AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿನ ಸಿಎಂ ಮಾಡಿ: ಮತ್ತೆ ಮೌನ ಮುರಿದ ಡಿಸಿಎಂ ಬೆಂಬಲಿಗರು

ಕರ್ನಾಟಕದಲ್ಲಿ 140 ಸ್ಥಾನ ಗೆದ್ದು ಕಾಂಗ್ರೆಸ್​ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ಡಿ.ಕೆ. ಶಿವಕುಮಾರ್​ ಅವರ ಶ್ರಮವಿದೆ. ಹೀಗಾಗಿ ಕಾರ್ಯಕರ್ತರು ಡಿಕೆಶಿ​ ಮುಖ್ಯಮಂತ್ರಿ ಆಗಬೇಕೆಂದು ಅಪೇಕ್ಷೆ ಪಡುತ್ತಿದ್ದು, ಸ್ಥಾನಮಾನ ಕೊಡುವ ಬಗ್ಗೆ ಹೈಕಮಾಂಡ್ ಚಿಂತನೆ ಮಾಡಬೇಕು ಎಂದು ಕುಣಿಗಲ್ ಕ್ಷೇತ್ರದ ಶಾಸಕ ಡಾ.ರಂಗನಾಥ್ ಆಗ್ರಹಿಸಿದ್ದಾರೆ.

ಡಿಕೆಶಿನ ಸಿಎಂ ಮಾಡಿ: ಮತ್ತೆ ಮೌನ ಮುರಿದ ಡಿಸಿಎಂ ಬೆಂಬಲಿಗರು
ಡಿಸಿಎಂ ಡಿಕೆಶಿ ಪರ ಬೆಂಬಲಿಗರ ಬ್ಯಾಟಿಂಗ್​
ಪ್ರಸನ್ನ ಗಾಂವ್ಕರ್​
| Edited By: |

Updated on: Oct 01, 2025 | 2:25 PM

Share

ಬೆಂಗಳೂರು, ಅಕ್ಟೋಬರ್​ 01: ಕಳೆದ ಕೆಲ ದಿನಗಳಿಂದ ಸ್ವಲ್ಪ ಸೈಲೆಂಟ್​ ಆಗಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)​ ಬೆಂಬಲಿಗ ಶಾಸಕರು ಮತ್ತೆ ಮೌನ ಮುರಿಯಲು ಆರಂಭಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಕರ್ನಾಟಕದಲ್ಲಿ ಕಾಂಗ್ರೆಸ್​ ಪಕ್ಷ 140 ಸ್ಥಾನ ಗೆಲ್ಲುವಲ್ಲಿ ಡಿಕೆಶಿ ಶ್ರಮವಿದೆ ಎಂದು ಕುಣಿಗಲ್ ಕ್ಷೇತ್ರದ ಶಾಸಕ ಡಾ.ರಂಗನಾಥ್ ಹೇಳಿದ್ದಾರೆ. ಡಿ.ಕೆ.ಶಿವಕುಮಾರ್ ಒಂದಲ್ಲ ಒಂದು ದಿನ ಮುಖ್ಯಮಂತ್ರಿ ಆಗುತ್ತಾರೆಂಬ ಭವಿಷ್ಯವನ್ನೂ ನುಡಿದ್ದಾರೆ.

‘ಡಿಸಿಎಂ ಡಿಕೆಶಿ ನನ್ನ ರಾಜಕೀಯ ಗುರು’

ಕಾರ್ಯಕರ್ತರು ಡಿ.ಕೆ. ಶಿವಕುಮಾರ್​ ಅವರು ಮುಖ್ಯಮಂತ್ರಿ ಆಗಬೇಕೆಂದು ಅಪೇಕ್ಷೆ ಪಡುತ್ತಿದ್ದಾರೆ. ಹೀಗಾಗಿ ಡಿಕೆಶಿಗೆ ಸ್ಥಾನಮಾನ ಕೊಡುವ ಬಗ್ಗೆ ಹೈಕಮಾಂಡ್ ಚಿಂತನೆ ಮಾಡಬೇಕು. ಹೈಕಮಾಂಡ್ ನಿರ್ಧಾರಕ್ಕಾಗಿ ಪಕ್ಷದ ಕಾರ್ಯಕರ್ತರು ಕಾಯುತ್ತಿದ್ದಾರೆ. ರಾಜಕೀಯ ಅನ್ನೋದು ಕೃಷಿ ಇದ್ದ ಹಾಗೆ. ಕೃಷಿಯಲ್ಲಿ ಶ್ರಮ ಹಾಕಿದಂತೆ ರಾಜಕೀಯದಲ್ಲಿ ಸಮಸ್ಯೆ ಬಗೆಹರಿಸಬೇಕು ಎಂದು ರಂಗನಾಥ್​ ಆಗ್ರಹಿಸಿದ್ದಾರೆ. ಡಿ.ಕೆ.ಶಿವಕುಮಾರ್ ಹಾರ್ಡ್​ಶಿಪ್ ನಂಬಿ ಕೆಲಸ ಮಾಡುವವರಾಗಿದ್ದು, ಬೆಳಗ್ಗೆ 8 ಗಂಟೆಯಿಂದ ಮಧ್ಯರಾತ್ರಿವರೆಗೂ ದುಡಿಯುತ್ತಾರೆ. ಅವರಿಗೆ ಭಗವಂತನ ಆಶೀರ್ವಾದ ಇರುವುದರಿಂದ ಸಿಎಂ ಆಗ್ತಾರೆ. ಡಿಸಿಎಂ ಡಿ.ಕೆ.ಶಿವಕುಮಾರ್​ ನಮಗೆ ರಾಜಕೀಯ ಗುರುಗಳು. ಸದ್ಯ ಮುಖ್ಯಮಂತ್ರಿ ಕುರ್ಚಿಯಲ್ಲಿ ಇರುವ ಸಿದ್ದರಾಮಯ್ಯನವರು ದೇಶಕ್ಕೆ ಮಾದರಿಯಾಗುವ ಕೆಲಸ ಮಾಡ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಕುಣಿಗಲ್ ಕ್ಷೇತ್ರದ ಶಾಸಕ ಡಾ.ರಂಗನಾಥ್ ಹೇಳಿದ್ದಾರೆ.

ಶಾಸಕ ಡಾ.ರಂಗನಾಥ್ ಹೇಳಿದ್ದೇನು?

‘ನವೆಂಬರ್​ ನಲ್ಲಿ ಡಿಕೆಶಿ ಸಿಎಂ’

ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನವೆಂಬರ್​ ನಲ್ಲಿ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಹೇಳಿದ್ದಾರೆ. ಡಿಕೆಶಿ ಮುಖ್ಯಮಂತ್ರಿ ಅಗಬೇಕು ಎಂಬುದು ಹಳೆಮೈಸೂರು ಭಾಗದವರಾದ ನಮ್ಮೆಲ್ಲರ ಇಚ್ಛೆ.ಆದರೆ ಅಂತಿಮ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳುತ್ತದೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​