AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂಬಳಗೋಡು ಠಾಣೆ ಪಿಐ ವಿರುದ್ಧ 10 ಲಕ್ಷ ರೂ.ಲಂಚ ಕೇಳಿದ ಆರೋಪ: ಪೊಲೀಸ್ ಆಯುಕ್ತರಿಗೆ ವಕೀಲರಿಂದ ದೂರು

ಕುಂಬಳಗೋಡು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮಂಜುನಾಥ ಹೂಗಾರ್ ವಿರುದ್ಧ ಲಂಚ ಆರೋಪ ಕೇಳಿಬಂದಿದೆ. ಮೂವರನ್ನು ಅಕ್ರಮ ಬಂಧನದಲ್ಲಿಟ್ಟು 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು, ನಂತರ 30 ಸಾವಿರ ರೂ. ಪಡೆದಿದ್ದಾರೆ ಎನ್ನಲಾಗಿದೆ. ವಕೀಲ ವರ್ಷಿತ್ ರೆಡ್ಡಿ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ.

ಕುಂಬಳಗೋಡು ಠಾಣೆ ಪಿಐ ವಿರುದ್ಧ 10 ಲಕ್ಷ ರೂ.ಲಂಚ ಕೇಳಿದ ಆರೋಪ: ಪೊಲೀಸ್ ಆಯುಕ್ತರಿಗೆ ವಕೀಲರಿಂದ ದೂರು
ಕುಂಬಳಗೋಡು ಠಾಣೆ ಪಿಐ ವಿರುದ್ಧ 10 ಲಕ್ಷ ರೂ.ಲಂಚ ಕೇಳಿದ ಆರೋಪ: ಪೊಲೀಸ್ ಆಯುಕ್ತರಿಗೆ ವಕೀಲರಿಂದ ದೂರು
ಶಿವಪ್ರಸಾದ್​ ಬಿ.
| Edited By: |

Updated on: Mar 05, 2026 | 11:45 AM

Share

ಬೆಂಗಳೂರು, ಮಾರ್ಚ್​ 05: ಲಂಚ ಪಡೆದ ಆರೋಪದಡಿ ಕುಂಬಳಗೋಡು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಿರುದ್ಧ ಗಂಭೀರ ದೂರು ದಾಖಲಾಗಿದೆ. ಪಿಐ ಮಂಜುನಾಥ ಹೂಗಾರ್ 10 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಟ್ಟು, ನಂತರ 30 ಸಾವಿರ ರೂ. ಪಡೆದು ಮೂವರನ್ನು ಬಿಡಿಸಿದ ಆರೋಪ ಕೇಳಿಬಂದಿದೆ. ಈ ಕುರಿತು ವಕೀಲ ವರ್ಷಿತ್ ರೆಡ್ಡಿ ಅವರು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್​ಗೆ ದೂರು ನೀಡಿದ್ದಾರೆ.

ಅಕ್ರಮ ಬಂಧನದಲ್ಲಿಟ್ಟು ಲಂಚಕ್ಕೆ ಬೇಡಿಕೆ

ಫೆಬ್ರವರಿ 25ರಂದು ಕುಂಬಳಗೋಡು ಠಾಣಾ ವ್ಯಾಪ್ತಿಯ ಎಂ.ಆರ್. ಬಾರ್‌ನಲ್ಲಿ ರಾಕೇಶ್, ಸ್ವಾಮಿ ಮತ್ತು ಗೋಪಿ ಎಂಬ ಮೂವರು ಕ್ಯಾಶಿಯರ್ ಜೊತೆ ಗಲಾಟೆ ಮಾಡಿಕೊಂಡಿದ್ದರು. ಘಟನೆ ವೇಳೆ ಬಾರ್ ಸಿಬ್ಬಂದಿ ಹೊಯ್ಸಳ ಪೊಲೀಸರಿಗೆ ಕರೆ ಮಾಡಿದ್ದು, ಸ್ಥಳಕ್ಕೆ ಬಂದ ಸಿಬ್ಬಂದಿ ಮೂವರನ್ನು ಠಾಣೆಗೆ ಕರೆದೊಯ್ದಿದ್ದರು. ಮೂವರನ್ನು ಸುಮಾರು ಮೂರು ದಿನಗಳ ಕಾಲ ಅಕ್ರಮ ಬಂಧನದಲ್ಲಿಟ್ಟುಕೊಂಡು ಹಣಕ್ಕೆ ಬೇಡಿಕೆ ಇಡಲಾಗಿದೆ ಎನ್ನಲಾಗಿದೆ. ಈ ವೇಳೆ ರಾಕೇಶ್ ತನ್ನ ಸ್ನೇಹಿತ ಕಾರ್ತಿಕ್‌ಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ನಂತರ ಕಾರ್ತಿಕ್ ಕುಂಬಳಗೋಡು ಠಾಣೆಗೆ ತೆರಳಿ ವಿಚಾರಿಸಿದಾಗ 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿರುವುದು ತಿಳಿದುಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ ಬೆಂಗಳೂರು, ಬಾಗಲಕೋಟೆ ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ!

ನಂತರ ವಕೀಲರೊಂದಿಗೆ ಠಾಣೆಗೆ ತೆರಳಿದಾಗಲೂ ಲಂಚಕ್ಕಾಗಿ ಒತ್ತಾಯ ಮಾಡಲಾಗಿದೆ ಎನ್ನಲಾಗಿದೆ. ಕೊನೆಗೆ 30 ಸಾವಿರ ರೂ. ಹಣ ಪಡೆದು ಮೂವರನ್ನು ಪೊಲೀಸರು ಬಿಡಿಸಿದ್ದಾಗಿ ಆರೋಪಿಸಲಾಗಿದೆ. ಇನ್ನು ಪಿಐ ಮಂಜುನಾಥ ಹೂಗಾರ್ ಲಂಚ ಕೇಳುತ್ತಿರುವುದಾಗಿ ಹೇಳಿದ ವೀಡಿಯೋವೂ ಸೆರೆಯಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರಿಗೆ ಮನವಿ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!