಕ್ಕೆ ಉಪ್ಪಾರಪೇಟೆ ಸಂಚಾರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. KSRTC ಬಸ್ ಚಾಲಕನ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದೆ. ಖಾಸಗಿ ಬಸ್‌ವೊಂದರ ಹಿಂದೆ ನಿಂತಿದ್ದ ಜನರನ್ನು ನೋಡದೆ ನಿರ್ಲಕ್ಷ್ಯದಿಂದ ಚಾಲಕ ಬಸ್ ಚಾಲನೆ ಮಾಡಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ. ಖಾಸಗಿ, KSRTC ಬಸ್‌ಗೆ ಸಿಲುಕಿ ವ್ಯಕ್ತಿ ಮೃತಪಟ್ಟಿದ್ದಾನೆ.

ಸಾರಿಗೆ ಇಲಾಖೆಯ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ ಸಾರಿಗೆ ಇಲಾಖೆಯ ನೌಕರರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಸಾರಿಗೆ ಇಲಾಖೆಯ 4 ನಿಗಮಗಳ ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿದೆ. ಜುಲೈ 1ರಿಂದ ಅನ್ವಯವಾಗುವಂತೆ ಶೇಕಡಾ 11.25ರಿಂದ ಶೇ. 21.50ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿ ಜುಲೈ 27ರಂದು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಅನ್ವಯ ನೌಕರರ ವೇತನಕ್ಕೆ ತುಟ್ಟಿ ಭತ್ಯೆ ಹೆಚ್ಚಳದ ಮೊತ್ತ ಸೇರ್ಪಡೆಯಾಗಲಿದೆ.

ಕರ್ನಾಟಕ ಸರ್ಕಾರವು ಉದ್ಯೋಗಿಗಳಿಗೆ ಶೇ 11ರಷ್ಟು ತುಟ್ಟಿಭತ್ಯೆ ನೀಡಲು ನಿರ್ಧರಿಸಿರುವ ವಿಷಯವನ್ನು ಜುಲೈ 21ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬಹಿರಂಗಪಡಿಸಿತ್ತು.

ಇದನ್ನೂ ಓದಿ: Petrol Price Today: ಸತತ 12ನೇ ದಿನವೂ ಪೆಟ್ರೋಲ್, ಡೀಸೆಲ್​ ಬೆಲೆಯಲ್ಲಿ ಬದಲಾವಣೆಗಳಿಲ್ಲ!

Published On - 8:25 am, Thu, 29 July 21

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ