AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ರಕರ್ತರಿಗೆ ಉಚಿತ ಬಸ್​ ಘೋಷಣೆ ಹಿನ್ನೆಲೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಕೆಯುಡಬ್ಲ್ಯೂಜೆ ವತಿಯಿಂದ ಸನ್ಮಾನ

ರಾಜ್ಯ ಬಜೆಟ್​ನಲ್ಲಿ ರಾಜ್ಯದ ಪತ್ರಕರ್ತರಿಗೆ ಉಚಿತ ಗ್ರಾಮೀಣ ಬಸ್​ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಸಾರಿಗೆ ಸಚಿವ‌ ರಾಮಲಿಂಗಾರೆಡ್ಡಿ‌ ಅವರನ್ನು ವಿಧಾನಸೌಧದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸನ್ಮಾನಿಸಿದರು. ಈ ವೇಳೆ ಬೇಡಿಕೆ ಈಡೇರಿದ ಸಂದರ್ಭವನ್ನು ಮೆಲುಕು ಹಾಕಿದರು.

ಪತ್ರಕರ್ತರಿಗೆ ಉಚಿತ ಬಸ್​ ಘೋಷಣೆ ಹಿನ್ನೆಲೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಕೆಯುಡಬ್ಲ್ಯೂಜೆ ವತಿಯಿಂದ ಸನ್ಮಾನ
ಸಚಿವ‌ ರಾಮಲಿಂಗಾರೆಡ್ಡಿ‌ಗೆ ಗಣ್ಯರಿಂದ ಸನ್ಮಾನ
TV9 Web
| Edited By: |

Updated on: Feb 22, 2024 | 9:06 PM

Share

ಬೆಂಗಳೂರು, ಫೆಬ್ರವರಿ 22: ರಾಜ್ಯ ಬಜೆಟ್​ನಲ್ಲಿ ರಾಜ್ಯದ ಪತ್ರಕರ್ತರಿಗೆ ಉಚಿತ ಗ್ರಾಮೀಣ ಬಸ್​ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಸಾರಿಗೆ ಸಚಿವ‌ ರಾಮಲಿಂಗಾರೆಡ್ಡಿ‌ (RamalingaReddy) ಅವರನ್ನು ವಿಧಾನಸೌಧದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಬೆಂಗಳೂರು ನಗರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್, ಜಿಲ್ಲಾ ಘಟಕದ ಉಪಾಧ್ಯಕ್ಷ ಕೆ.ಎಂ. ಜಿಕ್ರಿಯಾ ಉಪಸ್ಥಿತರಿದ್ದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ದಾವಣಗೆರೆಯಲ್ಲಿ ಹಮ್ಮಿಕೊಂಡಿದ್ದ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರು ಕೆಯುಡಬ್ಲ್ಯೂಜೆ ಬೇಡಿಕೆಗೆ ಸ್ಪಂದಿಸಿ ಭರವಸೆ ನೀಡಿದ್ದರು.

ಇದನ್ನೂ ಓದಿ: ದಾವಣಗೆರೆಯಲ್ಲಿ ಫೆ 3 ಮತ್ತು 4ರಂದು ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ

ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್​ನಲ್ಲಿ ಅದಕ್ಕೆ ಶಿಫಾರಸು ಮಾಡುವುದಾಗಿ ಅಂದು ಸಾರಿಗೆ ಸಚಿವರು ಸಂಘದ ಪದಾಧಿಕಾರಿಗಳಿಗೆ ಭರವಸೆಯನ್ನು ನೀಡಿದ್ದನ್ನು ಸ್ಮರಿಸಬಹುದಾಗಿದೆ. ಸನ್ಮಾನ ಸಂದರ್ಭದಲ್ಲಿಯೂ ಸಚಿವರು ಅಂದಿನ ಘಟನೆ ಮತ್ತು ಬೇಡಿಕೆ ಈಡೇರಿದ ಸಂದರ್ಭವನ್ನು ಮೆಲುಕು ಹಾಕಿದರು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು ದಶಕಗಳ ಕನಸು ನನಸಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿದ್ದರು. ಹಾಗಾಗಿ ಇತ್ತೀಚೆಗೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಕೂಡ ಧನ್ಯವಾದ ತಿಳಿಸಿದ್ದರು.

ಇದನ್ನೂ ಓದಿ: KUWJ ಹೋರಾಟದ ಫಲ: ನನಸಾದ ಪತ್ರಕರ್ತರ ಬಸ್ ಪಾಸ್ ಯೋಜನೆ, ಸಿಎಂಗೆ ಧನ್ಯವಾದ ತಿಳಿಸಿದ ಶಿವಾನಂದ ತಗಡೂರು

ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲಾ ಹಂತದಲ್ಲಿಯೂ ಸಹಕಾರ ನೀಡಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೂ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ವಿಶೇಷವಾಗಿ ಅಭಿನಂದನೆ ಸಲ್ಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ